LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭದ್ರಾ ಕಾಮಗಾರಿ ವೀಕ್ಷಣೆ: ತ್ವರಿತಗತಿಯಲ್ಲಿ ನೀರು ತಲುಪಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಚಿತ್ರದುರ್ಗಕ್ಕೆ ನೀರ್ಹರಿಸುವ ಭರದ ಸಿದ್ಧತೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: 
ಭದ್ರಾ ನೀರನ್ನ ಗೋನೂರು ಕೆರೆಗೆ ಹರಿಸುವ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾ ಮೇಲ್ದಂಡೆ ಯೋಜನೆಯ ಮೂಲವಾದ ತುಂಗಾ ಜಲಾಶಯ ಸೇರಿದಂತೆ ವಿವಿಧ ಕಾಮಗಾರಿ ಪ್ರದೇಶಗಳ ಶಾಸಕರಾದ ಟಿ.ರಘುಮೂರ್ತಿ
, ಕೆ.ಸಿ ವೀರೇಂದ್ರ ಪಪ್ಪಿ ಸೇರಿದಂತೆ ಗೋವಿಂದಪ್ಪ, ಡಾ.ಎಂ ಚಂದ್ರಪ್ಪ ವೀಕ್ಷಣೆ ನಡೆಸಿದ್ದಾರೆ.

ತುಂಗಾ ಜಲಾಶಯದಿಂದ ಭದ್ರಾ ಜಲಾಶಯದವರೆಗೆ ಹಾಗೂ ಅಲ್ಲಿಂದ ಚಿತ್ರದುರ್ಗ ಶಾಖಾ ಕಾಲುವೆ, ವೈ-ಜಂಕ್ಷನ್ ಮತ್ತು ತುಮಕೂರು ಕಾಲುವೆ ಜಂಕ್ಷನ್‌ಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿ, ಯೋಜನೆಯ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು.

ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ನಿಗದಿತ ಅವಧಿಯೊಳಗೆ ಭದ್ರಾ ನೀರು ಚಿತ್ರದುರ್ಗ ಸೇರಿದಂತೆ ಯೋಜನಾ ವ್ಯಾಪ್ತಿಯ ಪ್ರದೇಶಗಳಿಗೆ ತಲುಪುವಂತೆ ಸಂಬಂಧಿತ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಯಿತು.

ಈ ಒಂದು ಸಂದರ್ಭದಲ್ಲಿ ಶಾಸಕ ಕೆ.ಸಿ ವಿರೇಂದ್ರ ಪಪ್ಪಿ ಮಾತನಾಡಿ ಚಿತ್ರದುರ್ಗದ ಬಹುದಿನಗಳ ಕನಸಾದ ಭದ್ರಾ ನೀರು ಕೆರೆಗಳಿಗೆ ಹರಿಸುವ ಯೋಜನೆ ಇನ್ನೇನು ಕೆಲವೇ ದಿನಗಳಲ್ಲಿ ನನಸಾಗುವುದು ಅದರ ಸಿದ್ಧತೆಯನ್ನ ಈಗಾಗಲೇ ಭದ್ರ ಮೇಲ್ದಂಡೆ ಯೋಜನೆ ಅಧಿಕಾರಿಗಳು ಬಿಡುವಿಲ್ಲದೆ ಕಾರ್ಯನರ್ಮುಖವಾಗಿ ಕೆಲಸ ಮಾಡುತ್ತಿದ್ದಾರೆ, ಭದ್ರಾ ನೀರು ಹರಿಯುವಿಕೆಯ ನಿರೀಕ್ಷೆಗಾಗಿ ರೈತರು ಕಾಯುತ್ತಿದ್ದಾರೆ, ಇನ್ನೇನು ಕೆಲವೇ ದಿನಗಳಲ್ಲಿ ಚಿತ್ರದುರ್ಗದ ಬಹುತೇಕ ಎಲ್ಲಾ ಕೆರೆಗಳಿಗೆ ನೀರನ್ನು ಉಡಪಡಿಸಲಾಗುವುದು ಇದರಿಂದ ರೈತರ ಬದುಕು ಹಸನಾಗುವುದು ಎಂದು ತಿಳಿಸಿದರು.

news_1779545416_1_985.webp

 

ಭದ್ರಾ ಜಲಾಶಯದಿಂದ ಚಿತ್ರದುರ್ಗಕ್ಕೆ ಕಾಲವೇ ಮುಖಾಂತರ ನೀರು ಹರಿಸುವ ಯೋಜನೆ ಎಲ್ಲವೂ ಸಹ ಕುಂಠಿತವಾಗದೆ ಯಾರಿಗೂ ಕೂಡ ತೊಂದರೆ ಆಗದಂತೆ ನೀರನ್ನ ತರುವಂತಹ ಕೆಲಸವನ್ನು ಅಧಿಕಾರಿಗಳು ವಹಿಸಿಕೊಳ್ಳಬೇಕು ನಿಮ್ಮಗಳಿಗೆ ಪೂರಕವಾಗಿ ಬೆಂಬಲವಾಗಿ ಸರ್ಕಾರ ಇರುತ್ತದೆ, ರೈತರ ಅನುಕೂಲಕ್ಕಾಗಿ ಈ ಒಂದು ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ ಹಾಗಾಗಿ ಶೀಘ್ರವೇ ತೊರೆತಗತಿಯಲ್ಲಿ ಉಳಿದಂತಹ ಕೆಲಸಗಳು ಮುಗಿಸಿ ರೈತರಿಗೆ ನೀರು ದೊರಕಿಸಿ ಕೊಡುವಂತ ಜವಾಬ್ದಾರಿಯನ್ನ ಭದ್ರಾ ಮೇಲ್ದಂಡೆ ಯೋಜನೆ ಅಧಿಕಾರಗಳು ಅಧಿಕಾರಿಗಳಿಗೆ ತಿಳಿಸಿದರು.

ಶಿವಮೊಗ್ಗ ಜಿಲ್ಲೆಯ ಮಂಡಗದ್ದೆ ಬಳಿ ಇರುವ ತುಂಗದಿಂದ ಭದ್ರಾ ಡ್ಯಾಮ್ ಗೆ ಬರುವಂತಹ ನೀರಿನ ಕಾಮಗಾರಿ ವೀಕ್ಷಣೆ ಹಾಗೂ ಭದ್ರಾವತಿ, ಲಕ್ಕವಳ್ಳಿ, ಕಡೂರು, ಅಜಾಂಪುರ ವೈ ಜಂಕ್ಷನ್, ಹೆಗಡೆಹಾಳ್, ಅಭಿನಹೊಳಲು ಶಾಖ ಕಾಲುವೆ ಬಳಿ ತೆರಳಿ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ನಿಗದಿತ ಅವಧಿಯೊಳಗೆ ಭದ್ರಾ ನೀರು ಚಿತ್ರದುರ್ಗ ಸೇರಿದಂತೆ ಯೋಜನಾ ವ್ಯಾಪ್ತಿಯ ಪ್ರದೇಶಗಳಿಗೆ ತಲುಪುವಂತೆ ಸಂಬಂಧಿತ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಚಿತ್ರದುರ್ಗದ ಮಾಜಿ ಸಂಸದ ಬಿ. ಎನ್ ಚಂದ್ರಪ್ಪ, ವಿಶ್ವೇಶ್ವರಯ್ಯ ಜಲ ನಿಯಮಿತ  ವ್ಯವಸ್ಥಾಪಕ ನಿರ್ದೇಶಕ ಸಣ್ಣ ಚಿತ್ತಯ್ಯ, ಭದ್ರ ಮೇಲ್ದಂಡೆ ಯೋಜನೆ ಚಿತ್ರದುರ್ಗ ವಲಯ ಮುಖ್ಯ ಇಂಜಿನಿಯರ್ ಎಫ್.ಹೆಚ್. ಲಂಬಾಣಿ, ಭದ್ರಾ ಮೇಲ್ದಂಡೆ ಯೋಜನೆಯ ಅಧಿಕ್ಷಕ ಇಂಜಿನಿಯರ್ ಹರೀಶ್ , ಉಪ ಮುಖ್ಯ ಅಧಿಕ್ಷಕ ಇಂಜಿನಿಯರ್ ಪುಷ್ಪಲತಾ, ಕಾರ್ಯ ಪಾಲಕ ಇಂಜಿನಿಯರ್ ಹರ್ಷ, ಸಹಾಯಕ ಕಾರ್ಯ ಪಾಲಕ ಇಂಜಿನಿಯರ್ ಕಿರಣ್ಹಾಗೂ ಭದ್ರಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳು ಉಪಸ್ಥಿತರಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಣಿ ವಿಲಾಸ ಸಾಗರ ಹಾಗೂ ಗಾಯತ್ರಿ ಜಲಾಶಯಗಳಿಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿರ್ಬಂಧಆಗಸ್ಟ್ 12ಕ್ಕೆ 'ಶತಮಾನದ ಖಗ್ರಾಸ ಸೂರ್ಯಗ್ರಹಣ': ಭಾರತದಲ್ಲಿ ಗೋಚರವಿಲ್ಲ, ಯಾವುದೇ ಆಚರಣೆ ಅಗತ್ಯವಿಲ್ಲರಾಣಿ ಎಲಿಜಬೆತ್ ಹೊಗಳಿದ್ದ ನಮ್ಮ ವಿಧಾನಸೌಧವೇ ನನಗೆ ಸ್ಫೂರ್ತಿ-ಟಿ.ಬಿ ಜಯಚಂದ್ರಕೆಪಿಸಿಸಿ ಅಧ್ಯಕ್ಷರ ಆಶೀರ್ವಾದ ಸಿಕ್ಕಿದೆ- ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ ಯುವ ಜನತೆಗೆ ಯೋಗ, ವ್ಯಾಯಾಮ ಅತ್ಯಂತ ಅವಶ್ಯ:ದಿವ್ಯ ಜ್ಞಾನಾನಂದ ಶ್ರೀಎಸ್. ನಾಗೇನಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್ಸವರ್ಣೀಯ ಮುಖಂಡರಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ-ಮಾರಸಂದ್ರ ಮುನಿಯಪ್ಪಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆಮೈಸೂರಲ್ಲಿ  'ಜೋಡೆತ್ತು' ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್