Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶವ ಸಂಸ್ಕಾರಕ್ಕೆ ಅಡ್ಡಿ, ಸಾರ್ವಜನಿಕರ ಆಕ್ರೋಶ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ವಿವೇಕಾನಂದ ನಗರದ ಬಳಿ ಇರುವ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರಕ್ಕೆ ವ್ಯಕ್ತಿಯೊಬ್ಬರು ಅಡ್ಡಿ ಪಡಿಸಿದ್ದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

        ತೇರಿನ ಬೀದಿಯ ಮಹಿಳೆಯೊಬ್ಬರು ಮೃತಪಟ್ಟಿದ್ದು ವಿವೇಕಾನಂದ ನಗರದ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರಕ್ಕೆ ಹೋದಾಗ ಜಾಗದ ಮಾಲೀಕನೆಂದು ಹೇಳಿಕೊಂಡ ವ್ಯಕ್ತಿಯೊಬ್ಬರು ಸ್ಮಶಾನದ ದಾರಿಯನ್ನು ಮುಚ್ಚಿ ಅಡ್ಡಿ ಪಡಿಸಿದರು. ಇದರಿಂದ ಸ್ಥಳೀಯ ಸಾರ್ವಜನಿಕರು ಆಕ್ರೋಶಗೊಂಡು ಪೊಲೀಸ್ ಠಾಣೆಗೆ ದೂರು ನೀಡಿದ್ದರಿಂದ ಸ್ಥಳಕ್ಕೆ ಆಗಮಿಸಿದ ಪೊಲೀಸರು ದೂರಿಗೆ ಸಂಬಂಧಿಸಿದಂತೆ ಅಹವಾಲು ಆಲಿಸಿ ದರು.

      ಬಹು ದಿನಗಳಿಂದ ಸ್ಮಶಾನದ ದಾರಿ ವಿಚಾರವಾಗಿ ಸಾರ್ವಜನಿಕರು ಸ್ಥಳೀಯ ಆಡಳಿತಕ್ಕೆ ದೂರು ನೀಡಿದರೂ ಯಾವುದೇ ಕ್ರಮ ಜರುಗಿಸದೆ ಕಂದಾಯ ಇಲಾಖೆ ಉದಾಸೀನ ದೋರಣೆ ತಾಳಿದೆ. ಪೂರ್ವಿಕರ ಕಾಲದಿಂದಲೂ ಹಲವಾರು ಸಮುದಾಯಗಳವರು ಇಲ್ಲಿ ಅಂತ್ಯ ಸಂಸ್ಕಾರ ಮಾಡುತ್ತಿದ್ದರು.

ಆದರೆ ವ್ಯಕ್ತಿಯೊಬ್ಬರು ಸ್ಮಶಾನದ ಜಾಗ ತಮ್ಮದೆಂದು ಸ್ಮಶಾನಕ್ಕೆ ಹೋಗುವ ದಾರಿಯನ್ನು ಕಂಪೌಂಡ್ ಹಾಕುವ ಮೂಲಕ ಅಂತ್ಯಸಂಸ್ಕಾರಕ್ಕೆ ಹೋಗಲು ತೊಂದರೆ ಕೊಡುತ್ತಿದ್ದಾರೆ. ಪ್ರತಿ ಬಾರಿ ಶವಸಂಸ್ಕಾರಕ್ಕೆ ಬಂದಾಗಲೆಲ್ಲ ವ್ಯಕ್ತಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾರೆ.

ಇದು ಕೂಡಲೇ ಇತ್ಯರ್ಥವಾಗಿ ಸ್ಮಶಾನದ ಭೂಮಿಯನ್ನು ಒತ್ತುವರಿ ಮಾಡಿಕೊಂಡವರಿಂದ ಬಿಡಿಸಬೇಕೆಂದು ಸ್ಥಳೀಯರಾದ ಸಂಜೀವ್ ನಾಯಕ್ ಹಾಗೂ ಡಿ. ಪಿ. ಆಂಜಿನೇಯ ಸೇರಿದಂತೆ ಹಲವಾರು ಸಮುದಾಯಗಳ ಮುಖಂಡರು ಪೊಲೀಸ್ ಇಲಾಖೆ ಹಾಗೂ ಕಂದಾಯ ಅಧಿಕಾರಿಗಳನ್ನು ಒತ್ತಾಯಿಸಿದರು.

ಅಂತ್ಯ ಸಂಸ್ಕಾರ ಕ್ಕೆ ಅಡ್ಡಿ ಪಡಿಸಿದರೆ ತಾಲೂಕು ಕಚೇರಿಯ ಮುಂಭಾಗದಲ್ಲಿ ಅಂತ್ಯ ಸಂಸ್ಕಾರ ಮಾಡುವುದಾಗಿ ಮೃತರ ಸಂಬಂದಿಕರು ಪಟ್ಟು ಹಿಡಿದಾಗ, ಡಿವೈಎಸ್ ಪಿ ಪಾಂಡುರಂಗ ಹಾಗೂ ಇನ್ಸ್ಪೆಕ್ಟರ್ ಡಾ. ನವೀನ್ ಕುಮಾರ್ ಅಡ್ಡಿ ಪಡಿಸಿದ ವ್ಯಕ್ತಿಗೆ ತಿಳಿಹೇಳಿ ಅಂತ್ಯಸಂಸ್ಕಾರಕ್ಕೆ ಅನುವು ಮಾಡಿಕೊಟ್ಟರು. ಜೊತೆಗೆ ಜಾಗದ ಒತ್ತುವರಿಗೆ ಸಂಬಂಧಿಸಿದಂತೆ ಒಂದು ವಾರದ ಒಳಗಾಗಿ ಸ್ಮಶಾನದ ಜಾಗಕ್ಕೆ ಸಂಬಂದಿಸಿದ ದಾಖಲೆಗಳನ್ನು ಪರಿಶೀಲಿಸಿ ಕಂದಾಯ ಇಲಾಖೆಯವರಿಂದ ಮಾಹಿತಿ ಪಡೆದು ಸಮಸ್ಯೆಯನ್ನು ಪರಿಹಾರಿಸುವುದಾಗಿ ಹೇಳಿದರು.

       ದಶಕಗಳಿಂದ ಹಲವಾರು ಸಮುದಾಯಗಳು ಅಂತ್ಯ ಸಂಸ್ಕಾರ ಮಾಡುತ್ತಿದ್ದ ಸ್ಮಶಾನದ ಜಾಗ ಭೂ ಗಳ್ಳರಿಂದ ಒತ್ತುವರಿಯಾಗಿದೆ. ಇದರ ಬಗ್ಗೆ ಹಲವಾರು ಬಾರಿ ಕಂದಾಯ ಇಲಾಖೆಗೆ ದೂರು ಕೊಟ್ಟರೂ ಮೌನ ವಹಿಸಿದೆ.

ಸ್ಥಳೀಯ ಆಡಳಿತದ ದಿವ್ಯ ನಿರ್ಲಕ್ಷ್ಯವನ್ನು ಖಂಡಿಸಿ ಪ್ರತಿಭಟನೆ ಸಹಾ ಮಾಡಲಾಗಿದೆ. ಆದರೂ ಸಂಬಂಧ ಪಟ್ಟವರು ಗಮನ ಹಾರಿಸಿಲ್ಲ ಈ ಭಾಗದಲ್ಲಿ ಸುಮಾರು ಆರು ಎಕರೆ ಸರ್ಕಾರಿ ಭೂಮಿ ಇದ್ದು ಎಲ್ಲವೂ ಒತ್ತುವರಿಯಾಗಿದೆ. ಸಾಲದ್ದಕ್ಕೆ ಸಾರ್ವಜನಿಕ ಸ್ಮಶಾನದ ಜಾಗವನ್ನು ಬಿಡದೆ ಸಾರ್ವಜನಿಕರ ಅಂತ್ಯ ಸಂಸ್ಕಾರಕ್ಕೆ ತೊಂದರೆಯಾಗಿದೆ. ಇದು ಕೂಡಲೇ ಬಗೆ ಹರಿಸದಿದ್ದರೆ ಹೋರಾಟವನ್ನು ತೀವ್ರ ಗೊ ಳಿಸಬೇಕಾಗುವುದೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾವಣ್ಯ ಕಾಲೇಜಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಜಿಕೆವಿಕೆಯಲ್ಲಿ ವೈವಿಧ್ಯಮಯ ‘ರೈತ ಸಂತೆ’: ಗೋಧಿ ಪಾಯಸ, ಬಟರ್ ಫ್ರೂಟ್ ಹಾಗೂ ಅವರೆಕಾಳು ಸಿಪ್ಪೆ ತೆಗೆಯುವ ಯಂತ್ರಕ್ಕೆ ಭಾರಿ ಬೇಡಿಕೆಜುಲೈ 10 ರಿಂದ 12ರವರೆಗೆ ಬೆಂಗಳೂರಿನ ಜಿಕೆವಿಕೆಯಲ್ಲಿ “ಸಸ್ಯ ಸಂತೆ” ಆಯೋಜನೆ, ಮಳಿಗೆ ಕಾಯ್ದಿರಿಸಲು ಅವಕಾಶಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‘ಕಲ್ಲಿನ ಕೋಟೆ ಕಾವ್ಯೋತ್ಸವ’ ವೈಭವ: ಆರು ಪ್ರಮುಖ ಕೃತಿಗಳ ಲೋಕಾರ್ಪಣೆ, ಕವಿಗೋಷ್ಠಿ ಯಶಸ್ವಿ!ಜೂನ್ 29ರಂದು ಜಿ.ಎಸ್.ಉಜ್ಜನಪ್ಪ ಅವರ ನೆನಪಿನಲ್ಲಿ “ಸ್ವಾತಂತ್ರ್ಯದ ಓಟ” ನಾಟಕ ಪ್ರದರ್ಶನಕೆಂಪೇಗೌಡರ ದೂರದೃಷ್ಟಿ ಆಡಳಿತಗಾರರಿಗೆ ಆದರ್ಶ- ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ50 ವರ್ಷಗಳ ಬಳಿಕ ಒಂದಾದ ಬಾಲ್ಯದ ಗೆಳೆಯರು: ಕಣ್ಣಾಲಿಗಳು ತುಂಬಿ ಬಂದ ಚಿನ್ಮುಲ್ಲಾದ್ರಿ ಶಾಲೆಯ ‘ಸುವರ್ಣ ಸಂಭ್ರಮ’!ಸಿಎಂಗೆ ಸೋಮಣ್ಣ ಕಿವಿಮಾತು, ವಿಜಯೇಂದ್ರಗೆ ನಿರಾಣಿ ಸಲಹೆ: ದಾವಣಗೆರೆಯಲ್ಲಿ ಬಿಜೆಪಿ ನಾಯಕರ ಭರ್ಜರಿ ಬ್ಯಾಟಿಂಗ್!ಬೆಂಗಳೂರಿಗೆ ಸಿಕ್ತು ಹೊಸ ಮೆಗಾ ಕನೆಕ್ಟಿವಿಟಿ: ಎಸ್.ಎಂ. ಕೃಷ್ಣ ಹೆಸರಿನ ಭವ್ಯ 'ದಶಪಥ ರಸ್ತೆ' ಲೋಕಾರ್ಪಣೆ!