Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತರಳಬಾಳು ಶ್ರೀಗಳಿಂದ ತುಪ್ಪದಹಳ್ಳಿ ಕೆರೆಗೆ ಬಾಗಿನ ಅರ್ಪಣೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮನುಷ್ಯರ ಪ್ರಯತ್ನ ದೈವಿ ಕೃಪೆಯ ಫಲವಾಗಿ ಅವಳಿ ಯೋಜನೆಯ ಜಗಳೂರು ಕ್ಷೇತ್ರದ 57 ಕೆರೆಗಳು, ಭರಮಸಾಗರದ ವ್ಯಾಪ್ತಿಯ ಕೆರೆಗಳು ನದಿಯ ರೀತಿಯಲ್ಲಿ ತುಂಬಿ ಹರಿಯುತ್ತಿವೆ. ಇದಕ್ಕೆ ತುಪ್ಪದಹಳ್ಳಿಯ ಕೆರೆಯು ಹಳ್ಳದ ರೀತಿಯಲ್ಲಿ

ಹರಿಯದೇ ನದಿಯ ನೀರಾಗಿ ಹರಿಯುತ್ತಿರುವುದೇ ಪ್ರತ್ಯಕ್ಷ ಸಾಕ್ಷಿ ಎಂದು ಶ್ರೀ ತರಳಬಾಳು ಜಗದ್ಗುರು ಶ್ರೀ ೧೧೦೮ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಬಣ್ಣಿಸಿದರು.

ಜಗಳೂರು ತಾಲ್ಲೂಕಿನ ತುಪ್ಪದಹಳ್ಳಿ ಕೆರೆ ಕೋಡಿ ಬಿದ್ದ ಹಿನ್ನೆಲೆಯಲ್ಲಿ ತುಪ್ಪದಹಳ್ಳಿ ಕೆರೆಗೆ ಶ್ರೀ ಜಗದ್ಗುರುಗಳವರು ಬಾಗಿನ ಅರ್ಪಿಸಿದ ನಂತರ ತುಪ್ಪದಹಳ್ಳಿ, ಹೆಮ್ಮನಬೇತೂರು, ಬಿಳಿಚೋಡು,ಅಸಗೋಡು ಕುರುಡಿ ಸೇರಿದಂತೆ ಸುತ್ತ-ಮುತ್ತಲಿನ ಪ್ರದೇಶದ ರೈತರು ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಭಾಗವಹಿಸಿ ಸ್ವಾಮೀಜಿ ಮಾತನಾಡಿದರು.

ಮೊಬೈಲ್ ನೆಟ್ ವರ್ಕ್ ತರ ನೀರಿನ ನೆಟ್ವರ್ಕ್ಇದೆ. ಶಾಂತಿವನದ ಜಲಾಶಯ ಕೋಡಿ ಬಿದ್ದರೆ ಭರಮಸಾಗರ ಕೆರೆ ತುಂಬಿದರೆ, ತುಪ್ಪದಹಳ್ಳಿ ಕೆರೆ ತುಂಬಿದ ನಂತರ ಜಗಳೂರಿನಿಂದ ಹರಪನಹಳ್ಳಿ ತಾಲ್ಲೂಕಿನ ಮಾರ್ಗವಾಗಿ ಡಿ.ಬಿ.ಡ್ಯಾಂಗೆ ನೀರು ಹರಿದು ಹೋಗುತ್ತದೆ ಎಂದರು.

ದಾವಣಗೆರೆ ತಾಲ್ಲೂಕಿನ 22 ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ನೀರು ತುಂಬಿಸುವ ಯೋಜನೆಗೆ ಹೊಸ ಪೈಪಲೈನ್ ಅಳವಡಿಸುವ ಯೋಜನೆಗೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಕೊಡಲು ಸೂಚಿಸಿದ್ದು, ತಕ್ಷಣವೇ ಪೂರ್ಣವಾಗಿ ಹಾಳವಾಗಿರುವ ಹಲವು ಪೈಪ್ಗಳನ್ನು ತೆರುವುಗೊಳಿಸಿ ಅಲ್ಲಿ ತುರ್ತಾಗಿ ಹೊಸ ಪೈಪ್ಗಳನ್ನು ಹಾಕಿ ನೀರು ಹರಿಸಲು ತಿಳಿಸಲಾಗಿದೆ.

 ಜಗಳೂರು ಹಾಗೂ ಭರಮಸಾಗರದ ಎರಡು ಅವಳಿ ನೀರಾವರಿ ಯೋಜನೆಗಳಿಂದ ಬತ್ತಿರುವಕೆರೆಗಳಿಗೆ ಜಲಸಿರಿಯಾಗಿ ನೀರು ಬಂದಿದೆ. ನೀರಿಗಾಗಿ ಹಂಬಲಿಸಿದ ಜನರಿಗೆ ಜಲದಾರೆಯಾಗಿ ಗಂಗೆ ಬಂದಿದ್ದಾಳೆ ಎಂದರು.

ಜಗಳೂರು ಶಾಸಕ ಬಿ.ದೇವೇಂದ್ರಪ್ಪ ಮಾತನಾಡಿ ಜಗಳೂರು ಕೆರೆ ನೀರು ತುಂಬಿಸವ ಯೋಜನೆಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮೂರು ಪಕ್ಷಗಳ ಸರ್ಕಾರಗಳು, ಕ್ಷೇತ್ರದ ಮೂವರು ಶಾಸಕರು ಕೆಲಸ ಮಾಡಿದರೆ ಸಿರಿಗೆರೆ ಶ್ರೀ ಒಬ್ಬರೇ ನೇತೃತ್ವ ವಹಿಸಿದ್ದರ ಫಲವಾಗಿ 57 ಕೆರೆಗಳಿಗೆ ತುಂಗೆ ಭದ್ರೆಯಿಂದ ನೀರು ಬಂದಿದ್ದು, ರೈತರಾದ ನಾವುಗಳು ಸದ್ದಳಿಕೆ ಮಾಡಿಕೊಂಡು ಬದುಕು ಬಂಗಾರ ಮಾಡಿಕೊಳ್ಳಬೇಕೆಂದರು.

ಮಾಜಿ ಶಾಸಕ ಎಸ್.ವಿ.ರಾಮಚಂದ್ರ ಮಾತನಾಡಿ ಸಿರಿಗೆರೆ ಶ್ರೀಗಳು ಆಧುನಿಕ ಜಲ ಭಗೀರಥರು. ಜಗಳೂರು ಕ್ಷೇತ್ರದ ಕೆರೆಗಳಿಗೆ ನೀರು ಬರುವಂತೆ ಮಾಡಿ ನೀರಾವರಿ ಪ್ರದೇಶ ಮಾಡಿಕೊಟ್ಟಿದ್ದಾರೆ. ಹತ್ತಿ, ಮೆಕ್ಕೇಜೋಳ, ರಾಗಿ, ಬೆಳೆಯುವ ಬಯಲು ಪ್ರದೇಶದಲ್ಲಿ ಮುಂದೆ ನೀರಾವರಿ ಪ್ರದೇಶವಾಗಿ ಮಾರ್ಪಡಲಿದೆ ಎಂದು ಹೇಳಿದರು.



ಕಾರ್ಯಕ್ರಮದಲ್ಲಿ ಹಲವು ಊರಿನ ಮುಖಂಡರು, ಶ್ರೀಮಠದ ಭಕ್ತರು ಸೇರಿದಂತೆ ಮತ್ತಿತರರು ಹಾಜರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ