Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರ ಪರ ನಿಲುವು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆಗ್ರಹ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ರಾಜ್ಯದಲ್ಲಿ ಲಕ್ಷಾಂತರ ಜನರು ಸರ್ಕಾರಿ ಜಗಗಳಲ್ಲಿ
  ಮನೆ ಗುಡಿಸಲು  ಕಟ್ಟಿಕೊಂಡಿದ್ದು ಅಂತಹ ಜನತೆಗೆ ಸರ್ಕಾರದಿಂದ ಯಾವುದೇ ಹಕ್ಕು ಪತ್ರಗಳಾಗಲಿ ಮಂಜೂರಾತಿ ಆಗಲಿ ನೀಡಿರುವುದಿಲ್ಲ ಅಂತಹ ಜನರ ಬೆಂಬಲವಾಗಿ ದೊರೆಸ್ವಾಮಿ ಅವರ ಆಶಯದಂತೆ ನಿರಂತರವಾಗಿ ನಮ್ಮ ಸಮಿತಿ ಹೋರಾಟ ನಡೆಸುತ್ತಿದೆ ಎಂದು ರಾಜ್ಯ ಸಮಿತಿ ಮುಖಂಡ ಸಿರಿಮನೆ ನಾಗರಾಜು ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ವತಿಯಿಂದ ಆಯೋಜನೆ ಮಾಡಲಾಗಿದ್ದ ಸುದ್ದಿಗೊಷ್ಟಿಯಲ್ಲಿ ಪಾಲ್ಗೊಂಡು ಮಾತನಾಡಿದರು,

ತಾಲ್ಲೂಕಿನಲ್ಲಿ ಪಾರಂಪರಿಕವಾಗಿ ಬೇಸಾಯದಲ್ಲಿ ತೊಡಗಿಕೊಂಡು ಭೂಮಿಯನ್ನು ನಂಬಿ ಸರ್ಕಾರಿ ಗೋಮಾಳ ಸೇರಿದಂತೆ ಇತರೆ ಸ್ಥಳಗಳಲ್ಲಿ ಜೀವನ ಸಾಗಿಸುತ್ತಿರುವ ಬಡರೈತರ ಭೂಮಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು  ಕಾನೂನಿನ ಹೆಸರಿನಲ್ಲಿ  ಕಬಳಿಸಲು ಮುಂದಾಗಿದ್ದಾರೆ.

ಈ ಕುರಿತು ನಿರಂತರವಾಗಿ ಹೋರಾಟ ನಡೆಸುತ್ತಿದ್ದರು ಯಾವುದೇ ಪ್ರಯೋಜನವಾಗಿಲ್ಲ , ಜಿಲ್ಲಾಧಿಕಾರಿಗಳು ಈ ಸಮಸ್ಯೆ ಕುರಿತು ಸೂಕ್ತ ಕ್ರಮ ಕೈಗೊಂಡು ರೈತರು ಉತ್ತಮ ಜೀವನ ಸಾಗಿಸಲು ಸಹಕರಿಸಬೇಕಿದೆ. ಇಲ್ಲವಾದಲ್ಲಿ ರೈತರು  ರಸ್ತೆಗಳಿದ್ದು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದರು.

 ಈ ಕುರಿತಂತೆ ಸ್ಥಳೀಯ ರೈತರು ಹಾಗೂ ತಾಲ್ಲೂಕು ಘಟಕದ ಪದಾಧಿಕಾರಿಗಳು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ರಾಜ್ಯ ಸಮಿತಿಯ ಗಮನಕ್ಕೆ ತಂದಿದ್ದು  ಅಧಿಕಾರಿಗಳು ಎಚ್ಚೆತ್ತುಕೊಳ್ಳದ ಪಕ್ಷದಲ್ಲಿ  ಮುಂದೆ ರಾಜ್ಯಾದ್ಯಂತ  ಉಗ್ರ ಹೋರಾಟ ರೂಪಿಸಲಾಗುವುದು ಎಂದರು. 

 ರಮೇಶ್ ಸಂಕ್ರಾಂತಿ  ಮಾತನಾಡಿ ನಮ್ಮ ತಾಲ್ಲೂಕಿನ ಬಡ ರೈತರ ಸಮಸ್ಯೆಗಳನ್ನು ಕುರಿತು ಸ್ಥಳೀಯ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ  ಸಾಕಷ್ಟು ಮನವಿ ನೀಡಿದ್ದೇವೆ,

ಆದರೆ ಇದುವರೆಗೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಬಡ ರೈತರ ಭೂಮಿಗಳನ್ನು ಕಾನೂನಿನ ಹೆಸರಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು  ವಶಪಡಿಸಿಕೊಳ್ಳುತ್ತಿದ್ದು  ಕಂದಾಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ , ರೈತರ ಒಕ್ಕಲಿಬ್ಬಿಸಿ  ಅರಣ್ಯ ಪ್ರದೇಶ ಎಂದು ಬಾವುಟ ನೆಡುತ್ತಿರುವ  ಅರಣ್ಯ ಅಧಿಕಾರಿಗಳಿಗೆ  ರಾಜ್ಯ ಸರ್ಕಾರ ಸೂಕ್ತ ಮಾರ್ಗದರ್ಶನ ನೀಡಬೇಕಿದೆ . ಇದು ರೈತರ ಅಳಿವು ಉಳಿವಿನ ಪ್ರಶ್ನೆಯಾಗಿದೆ ಎಂದರು.

 ಸುದ್ದಿಗೋಷ್ಠಿಯಲ್ಲಿ  ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಜಿಲ್ಲಾ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳು, ತಾಲೂಕಿನ ರೈತರು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ