Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇದೇ 5ರಂದು ರಥಸಪ್ತಮಿ; ಸಾಮೂಹಿಕ ಸೂರ್ಯ ನಮಸ್ಕಾರ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ;
ಬರುವ ಇದೆ ಐದರಂದು ಜಿಲ್ಲಾ ಯೋಗ ಸಂಸ್ಥೆ ,ಚಿತ್ರದುರ್ಗಚಿತ್ರದುರ್ಗ ರೋಟರಿ ಕ್ಲಬ್ ಫೋರ್ಟ್ ,ಇನ್ನರ್ವಿಲ್ ಕ್ಲಬ್ ಚಿತ್ರದುರ್ಗ ಫೋರ್ಟ್ ಹಾಗೂ ಚಿತ್ರದುರ್ಗ ಜಿಲ್ಲಾ ವೀರಶೈವ ಸಮಾಜ  ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ನೀಲಕಂಠೇಶ್ವರ ಸ್ವಾಮಿ ಸಮುದಾಯವನಲ್ಲಿ ಬೆಳಗ್ಗೆ 5-30ರಿಂದ ರಥಸಪ್ತಮಿ ಪ್ರಯುಕ್ತ 108 ಸೂರ್ಯ ನಮಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ರಥಸಪ್ತಮಿಯ ಮಹತ್ವ-
ರಥಸಪ್ತಮಿಯನ್ನು ಅಚಲ ಸಪ್ತಮಿ, ಮಾಘಸಪ್ತಮಿ ಅಥವಾ ಸೂರ್ಯ ಸಪ್ತಮಿ ಎಂದು ಕರೆಯುವರು.ರಥಸಪ್ತಮಿಯನ್ನು ಬಹು ಹಿಂದಿನಿಂದಲೂ ಆಚರಿಸಿಕೊಂಡು ಬಂದಿರುವುದು ಒಂದು ವಿಶೇಷ. ಹಾಗೇ  ಇದು ವಿಶಿಷ್ಟ ಹಬ್ಬವಾಗಿದೆ. ರಥಸಪ್ತಮಿಯು ಮಾಘ ಮಾಸದ ಶುಕ್ಲ ಪಕ್ಷದ 7ನೇ ತಿಥಿ ಅಂದರೆ ಸಪ್ತಮಿಯ ದಿವಸದಂದು ಆಚರಿಸಲ್ಪಡುವ ಪದ್ಧತಿಯಾಗಿದೆ. ಸೂರ್ಯನ ಜನ್ಮದಿನವೆಂತಲೂ ಭಾವಿಸಲಾಗಿದೆ.

ನಮ್ಮ ರಾಷ್ಟ್ರದಲ್ಲಿ ಅಲ್ಲದೆ ಜಗತ್ತಿನ ಅನೇಕ ಭಾಗಗಳಲ್ಲಿಯೂ ರಥಸಪ್ತಮಿಯನ್ನು ಆಚರಿಸುವರು. 108 ನಾಮ ಜಪ ಅಲ್ಲದೆ ವಿಶೇಷವಾಗಿ ಯೋಗ ಸಾಧಕರು 108 ಸೂರ್ಯ ನಮಸ್ಕಾರಗಳನ್ನು ಸಾಮೂಹಿಕವಾಗಿ ಆಚರಿಸುತ್ತಾರೆ .ಈ ದಿನ ಅತ್ಯಂತ ಮಹತ್ವದ್ದಾಗಿರುವುದೇಕೆಂದರೆ ಸೂರ್ಯ  ತನ್ನ ಪಥವನ್ನು ಅಂದರೆ ದಿಕ್ಕನ್ನು ಉತ್ತರಾಯಣದ ಕಡೆ ಬದಲಿಸುವ ದಿನ. ಇಂದಿನಿಂದ ಸೂರ್ಯನ ಓಜಸು, ತೇಜಸ್ಸು ಹೆಚ್ಚು ಪ್ರಖರತೆಯನ್ನು ಉಂಟು ಮಾಡಿ ಸಕಲ ಚರಾಚರ ವಸ್ತುಗಳ ಮೇಲೆ ಪ್ರಕೃತಿ ಮತ್ತು ಮಾನವನ ಬದುಕಿಗೆ ಚೈತನ್ಯವನ್ನು ಉಂಟುಮಾಡುವ ದಿನ.

   ಸೂರ್ಯನು ಆರೋಗ್ಯದಾತನೆಂಬುದಾಗಿ, ವೇದವು ಅವನನ್ನು ಪ್ರಾರ್ಥಿಸಿದೆ. ವೇದಗಳು ಅಲ್ಲದೆ ಪುರಾಣಗಳು ಸಹ ಸೂರ್ಯನನ್ನು ರೋಗನಿವಾರಕನೆಂದು ಸಾರಿವೆ. ಸರ್ವವ್ಯಾಧಿಗಳು, ಮಹಾವ್ಯಾಧಿಗಳು ನಿವಾರಣೆಯಾಗುತ್ತದೆ ಎಂದು  ಜನರಲ್ಲಿ ನಂಬಿಕೆ .ಸೂರ್ಯ ನಮಸ್ಕಾರಗಳಿಂದ ಬಲಸಂವರ್ಧನೆ, ಆರೋಗ್ಯ, ಆಯುಷ್ಯಾಭಿವೃದ್ದಿ, ಮನಃಶಕ್ತಿಸಂಚಯ, ಪ್ರಸನ್ನತೆ, ಉತ್ಸಾಹ, ಉಲ್ಲಾಸ ಮನಸ್ಸಿಗೆ ಆಗುತ್ತದೆ.

ಯೋಗ ಸಾಧಕರು ಸೇರಿದಂತೆ ಇತರೆ ಆಸಕ್ತಿಯುಳ್ಳವರು ಬನ್ನಿ. ನಾವೆಲ್ಲರೂ ಒಂದಾಗಿ ಸೇರಿ ಸಾಮೂಹಿಕ ಸೂರ್ಯ ನಮಸ್ಕಾರ ಮಾಡುವ. ನಮ್ಮ- ನಿಮ್ಮ  ಆರೋಗ್ಯ ವೃದ್ಧಿಗೆ ಸಂಕಲ್ಪ ಮಾಡೋಣ. ಹೆಚ್ಚಿನ ಮಾಹಿತಿಗಾಗಿ 99862 95285, 94481 44871, 9620653375.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ