LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆದಿಜಾಂಬವ ಮಠದಲ್ಲಿ ಏಕಪಕ್ಷೀಯ ಸಮಾರಂಭ: ಸಮುದಾಯದ ಮುಖಂಡರಿಂದ ಕಾರ್ಯಕ್ರಮ ಬಹಿಷ್ಕಾರ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಹಿರಿಯೂರು:
ತಾಲೂಕಿನ ಎನ್.ಹೆಚ್-48ರಲ್ಲಿರುವ ಆದಿಜಾಂಬವ ಮಠದಲ್ಲಿ ಆಗಸ್ಟ್ 23ರ ಭಾನುವಾರ ಆಯೋಜಿಸಲಾಗಿರುವ ಅಭಿನಂದನೆ ಹಾಗೂ ಸನ್ಮಾನ ಸಮಾರಂಭ ಬಹಿಷ್ಕರಿಸುವುದಾಗಿ ದಲಿತ ಮತ್ತು ಮಾದಿಗ ಸಮುದಾಯದ ಮುಖಂಡರು ಹಾಗೂ ಮಠದ ಭಕ್ತಾದಿಗಳು ಜಂಟಿಯಾಗಿ ಪ್ರಕಟಿಸಿದ್ದಾರೆ.

​ಈ ಕಾರ್ಯಕ್ರಮವನ್ನು ಸಮಾಜದ ಭಕ್ತರ ಹಾಗೂ ಜನಾಂಗದ ಗಮನಕ್ಕೆ ತರದೆ ಏಕಪಕ್ಷೀಯವಾಗಿ ತೀರ್ಮಾನಿಸಲಾಗಿದೆ ಎಂದು ಮುಖಂಡರು ಆರೋಪಿಸಿದ್ದಾರೆ.

​​ಏಕಪಕ್ಷೀಯ ನಿರ್ಧಾರ: ಶ್ರೀ ಶಿವಮುನಿ ದೇಶಿಕೇಂದ್ರ ಸ್ವಾಮೀಜಿ, ಶ್ರೀ ಷಡಕ್ಷರಿಮುನಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ಶ್ರೀ ಬ್ರಹ್ಮಾನಂದಮುನಿ ದೇಶಿಕೇಂದ್ರ ಸ್ವಾಮೀಜಿ ಎನ್ನುವ ವ್ಯಕ್ತಿಗಳು ಸಮುದಾಯದ ಮತ್ತು ಭಕ್ತರ ಸಮ್ಮತಿ ಪಡೆಯದೇ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

​ಸ್ವಾರ್ಥ ಹಾಗೂ ರಾಜಕೀಯ ದುರುದ್ದೇಶ: ರಾಜಕೀಯ ಲಾಭಕ್ಕಾಗಿ ಮತ್ತು ಸ್ವಾರ್ಥಕ್ಕಾಗಿ ಜನಾಂಗವನ್ನು ಹಾಗೂ ಭಕ್ತಾದಿಗಳನ್ನು ಗುಲಾಮರನ್ನಾಗಿ, ಜೀತದಾಳುಗಳನ್ನಾಗಿ ಮಾಡುವ ಪ್ರವೃತ್ತಿ ಇದರಲ್ಲಿದೆ ಎಂದು ಮುಖಂಡರು ಗಂಭೀರವಾಗಿ ಆರೋಪಿಸಿದ್ದಾರೆ.

​ಈ ಪ್ರವೃತ್ತಿಯನ್ನು ತೀವ್ರವಾಗಿ ಖಂಡಿಸಿರುವ ನಗರಸಭೆ ಮಾಜಿ ಸದಸ್ಯ ಧನಂಜಯ್ ಕುಮಾರ್, ಸಣ್ಣಪ್ಪ, ಪುರುಷೋತ್ತಮ್, ದಲಿತ ಮುಖಂಡರಾದ ಹರ್ತಿಕೋಟೆ ದಯಾನಂದ್, ಬಬ್ಬೂರು ರಂಗಸ್ವಾಮಿ, ಕೆ. ಓಂಕಾರಪ್ಪ, ಓಬಳೇಶ್, ಮಾದಿಗ ಜನಾಂಗದ ವಿವಿಧ ಮುಖಂಡರು, ದಲಿತಪರ ಸಂಘಟನೆಗಳು ಹಾಗೂ ಮಠದ ಭಕ್ತಾದಿಗಳು ಈ ಸಮಾರಂಭವನ್ನು ಸಂಪೂರ್ಣವಾಗಿ ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆ. 25ರಂದು ನೇರ ನೇಮಕಾತಿ ಸಂದರ್ಶನಆ.23ರಂದು ‘ನಾನು, ನೀನು ಮತ್ತು ಸ್ಕಿಜೋಫ್ರೇನಿಯಾ' ಕವನ ಸಂಕಲನ ಲೋಕಾರ್ಪಣೆಆದಿಜಾಂಬವ ಮಠದಲ್ಲಿ ಏಕಪಕ್ಷೀಯ ಸಮಾರಂಭ: ಸಮುದಾಯದ ಮುಖಂಡರಿಂದ ಕಾರ್ಯಕ್ರಮ ಬಹಿಷ್ಕಾರಕಾಯಕದಿಂದ ಮಾತ್ರ ಲಕ್ಷ್ಮಿ ಪ್ರಾಪ್ತಿ; ಶ್ರೀ ಮಾದರ ಚನ್ನಯ್ಯ ಸ್ವಾಮೀಜಿಕರ್ನಾಟಕದ ಬುಡಕಟ್ಟು ಸಮುದಾಯಗಳ ಹಕ್ಕು ಮತ್ತು ಅಭಿವೃದ್ಧಿಗೆ ಸಂಸದ ಗೋವಿಂದ ಕಾರಜೋಳ ಧ್ವನಿಹಿರಿಯ ನಟಿ, ಪದ್ಮಶ್ರೀ ಪುರಸ್ಕೃತೆ 'ಸಾಹುಕಾರ್ ಜಾನಕಿ' ನಿಧನ:ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ಶಾಸಕರಿಂದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆಕ್ವಿನ್ ಸಿಟಿಯಲ್ಲಿ ವಿದೇಶಿ ವಿವಿಗಳ ಕ್ಯಾಂಪಸ್, ಮೈಸೂರಿನಲ್ಲಿ ಏರೋಸ್ಪೇಸ್ ಪಾರ್ಕ್: ಸಚಿವ ಎಂ.ಬಿ. ಪಾಟೀಲ್ ಘೋಷಣೆಐಸಿಎಐ 'ಸಂವಾದ' ಸಮ್ಮೇಳನ ಉದ್ಘಾಟನೆ: ಸಿಎ ವೃತ್ತಿಪರರ ಜ್ಞಾನ ಹಂಚಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ಶ್ಲಾಘನೆಪ್ಯಾರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಕೆ.ಎಸ್. ಶಿಲ್ಪಾಗೆ ಸನ್ಮಾನ: ಗ್ರೂಪ್ 'ಬಿ' ಉದ್ಯೋಗ ಘೋಷಣೆ