Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಪರೇಷನ್ ಸಿಂಧೂರ ಕಾರ್ಯಾಚರಣೆ ಮುಗಿದಿಲ್ಲ

Advertisement
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕವಾಗಿ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಭುಗಿಲೆದ್ದಿದ್ದ ಸೇನಾ ಸಂಘರ್ಷ ಕದನ ವಿರಾಮ ಘೋಷಣೆಯೊಂದಿಗೆ ಮೆತ್ತಗಾಗಿದೆ ಎನ್ನುವಾಗಲೇ ಭಾರತೀಯ ವಾಯುಸೇನೆ ಈ ಕುರಿತು ಮಹತ್ವದ ಹೇಳಿಕೆ ನೀಡಿದೆ.


ಉಗ್ರರ ವಿರುದ್ಧ ಭಾರತೀಯ ಸೇನೆ ಆರಂಭಿಸಿದ್ದ ಆಪರೇಷನ್ ಸಿಂಧೂರ ಕಾರ್ಯಾಚರ ಇನ್ನೂ ಮುಗಿದಿಲ್ಲ. ಆಪರೇಷನ್ ಸಿಂಧೂರ ಮುಂದುವರೆದಿದೆ ಎಂದು ಭಾರತೀಯ ವಾಯುಪಡೆ ಭಾನುವಾರ ಮಹತ್ವದ ಹೇಳಿಕೆ ನೀಡಿದೆ. ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಉದ್ದೇಶಪೂರ್ವಕ ಮತ್ತು ವಿವೇಚನಾಯುಕ್ತ ರೀತಿಯಲ್ಲಿ ನಡೆಸಲಾಗಿದೆ ಎಂದು ಭಾರತೀಯ ವಾಯುಸೇನೆ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎನ್‌ಎಸ್‌ಎ ಅಜಿತ್ ದೋವಲ್, ವಿದೇಶಾಂಗ ಸಚಿವ ಎಸ್ ಜೈಶಂಕರ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಭಾರತದ ವಾಯುಪಡೆಯ ಮುಖ್ಯಸ್ಥ ಅಮರ್ ಪ್ರೀತ್ ಸಿಂಗ್ ಮತ್ತು ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಅವರೊಂದಿಗೆ ಉನ್ನತ ಮಟ್ಟದ ಸಭೆಯ ನಂತರ ಭಾರತೀಯ ವಾಯುಪಡೆಯಿಂದ ಈ ಹೇಳಿಕೆ ಬಂದಿದೆ.
ಗುರಿ ಮುಟ್ಟಿದ್ದೇವೆ:


ಭಾರತೀಯ ವಾಯುಪಡೆ(ಐಎಎಫ್) ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ತನಗೆ ನಿಯೋಜಿಸಲಾದ ಕಾರ್ಯಗಳನ್ನು ನಿಖರತೆ ಮತ್ತು ವೃತ್ತಿಪರತೆಯೊಂದಿಗೆ ಯಶಸ್ವಿಯಾಗಿ ನಿರ್ವಹಿಸಿದೆ ಎಂದು ಅವರು ತಿಳಿಸಿದರು. ರಾಷ್ಟ್ರೀಯ ಉದ್ದೇಶಗಳಿಗೆ ಅನುಗುಣವಾಗಿ ಉದ್ದೇಶಪೂರ್ವಕ ಮತ್ತು ವಿವೇಚನಾಯುಕ್ತ ರೀತಿಯಲ್ಲಿ ಸಿಂಧೂರ ಕಾರ್ಯಾಚರಣೆ ನಡೆಸಲಾಯಿತು ಎಂದು ತಿಳಿಸಿದೆ.

ಭಾರತೀಯ ಸೇನೆ ಆರಂಭಿಸಿದ್ದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ, ಸರಿಯಾದ ಸಮಯದಲ್ಲಿ ವಿವರವಾದ ಬ್ರೀಫಿಂಗ್ ಅನ್ನು ನಡೆಸಲಾಗುವುದು ಪರಿಶೀಲಿಸದ ಮಾಹಿತಿಯ ಊಹಾಪೋಹ ಮತ್ತು ಪ್ರಸರಣದಿಂದ ದೂರವಿರಲು ಐಎಎಫ್ ಎಲ್ಲರಲ್ಲೂ ಒತ್ತಾಯಿಸಿ ಮನವಿ ಮಾಡಿದೆ ಎಂದು ಅದು ಹೇಳಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ