ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಷ್ಟ್ರೀಯ ಸ್ವಯಂಸೇವಕ ಸಂಘ ಚಿತ್ರದುರ್ಗ ಜಿಲ್ಲೆ ವತಿಯಿಂದ ನಗರದಲ್ಲಿ "ಪ್ರಮುಖ ನಾಗರಿಕರ ಗೋಷ್ಠಿ" ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ದಿನಾಂಕ: 28 ಜೂನ್ 2026, ಭಾನುವಾರ ಬೆಳಗ್ಗೆ 10 ಗಂಟೆಗೆ ಶ್ರೀ ಗಾಯತ್ರಿ ಕಲ್ಯಾಣ ಮಂಟಪದಲ್ಲಿ(ಡಿ.ಡಿ.ಪಿ.ಐ. ಆಫೀಸ್ ಹತ್ತಿರ) ಆಯೋಜಿಸಲಾಗಿದೆ.
ಮುಖ್ಯ ವಕ್ತಾರರು: ಈ ಬೃಹತ್ ಗೋಷ್ಠಿಯಲ್ಲಿ ಕರ್ನಾಟಕ ದಕ್ಷಿಣ ಪ್ರಾಂತ್ಯದ ಪ್ರಾಂತ್ಯ ಸಹ ಕಾರ್ಯವಾಹರಾದ ಪಟ್ಟಾಭಿರಾಮ್ ಅವರು ಮುಖ್ಯ ವಕ್ತಾರರಾಗಿ ಆಗಮಿಸಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಸಂಘಟನೆಯ ವತಿಯಿಂದ ಸಾರ್ವಜನಿಕರಿಗೆ ಹಾಗೂ ಪ್ರಮುಖ ನಾಗರಿಕರಿಗೆ ಆದರದ ಸ್ವಾಗತವನ್ನು ಕೋರಲಾಗಿದೆ.
ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರಿಗೆ ಆಯೋಜಕರು ಕೆಲವು ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ.
ಕಾರ್ಯಕ್ರಮ ಸುಗಮವಾಗಿ ನಡೆಯಲು ಸಾರ್ವಜನಿಕರು 10 ನಿಮಿಷ ಮುಂಚಿತವಾಗಿ ಆಗಮಿಸಬೇಕಾಗಿ ಸಂಘಟಕರು ವಿನಂತಿ ಮಾಡಿದ್ದಾರೆ. ಈ ಕಾರ್ಯಕ್ರಮವು ಸುಮಾರು ಮೂರು ಗಂಟೆಗಳ ಕಾಲ ನಡೆಯಲಿದೆ.
ಕಾರ್ಯಕ್ರಮದ ಮುಕ್ತಾಯದ ನಂತರ ಸಾರ್ವಜನಿಕರಿಗೆ ಭೋಜನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಂಪರ್ಕಕ್ಕಾಗಿ: ಹೆಚ್ಚಿನ ಮಾಹಿತಿಗಾಗಿ ದೇವರಾಜಕೊಟ್ಟ (9164897021) ಅಥವಾ ಶ್ರೀನಿವಾಸ ಸಿ. (9901113056) ಅವರನ್ನು ಸಂಪರ್ಕಿಸಬಹುದಾಗಿದೆ.



