Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಸಹಜ ಸಾವಿನ ಪ್ರಕರಣಗಳ ಎಸ್ಐಟಿ ತನಿಖೆ ನಂತರ ಮಾಹಿತಿ ನೀಡಲಿದ್ದೇನೆ-ಪರಮೇಶ್ವರ್

Advertisement
ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಸಹಜ ಸಾವಿನ ಪ್ರಕರಣಗಳ ಕುರಿತು ಜನರ ಅಪೇಕ್ಷೆಯಂತೆ ಈಗಾಗಲೇ ಎಸ್ಐಟಿ ತನಿಖೆ ಆರಂಭಿಸಿದೆ. ಎಸ್ಐಟಿ ತನಿಖೆ ವರದಿ ಬರುವವರೆಗೂ ನಾವು ಏನೂ ಮಾಹಿತಿ ನೀಡುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.


ದಾವಣಗೆರೆಯಲ್ಲಿ ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಿಒಡಿ ತನಿಖೆಯನ್ನು ಬಿಕ್ಲು ಶಿವು ಕೊಲೆ ವಿಚಾರಣೆ ನಡೆಯುತ್ತಿದೆ. ಬೈರತಿ ಬಸವರಾಜ್ ಅಲ್ಲ ಯಾರೇ ಇದ್ದರೂ ತನಿಖೆ ನಂತರ ಗೊತ್ತಾಗಲಿದೆ. ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಲಿದೆ. ಎಂದು ಸಚಿವರು ಹೇಳಿದರು.

ಸೂಪರ್ ಸಿಎಂ ರೀತಿ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಸುರ್ಜೇವಾಲಾ ಅವರು ವರ್ತಿಸುತ್ತಿದ್ದಾರೆ ಎಂಬ ಆರೋಪದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಅವರ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ, ಇದೇನು ಹೊಸದಲ್ಲ. ಯಾವತ್ತೂ ಕೂಡಾ ನಮ್ಮ ಅಖಿಲ ಭಾರತ ಕಾಂಗ್ರೆಸ್​ ಪಕ್ಷದಲ್ಲಿ ಪ್ರಧಾನ ಕಾರ್ಯದರ್ಶಿಗಳನ್ನು ಒಂದೊಂದು ರಾಜ್ಯಕ್ಕೆ ನೇಮಕ ಮಾಡುತ್ತಾರೆ. ಹಾಗೆಯೇ, ನಮ್ಮ ರಾಜ್ಯಕ್ಕೆ ಅವರನ್ನು(ಸುರ್ಜೇವಾಲಾ) ನೇಮಕ ಮಾಡಿದ್ದಾರೆ.

ಚುನಾವಣೆಗೆ ಮೊದಲು ಇದ್ರು, ಈಗಲೂ ಇದ್ದಾರೆ. ಪಕ್ಷದ ಪ್ರಣಾಳಿಕೆಯಲ್ಲಿ ನಾವು ಜನರಿಗೆ ಕೊಟ್ಟಿರುವ ಭರವಸೆಯನ್ನು ಅನುಷ್ಠಾನ ಮಾಡಿದ್ದಾರೆಯೇ, ಇಲ್ಲವೆ ಎಂದು ಆಗಾಗ್ಗೆ ಬಂದು ನೋಡುತ್ತಾ ಇರುತ್ತಾರೆ. ಅದು ನಮ್ಮ ಪಕ್ಷದ ಜವಾಬ್ದಾರಿ ಕೂಡ. ಹಾಗಾಗಿ ಅವರು ಬರ್ತಾರೆ, ಹೋಗ್ತಾರೆ. ಯಾವ ಅಧಿಕಾರಿಗಳೊಂದಿಗೆ ಮಾತನಾಡಿಲ್ಲ ಹಾಗೂ ಸೂಚನೆಯನ್ನೂ ಕೊಟ್ಟಿಲ್ಲ. ಆಡಳಿತದಲ್ಲಿ ಅವರದ್ದು ಯಾವುದೇ ರೀತಿಯ ಹಸ್ತಕ್ಷೇಪ ಇಲ್ಲ.

ಬಿಜೆಪಿಯವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆಯೇ ಹೊರತು, ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿದ್ದಾರೆ. ಸುರ್ಜೇವಾಲಾ ಅವರು ಶಾಸಕರ ಜೊತೆಗೆ ಒನ್ ಟು ಒನ್ ಮೀಟಿಂಗ್ ಮಾಡುತ್ತಿದ್ದಾರೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದು ನಮ್ಮ ಪಕ್ಷದ ಆಂತರಿಕ ವಿಚಾರ. ಅದಕ್ಕೂ ಮತ್ತು ಭಾರತೀಯ ಜನತಾ ಪಾರ್ಟಿಗೂ ಏನು ಸಂಬಂಧ ಇದೆ? ಎಂದು ಪ್ರಶ್ನಿಸಿದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ