Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ ಶಾಂತಿಯುತ ಮತದಾನ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಭಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿ ಚುನಾವಣೆ ಯಾವುದೇ ಅಹಿತಕರ ಘಟನೆ ಇಲ್ಲದೆ ಶಾಂತಿಯುತವಾಗಿ ನಡೆದಿದೆ. ಬೆಳಗಿನಿಂದ ಮದ್ಯಾನ್ಹದವರೆಗೆ ಮಂದಗತಿಯಲ್ಲಿದ್ದ ಮತದಾನ ಪ್ರಕ್ರಿಯೆ ಮದ್ಯಾನ್ಹದ ನಂತರ ತೀವ್ರಗತಿ ಪಡೆದು ಕೊಂಡಿತ್ತು.

ಭಾಷೆಟ್ಟಿ ಹಳ್ಳಿ ಪಟ್ಟಣ ಪಂಚಾಯ್ತಿ ಯಾಗಿ ಪರಿವರ್ತನೆ ಗೊಂಡ ನಂತರ ನಡೆದ ಮೊದಲ ಚುನಾವಣೆ ಇದಾಗಿದ್ದು ಆ ಕಾರಣಕ್ಕೆ ಪಂಚಾಯ್ತಿ ವ್ಯಾಪ್ತಿಯ ಮತಗಟ್ಟೆಗಳಿಗೆ ಮತದಾರರು ಹುರುಪಿನಿಂದ ಬಂದು ಮತ ಚಲಾಯಿಸಿದ್ದು ವಿಶೇಷವಾಗಿತ್ತು. ಕೆಲ ಮತಗಟ್ಟೆಗಳಲ್ಲಿ ಸ್ಥಳೀಯರಲ್ಲದವರು ಮತದಾನ ಮಾಡಲು ಬಂದ ಬಗ್ಗೆ ಆಕ್ಷೇಪ ಉಂಟಾಗಿತ್ತು.

ಈ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಂಡು ಸುಗಮ ಮತದಾನಕ್ಕೆ ಅವಕಾಶ ಕಲ್ಪಿಸಿದರು. ಚುನಾವಣಾ ಕಚೇರಿಯ ಮಾಹಿತಿ ಯಂತೆ ಸಂಜೆ 5 ಗಂಟೆ ವೇಳೆಗೆ 5017 ಪುರುಷ ಮತದಾರರು ಹಾಗೂ 5089 ಮಹಿಳಾ ಮತದಾರರು ಮತದಾನ ಮಾಡಿದ್ದು ಶೇಕಡಾ 81.34 ಮತದಾನವಾಗಿದೆ.

ಮತಗಟ್ಟೆಗಳಿಗೆ ಸೂಕ್ತ ಬಂದೋಬಸ್ತ್ ಮಾಡಲಾಗಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನಚ್ಚರಿಕೆ ವಹಿಸಲಾಗಿತ್ತು. ಮತಗಟ್ಟೆಗಳಿಗೆ ರಾಜ್ಯ ಚುನಾವಣಾ ಆಯುಕ್ತ ಜಿ. ಎಸ್. ಸಂಗ್ರೇಶಿ, ಜಿಲ್ಲಾಧಿಕಾರಿ ಬಸವರಾಜ್ ಕೆ. ಯರಗೋಳ್ ಬೇಟಿ ನೀಡಿ ಚುನಾವಣಾ ವ್ಯವಸ್ಥೆ ಯನ್ನು ಪರಿಶೀಲಿಸಿದರು.

     ಭಾಷೆಟ್ಟಿ ಹಳ್ಳಿ ಪಟ್ಟಣ ಪಂಚಾಯ್ತಿ ಚುನಾವಣೆ ಜೊತೆಯಲ್ಲೇ ನಗರಸಭೆಯ 21 ನೇ ವಾರ್ಡಿನ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯಿತು. ನಗರದ ಮಹಿಳಾ ಸಮಾಜದಲ್ಲಿ ಮತಗಟ್ಟೆ ಆಯೋಜಿಸಲಾಗಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಿಯುತ ಮತದಾನ ನಡೆಯಿತು. ಮಾಹಿತಿಯ ಪ್ರಕಾರ ಸಂಜೆ 5 ರ ವೇಳೆಗೆ ಶೇಕಡಾ 67.11 ಮತದಾನ ಎನ್ನಲಾಗಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ