Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರಿಗೆ ಪಿ.ಎಂ. ಕಿಸಾನ್ ಸಮ್ಮಾನ್ ಹಣ ಬಿಡುಗಡೆ-ಸೋಮಣ್ಣ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡ ಬಳ್ಳಾಪುರ:
ತಾಲ್ಲೂಕಿನ ತೂಬಗೆರೆ ಹೋಬಳಿ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋ ಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ 20ನೇ ಕಂತಿನ ಹಣವನ್ನು ಬಿಡುಗಡೆ ಮಾಡುವ ಕಾರ್ಯಕ್ರಮದ ಸಚಿವರೊಟ್ಟಿಗೆ ಉದ್ಘಾಟನೆ ಮಾಡಿದ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ಸಚಿವ ವಿ ಸೋಮಣ್ಣ ಅವರು, ಬಳಿಕ ಪ್ರಧಾನಿ ಮಂತ್ರಿಯ ವಿಡಿಯೋ ಕಾನ್ಸರೆನ್ಸ್ ನೇರ ಪ್ರಸಾರದ ಕಾರ್ಯಕ್ರಮವನ್ನು ಸಚಿವ ಮುನಿಯಪ್ಪ, ರೈತರೊಂದಿಗೆ ವೀಕ್ಷಿಸಿದರು.

ರೈತರನ್ನು ಉದ್ದೇಶಿಸಿ ದೇಶಿಸಿ ಮಾತನಾಡಿದ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ಸಚಿವ ವಿ ಸೋಮಣ್ಣ ಅವರು, ರೈತರು ಸುಖಯಾಗಿರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 6 ಸಾವಿರ ರೂ, ಹಣ ಯಾವುದೇ ಮಧ್ಯವರ್ತಿಗಳಿಲ್ಲದೇ ರೈತರ ಖಾತೆಗೆ ನೇರವಾಗಿ ತಲುಪುತ್ತಿದ್ದು, ಪಿ.ಎಂ ಕಿಸಾನ್ ಯೋಜನೆಯಲ್ಲಿ 20 ಕಂತು ಒಳಗೊಂಡು ಇಲ್ಲಿಯ ತನಕ ದೇಶ ದಾದ್ಯಂತ 3.89 ಲಕ್ಷ ಕೋಟಿ ರೂ ಹಣ ವನ್ನು ರೈತರಿಗೆ ಸಂದಾಯ ಮಾಡಲಾಗಿದೆ.

ಇಲ್ಲಿಯ ತನಕ ಕರ್ನಾಟಕ ರಾಜ್ಯದಲ್ಲಿ ರೂ.18.922 ಸಾವಿರ ಕೋಟಿ ಹಣ ಈ ಯೋಜನೆಯಲ್ಲಿ ರೈತರ ಖಾತೆಗೆ ಜಮೆ ಆಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಸುಮಾರು 43.28.905 ಲಕ್ಷ ಕೋಟಿ ಅರ್ಹ ರೈತ ಫಲಾನು ಭವಿಗಳು ಈ ಯೋಜನೆಯ ಲಾಭ ಪಡೆದಿ ದ್ದಾರೆ. 2013-14ರಲ್ಲಿ ಕೇಂದ್ರದ ಕೃಷಿ ಬಜೆಟ್ ನಲ್ಲಿ ರೂ.21.933 ಸಾವಿರ ಕೋಟಿ ಇತ್ತು. ಈಗ ನರೇಂದ್ರ ಮೋದಿಯವರ ಸರ್ಕಾರದಲ್ಲಿ 2025-26ರಲ್ಲಿ 1,27,209 ಲಕ್ಷ ಕೋಟಿ ರೂ.ಗಳ ಕೃಷಿ ಬಜೆಟ್ ನ್ನು ನೀಡಲಾಗಿದೆ. ಇಂದಿನ 20ನೇ ಕಂತಿನಲ್ಲಿ ದೇಶದಾದ್ಯಂತ ಸುಮಾರು 9.7 ಕೋಟಿ ರೈತರ ಖಾತೆಗೆ ಸುಮಾರು 20,800 ಕೋಟಿ ಹಣ ಸಂದಾ ಯವಾಗಲಿದೆ.

ಅಂದಿನ ನಮ್ಮ ಸರ್ಕಾರದಿಂದ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ರೂ.6 ಸಾವಿರ ಜೊತೆಗೆ ರಾಜ್ಯ ಸರ್ಕಾರ 4 ಸಾವಿರ ನೀಡುತ್ತಿತ್ತು, ಇದನ್ನು ಈಗಿನ ಸರ್ಕಾರ ಜಾರಿಗೊಳಿಸ ಬೇಕಿದೆ ಎಂದರು. ಈ ಯೋಜನೆಯು ಮಹಿಳಾ ರೈತರ ಸಬಲೀಕರಣಕ್ಕೂ ಸಹಾ ಯಕಾರಿಯಾಗಿದ್ದು, 20ನೇ ಕಂತಿನಲ್ಲಿ ದೇಶದಾದ್ಯಂತ ಸುಮಾರು 2.26 ಕೋಟಿ ಮಹಿಳಾ ರೈತರು ಫಲಾನುಭವಿಗಳಿದ್ದಾರೆ ಎಂದು ತಿಳಿಸಿದರು. 

 ಈ ಕಾರ್ಯಕ್ರಮದ  ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಸಂಗೋ ಪನೆ, ಮೀನುಗಾರಿಕೆ ಮತ್ತು ಅರಣ್ಯ ಇಲಾಖೆಗಳಿಂದ ವಸ್ತು ಪ್ರದರ್ಶನ ಮಳಿಗೆಗಳು ಹಾಗೂ ಕೃಷಿ ಪರಿಕರಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಲೋಕಸಭಾ ಸದಸ್ಯರಾದ ಡಾ. ಕೆ. ಸುಧಾಕರ್, ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ, ಧೀರಜ್  ಮುನಿರಾಜ್

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಬಿ ರಾಜಣ್ಣ, ಹಾಡೋನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಮುನಿರಾಜು, ಜಿಲ್ಲಾಧಿಕಾರಿ ಎ.ಬಿಬಸವರಾಜು, ಜಿಲ್ಲಾಜಂಟಿ ಕೃಷಿ ನಿರ್ದೇಶಕರುಬಿ.ಜಿ ಕಲಾವತಿ, ಉಪನಿರ್ದೇಶಕರು ಗಾಯಿತ್ರಿ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಬಿ.ಜಿ. ಹನುಮಂತರಾಯ, ವಿವಿಧ ಇಲಾಖೆಯ ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು. 

ರೈತರಿಗೆ ರಸಗೊಬ್ಬರದ ಸಮಸ್ಯೆಯಿಲ್ಲ-
ರೈತರಿಗೆ ಯೂರಿಯ ಗೊಬ್ಬರ ಕೊರತೆಯನ್ನು ನಿವಾರಿಸಿದ್ದೇವೆ 6.52 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯತೆಯಿದ್ದು, ರಾಜ್ಯಕ್ಕೆ 15,825 ಸಾವಿರ ಮೆಟ್ರಿಕ್ ಟನ್ ಲಭ್ಯವಿದ್ದು, ಯೂರಿಯಾ ಮಾರಾಟ ಬೇಡಿಕೆಗಿಂದ ಹೆಚ್ಚಿದೆ ಎಂದರು.ಇನ್ನೂ ಕೊರತೆ ಇದ್ದರೆ ಸರ್ಕಾರಕ್ಕೆ ತಿಳಿಸಬೇಕು. ನಮ್ಮ ಭಾರತ ಸರ್ಕಾರದ ಕಡೆಯಿಂದ ಉತ್ತಮ ಕೆಲಸಗಳಾಗಿವೆ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈ ದೇಶದ ಪ್ರಗತಿಯನ್ನು ಬಹುಶ 100 ರಿಂದ 500 ವರ್ಷಗಳ ಮೇಲ್ಪಂತಿಗೆ ಕೊಂಡೊಯ್ಯುತ್ತಿದ್ದಾರೆ. ರೈತರಿಗೆ 20,000 ಕೋಟಿಯನ್ನು ನೀಡುತ್ತಿದ್ದೇವೆ ಇದಕ್ಕೆ ಸಹಕರಿಸಿದ ಎಲ್ಲಾ ರೈತರಿಗೂ ಅಭಿನಂದನೆಗಳು ತಿಳಿಸುತ್ತೇನೆ ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ತಿಳಿದು ಕೆಲಸ ಮಾಡಬೇಕು”. ಕೇಂದ್ರ ಸಚಿವ ವಿ.ಸೋಮಣ್ಣ. 

ರೈತರಿಗೆ ಯಾವುದೇ ಸಂಕಷ್ಟ ಆಗದಂತೆ ಅವರಿಗೆ ನೀಡಬೇಕಾದ ಎಲ್ಲಾ ಸೌಲಭ್ಯಗಳನ್ನು ನೀಡುವುದು ಸರ್ಕಾರಗಳ ಜವಾಬ್ದಾರಿಯಾಗಿದೆ. ರೈತರ ಸಂಕಷ್ಟದ ಕಣ್ಣೀರು ಒರೆಸಬೇಕಿದೆ.

ಈ ದಿಸೆಯಲ್ಲಿ ಬಯಲುಸೀಮೆಯ ಜಿಲ್ಲೆಗಳಿಗೆ ನೀರುಣಿಸುವ ಎತ್ತಿನ ಹೊಳೆ ಯೋಜನೆ ಪ್ರಗತಿಯಲ್ಲಿದೆ. ಇದರೊಂದಿಗೆ ಈ ಹಿಂದೆ ಪರಮಶಿವಯ್ಯ ಅವರ ವರದಿಯನ್ನು ಸಹ ನಾವು ಜಾರಿಗೊಳಿಸಬೇಕಿದ್ದು, ಇದರಿಂದ ವ್ಯರ್ಥವಾಗಿ ಸಮುದ್ರ ಸೇರುವ 500 ಟಿಎಂಸಿ ನೀರು ಲಭ್ಯವಾಗಲಿದೆ. ಪ್ರಧಾನಿ ಮೋದಿ ಅವರಿಗೆ ಆಪ್ತರಾಗಿರುವ ಜಲಶಕ್ತಿ ಖಾತೆ ಹೊಂದಿರುವ ಸಚಿವ ಸೋಮಣ್ಣ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಸಬೇಕಿದೆ. ಕೆ.ಹೆಚ್ ಮುನಿಯಪ್ಪ, ಸಚಿವ

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ