Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಎಐಸಿಸಿ ಅಧ್ಯಕ್ಷ ಖರ್ಗೆ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ಪ್ರಚಾರದಲ್ಲಿ ನರೇಂದ್ರ ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಸಾಯುವುದಿಲ್ಲ ಎಂದು ಹೇಳಿಕೆ ನೀಡಿದ್ದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ಕುರಿತು ವಿಚಾರಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಭಾನುವಾರ ಚುನಾವಣಾ ಸಮಾವೇಶದಲ್ಲಿ ಮಾತನಾಡುತ್ತಿದ್ದಾಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥಗೊಂಡು ಕುಸಿದುಬಿದ್ದಿದ್ದರು. ಆದರೆ ತಕ್ಷಣವೇ ಸಾವರಿಸಿಕೊಂಡು ಮಾತು ಮುಂದುವರಿಸಿದ ಮಲ್ಲಿಕಾರ್ಜುನ ಖರ್ಗೆ, ನಾನು ಇಷ್ಟು ಬೇಗ ಸಾಯಲ್ಲ, ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಿಯೇ ಸಾಯುವುದು ಎಂದು ಹೇಳಿಕೆ ನೀಡಿದ್ದರು. ಖರ್ಗೆ ಅವರ ಈ ಹೇಳಿಕೆ ದೇಶಾದ್ಯಂತ ವೈರಲ್ ಆಗಿತ್ತು.

ಇದರ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆಗೆ ಭಾನುವಾರ ರಾತ್ರಿಯೇ ಪ್ರಧಾನಿ ಮೋದಿ ಕರೆ ಮಾಡಿ ಆರೋಗ್ಯ ವಿಚಾರಣೆ ಮಾಡಿದ್ದಾರೆ ಎನ್ನಲಾಗಿದೆ. ವೈಯಕ್ತಿಕವಾಗಿ ಮೋದಿ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ವಿಚಾರಿಸಿದ್ದು ಖರ್ಗೆ ಕೂಡ ಸಕಾರಾತ್ಮಕವಾಗಿಯೇ ಉತ್ತರಿಸಿದ್ದಾರೆ ಎನ್ನಲಾಗಿದೆ.

ಕೇಂದ್ರ ಸಚಿವ ಅಮಿತ್ ಶಾ ಅವರು ಇನ್ನು ಇದೇ ವಿಚಾರವಾಗಿ ಕಿಡಿಕಾರಿದ್ದು, ಮಲ್ಲಿಕಾರ್ಜುನ ಖರ್ಗೆ ತಮ್ಮ ವೈಯಕ್ತಿಕ ಆರೋಗ್ಯ ವಿಚಾರದಲ್ಲಿ ಅನಗತ್ಯವಾಗಿ ನರೇಂದ್ರ ಮೋದಿ ಅವರನ್ನು ಎಳೆದು ತರುತ್ತಿದ್ದಾರೆ. ಖರ್ಗೆ ಅವರು ತಮ್ಮ ಭಾಷಣದಲ್ಲಿ ಸಂಪೂರ್ಣ ಅನಗತ್ಯ ವಿಚಾರಗಳನ್ನು ಎತ್ತಿದ್ದಾರೆ.

ಇದು ಅವರ ದ್ವೇಷ ಪ್ರದರ್ಶನ ಮಾಡುತ್ತದೆ. ಇದು ಪ್ರಧಾನಿ ಮೋದಿಯವರ ಬಗ್ಗೆ ಕಾಂಗ್ರೆಸ್ ಹೊಂದಿರುವ ದ್ವೇಷ ಮತ್ತು ಭಯವನ್ನು ತೋರಿಸುತ್ತದೆ. ಅವರು ನಿರಂತರವಾಗಿ ಮೋದಿ ಅವರ ಬಗ್ಗೆಯೇ ಯೋಚಿಸುತ್ತಿದ್ದಾರೆ ಎಂದು ಅಮಿತ್ ಶಾ ಆರೋಪಿಸಿದರು.

ಪ್ರಧಾನಿ ಮೋದಿ ಮತ್ತು ನಾನು, ನಾವೆಲ್ಲರೂ ಖರ್ಗೆ ಅವರು ದೀರ್ಘ, ಆರೋಗ್ಯಕರ ಜೀವನ ನಡೆಸಲಿ ಎಂದು ಪ್ರಾರ್ಥಿಸುತ್ತೇವೆ. ಅವರು ಹಲವು ವರ್ಷಗಳ ಕಾಲ ಬದುಕಲಿ ಮತ್ತು 2047 ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ನೋಡಲು ಅವರು ಬದುಕಲಿ ಎಂದು ಅಮಿತ್ ಶಾ ವ್ಯಂಗ್ಯದ ರೀತಿಯಲ್ಲಿ ಹೇಳಿ ಕಾಂಗ್ರೆಸ್ ಗೆ ಟಾಂಗ್ ನೀಡಿದರು.

ಆದರೆ ಬಿಜೆಪಿ ಮಾತ್ರ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಬಗ್ಗೆ ತೀವ್ರ ಟೀಕೆ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಅಮಿತ್ ಶಾ, ಮಲ್ಲಿಕಾರ್ಜುನ ಖರ್ಗೆ ಭಾಷಣದ ಬಗ್ಗೆ ಅವರ ಪಕ್ಷದವರಿಂದಲೇ ಟೀಕೆ ಬಂದಿದೆ. ಖರ್ಗೆ ತಮ್ಮ ಆರೋಗ್ಯ ವಿಚಾರದಲ್ಲಿ ಅನಗತ್ಯವಾಗಿ ಮೋದಿ ಅವರನ್ನು ಎಳೆದು ತಂದಿದ್ದಾರೆ. ಅವರು ಮೋದಿ ಮೇಲೆ ಎಷ್ಟು ಧ್ವೇಷವಿಟ್ಟುಕೊಂಡಿದ್ದಾರೆ ಎಂದು ಈ ಹೇಳಿಕೆಯಿಂದಲೇ ಗೊತ್ತಾಗುತ್ತದೆ ಎಂದು ಬಿಜೆಪಿ ತಿಳಿಸಿದೆ.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ