Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಿಎಂ ವಿಶ್ವಕರ್ಮ ಯೋಜನೆ: 20 ಲಕ್ಷಕೂ ಹೆಚ್ಚು ನೊಂದಣಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ದೇಶದಲ್ಲಿ ಪಿಎಂ ವಿಶ್ವಕರ್ಮ ಯೋಜನೆಯಡಿ 20 ಲಕ್ಷಕ್ಕೂ ಹೆಚ್ಚು ಕುಶಲಕರ್ಮಿಗಳು ನೊಂದಣಿ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರ ರೂ.1400 ಕೋಟಿಗೂ ಹೆಚ್ಚು ಹಣವನ್ನು ಫಲಾನುಭವಿಗಳಿಗೆ ಸಬ್ಸಿಡಿ ರೂಪದಲ್ಲಿ ಬಿಡುಗಡೆ ಮಾಡಿದೆ ಎಂದು ಎಂದು ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು.

ನಗರದ ಶಾರದ ಸಭಾ ಭವನದಲ್ಲಿ ಶುಕ್ರವಾರ ಪಿಎಂ ವಿಶ್ವಕರ್ಮ ಯೋಜನೆ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ರಾಷ್ಟ್ರೀಯ ಪಿಎಂ ವಿಶ್ವಕರ್ಮ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ ಹಾಗೂ ಫಲಾನುಭವಿಗಳಿಗೆ ತರಬೇತಿ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು.

ಪಿಎಂ ವಿಶ್ವಕರ್ಮ ಯೋಜನೆ ಜಾರಿಗೆ ಬಂದಾಗಿನಿಂದ ಇಲ್ಲಿಯವರೆಗೂ ಸುಮಾರು 20 ಲಕ್ಷಕ್ಕೂ ಹೆಚ್ಚು ಕುಶಲಕರ್ಮಿಗಳು ನೋಂದಣಿ ಮಾಡಿಕೊಂಡಿದ್ದು, 8 ಲಕ್ಷ ಕುಶಲಕರ್ಮಿಗಳು ಉನ್ನತ ತರಬೇತಿಯನ್ನೂ ಪಡೆದಿದ್ದಾರೆ. ಈಗಾಗಲೇ 1.60 ಲಕ್ಷಕ್ಕೂ ಹೆಚ್ಚು ಜನರು ಇದರ ಲಾಭ ಪಡೆದಿದ್ದಾರೆ.  ಕುಶಲಕರ್ಮಿಗಳಿಗೆ ರೂ.15 ಸಾವಿರ ಟೂಲ್ ಕಿಟ್ ಪ್ರೋತ್ಸಾಹವನ್ನು ಮನೆ ಬಾಗಿಲಿಗೆ ಕೊಡುವ ವ್ಯವಸ್ಥೆ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರ ಸಾಮಾಜಿಕ ಕಳಕಳಿ ಮತ್ತು ಕಾಳಜಿಯಿಂದ ದೇಶದ  18 ವಿವಿಧ ಕ್ಷೇತ್ರಗಳ ಅಡಿಯಲ್ಲಿ ಕುಲದ ಕಸುಬು ನಂಬಿ ಜೀವನ ನಡೆಸುತ್ತಿರುವ ವರ್ಗದವರಿಗೆ ಆರ್ಥಿಕ ನೆರವು, ಸ್ವಯಂ ಉದ್ಯೋಗ, ವ್ಯಾಪಾರ ವಹಿವಾಟು  ಸೌಲಭ್ಯ ಕಲ್ಪಿಸುವ ಕಳೆದ ವರ್ಷ ಸೆ.17ರಂದು ರೂ.13 ಸಾವಿರ ಕೋಟಿ ವೆಚ್ಚದಲ್ಲಿ ಪಿಎಂ ವಿಶ್ವಕರ್ಮ ಯೋಜನೆ ಅನುಷ್ಠಾನಗೊಳಿಸಿದರು.

 ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಬಡಿಗೆ ವೃತ್ತಿ ಮಾಡುವವರು, ದೋಣಿ ತಯಾರಿಸುವವರು, ಕಮ್ಮಾರ ವೃತ್ತಿ ಮಾಡುವವರು, ಕಲ್ಲುಕುಟಿಗ ವೃತ್ತಿ ಮಾಡುವವರು, ಟೈಲರಿಂಗ್, ಚಾಫೆ-ಕಸ ಪೊರಕೆ ತಯಾರಕರು, ಗೊಂಬೆ ಮತ್ತು ಆಟಿಕೆ ತಯಾರಕರು, ಕ್ಷೌರಿಕ ವೃತ್ತಿ ಮಾಡುವವರು, ಸುತ್ತಿಗೆ ಮತ್ತು ಉಪಕರಣಗಳನ್ನು ತಯಾರಿಸುವವರು, ಹೂಮಾಲೆ ತಯಾರಕರು, ದೋಬಿ, ಅಭರಣ ತಯಾರಕರು, ಕುಂಬಾರ ವೃತ್ತಿ ಮಾಡುವವರು, ಮೀನು ಬಲೆ ಹೆಣೆಯುವವರು, ಶಿಲ್ಪಿ, ಚಮ್ಮಾರ, ಪಾದರಕ್ಷೆ ತಯಾರಕರು, ಬೀಗ ತಯಾರಿಕಾ ಕುಶಲಕರ್ಮಿಗಳು ಸೇರಿದಂತೆ ಹೀಗೆ 18 ಬಗೆಯ ಕುಲಕಸುಬು ನಂಬಿ ಜೀವನ ನಡೆಸುವ ವಿಶ್ವಕರ್ಮ ಪಾಲುದಾರರು ಈ ಯೋಜನೆಯ ಫಲಾನುಭವಿಗಳಾಗಿದ್ದು, ಈ ಕುಶಲಕರ್ಮಿಗಳಿಗೆ ವಿಶೇಷ ಯೋಜನೆ ಜಾರಿಗೆ ತರುವ ಮೂಲಕ ರೂ.3 ಲಕ್ಷದವರೆಗೂ ಸಾಲ ಕೊಡುವ ವ್ಯವಸ್ಥೆ ಕಲ್ಪಿಸಲಾಗಿದೆ.

 ಅದಲ್ಲದೇ 30 ತಿಂಗಳ ಅವಧಿಯೊಳಗೆ ಅತೀ ಕಡಿಮೆ ಬಡ್ಡಿಯಲ್ಲಿ ಶೇ.5 ಬಡ್ಡಿದರಲ್ಲಿ ಸಾಲ ಮರುಪಾವತಿಗೂ ಅವಕಾಶ ನೀಡಲಾಗಿದೆ. ಕೇಂದ್ರ ಸರ್ಕಾರ ಶೇ.8ರಷ್ಟು  ಬಡ್ಡಿ ಸಬ್ಸಿಡಿ ತುಂಬಲಿದೆ ಎಂದರು.

ಸರ್ಕಾರದ ಅಂಗಸಂಸ್ಥೆಯಾದ  ನಕಾಫ್ ಸಂಸ್ಥೆಯ ತರಬೇತಿ ವ್ಯವಸ್ಥಾಪಕ ಉಮಾಕಾಂತ್ ಮನ್ನಾಳೆ ಮಾತನಾಡಿ, ಪಿಎಂ ವಿಶ್ವಕರ್ಮ ಯೋಜನೆಯಡಿ ಚಿತ್ರದುರ್ಗ ನಗರದ ಅಮ್ಮ ಪಬ್ಲಿಕ್ ಶಾಲೆಯಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಮಾಲಾಕಾರ್, ಬಾಸ್ಕೆಟ್ ಮೇಕರ್, ದೋಬಿ ಸೇರಿದಂತೆ ವಿವಿಧ ಬಗೆಯ ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ ತರಬೇತಿ ಕೋರ್ಸ್ ನಡೆಯುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ 700 ಜನರಿಗೆ ತರಬೇತಿ ನೀಡಲಾಗಿದ್ದು, ಎಲ್ಲರಿಗೂ ಶಿಷ್ಯವೇತನ ಹಾಗೂ ಟೂಲ್ ಕಿಟ್ ವಿತರಣೆ ಹಾಗೂ ಸಾಲ-ಸೌಲಭ್ಯಕ್ಕೂ ಕ್ರಮವಹಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ವೇವಣ್ಣ ಸೇರಿದಂತೆ ವಿಶ್ವಕರ್ಮ ಯೋಜನೆಯ ಫಲಾನುಭವಿಗಳು ಇದ್ದರು.



Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ