ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ಆವರಣದಲ್ಲಿ ಸೆಪ್ಟೆಂಬರ್ 5 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30ರವರೆಗೆ ಮೊದಲ ಪ್ರಜಾ ಸೇವಾ ಆಂದೋಲನ ಸಭೆ ಶಾಸಕ ಧೀರಜ್ ಮುನಿರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ತಾಲ್ಲೂಕಿನ ಸಾರ್ವಜನಿಕರು ತಮ್ಮ ಕುಂದು ಕೊರತೆಗಳ ಅಹವಾಲುಗಳನ್ನು ಸಲ್ಲಿಸಬೇಕು ಎಂದು ತಹಶೀಲ್ದಾರ್ ಮಲ್ಲಪ್ಪ ಕೆ.ಯರಗೋಳ ಹೇಳಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ಆವರಣದಲ್ಲಿ ಸೆಪ್ಟೆಂಬರ್ 5 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30ರವರೆಗೆ ಮೊದಲ ಪ್ರಜಾ ಸೇವಾ ಆಂದೋಲನ ಸಭೆ ಶಾಸಕ ಧೀರಜ್ ಮುನಿರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ತಾಲ್ಲೂಕಿನ ಸಾರ್ವಜನಿಕರು ತಮ್ಮ ಕುಂದು ಕೊರತೆಗಳ ಅಹವಾಲುಗಳನ್ನು ಸಲ್ಲಿಸಬೇಕು ಎಂದು ತಹಶೀಲ್ದಾರ್ ಮಲ್ಲಪ್ಪ ಕೆ.ಯರಗೋಳ ಹೇಳಿದರು.
ಅವರು ಈ ಬಗ್ಗೆ ಮಾಹಿತಿ ನೀಡಿ, ಪ್ರಜಾ ಸೇವಾ ಇಲಾಖೆಯು ಜನರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರದ ವಿನೂತನ ಕಾರ್ಯಕ್ರಮವಾದ ಪ್ರಜಾ ಸೇವಾ ಜನಾಂದೋಲನವಾಗಿದೆ. ಸಭೆಯಲ್ಲಿ ತಾಲ್ಲೂಕಿನ ಎಲ್ಲಾ ಇಲಾಖೇಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಾರ್ವಜನಿಕರ ಮನೆಬಾಗಿಲಿಗೆ ಮುಖ್ಯಮಂತ್ರಿಗಳ ಸಂದೇಶ ಪತ್ರ, ಕುಂದು ಕೊರತೆ ಅರ್ಜಿ ನಮೂನೆ ವಿತರಿಸಲು ಪಿಡಿಒ ಸೇರಿದಂತೆ ಸ್ಥಳೀಯ ಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಸಾರ್ವಜನಿಕರು ಅರ್ಜಿ ನಮೂನೆ ಪಡೆದು ಯಾವ ಇಲಾಖೆಗೆ ಸಂಬಂಧಿಸಿದ ಸೌಲಭ್ಯ, ಅಹವಾಲು ಇದೆ ಎಂಬುದನ್ನು ಭರ್ತಿ ಮಾಡಿ ಕೌಂಟರ್ ಗಳಲ್ಲಿ ನೀಡಬೇಕು. ಸ್ಥಳದಲ್ಲಿ ಪರಿಹರಿಸುವ ಅಹವಾಲುಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಪರಿಹರಿಸಲಾಗುವುದು, ಉಳಿದ ಅರ್ಜಿಗಳನ್ನು ಸ್ವೀಕರಿಸಿ, ಸ್ವೀಕೃತಿಯನ್ನು ಅರ್ಜಿದಾರರಿಗೆ ನೀಡಲಾಗುವುದು ಎಂದರು.




