Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ಹೊರ ವರ್ತುಲ ರೈಲ್ವೆ ಯೋಜನೆ ಕುರಿತು ಪೂರ್ವಭಾವಿ ಸಭೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಕುಮಾರ ಕೃಪಾದಲ್ಲಿ ಬೆಂಗಳೂರು ಹೊರ ವರ್ತುಲ ರೈಲ್ವೆ ಯೋಜನೆಯ ಕುರಿತು ಪೂರ್ವಭಾವಿ ಪರಿಶೀಲನಾ ಸಭೆ ನಡೆಸಿ, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕೇಂದ್ರ ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ಅವರು ಚರ್ಚಿಸಿದರು.

ಬೆಂಗಳೂರಿನ ಕುಮಾರ ಕೃಪಾದಲ್ಲಿ, ರೈಲ್ವೆ ಇಲಾಖೆಯ ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಿಶೀಲನಾ ಸಭೆ ನಡೆಸಲಾಯಿತು.

ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಮಾತನಾಡಿ ನ್ಯೂನತೆ ಇದೆ ಅಂತ ಸಂಸದರು ಹೇಳಿದ್ದರಿಂದ ವರ್ತುಲ ರೈಲ್ವೆ ಕುರಿತು ಪೂರ್ವಭಾವಿ ಸಭೆ ಮಾಡಿದ್ದೇವೆ. 271 ಕಿ.ಮೀ ವರ್ತುಲ ರೈಲ್ವೆ ಯೋಜನೆ ಇದಾಗಿದ್ದು, ಇದಕ್ಕೆ ಸಬರ್ಬನ್ ರೈಲು ಜೋಡಿಸಬೇಕು. ಹೇಗೆ ಜೋಡನೆ ಮಾಡಬೇಕೆಂಬುದರ ಬಗ್ಗೆ ಚರ್ಚೆಯಾಗಿದೆ ಎಂದು ತಿಳಿಸಿದ್ದಾರೆ.

ಈ ಮಹತ್ವದ ಯೋಜನೆಗೆ ಒಟ್ಟು 2,500 ಎಕರೆ ಜಾಗ ಬೇಕಾಗುತ್ತದೆ. ರೈಲ್ವೆ ಇಲಾಖೆಯೇ ಸಂಪೂರ್ಣ ಹಣ ಕೊಡುತ್ತದೆ. ಹಳ್ಳಿಗಳ ಮದ್ಯೆ ಹೋಗಬಾರದೆಂಬ ಅಭಿಪ್ರಾಯ ಇದೆ. ಕೆಐಇಡಿಬಿಯನ್ನು ಉಪಯೋಗಿಸಿಕೊಳ್ಳುತ್ತಿದ್ದೇವೆ. ಇದರ ಬಗ್ಗೆ ಅಧಿಕಾರಿಗಳೆಲ್ಲಾ ಕುಳಿತು ಚರ್ಚೆ ಮಾಡ್ತಾರೆ. ನಂತರ ಡಿಪಿಆರ್ ತಯಾರು ಮಾಡುತ್ತೇವೆ ಎಂದು ಸೋಮಣ್ಣ ಹೇಳಿದರು.

ಮುಂದಿನ 50 ವರ್ಷಗಳ ಮಹತ್ವದ ಯೋಜನೆ ಇದು. ದೇವನಹಳ್ಳಿ ಹಾಗೂ ಯಲಹಂಕ ಮಧ್ಯೆ ಟರ್ಮಿನಲ್ ಸಿದ್ಧತೆ ಮಾಡಬೇಕಾಗುತ್ತದೆ. ಗೂಡ್ಸ್, ಪ್ಯಾಸೆಂಜರ್ ಎರಡೂ ರೈಲು ಇರಲಿದೆ. ಮೆಗಾಕೋಚಿಂಗ್ ಟರ್ಮಿನಲ್ ಗೆ ಡಿಪಿಆರ್ ಆಗಿದೆ. ಸಂಪೂರ್ಣ ಹಣವನ್ನು ಕೇಂದ್ರ ಸರ್ಕಾರ ಕೊಡಲಿದೆ ಎಂದರು.



ಪೂರ್ವಭಾವಿ ಸಭೆಯಲ್ಲಿ ಕೇಂದ್ರದ ರಾಜ್ಯಖಾತೆ ಸಚಿವರು ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದೆ ಕು. ಶೋಭಾ ಕರಂದ್ಲಾಜೆ, ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್ ಮುನಿಯಪ್ಪ, ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯ ಪಿ.ಸಿ ಮೋಹನ್, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಾ. ಸಿ.ಎನ್ ಮಂಜುನಾಥ್ ಅವರು ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ