Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಕಸಿತಾ ಕೃಷಿ ಸಂಕಲ್ಪ ಅಭಿಯಾನಕ್ಕೆ ಸಿದ್ಧತೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕಿನ ತೂಬಗೆರೆ ಹೋಬಳಿ ಹಾಡೋನಹಳ್ಳಿ ಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮುಂಗಾರಿಗೆ ಕೃಷಿ ಸಿದ್ಧತೆಯನ್ನು ಮಾಡಿಕೊಳ್ಳಲು ರೈತರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಭಾರತ ಸರ್ಕಾರವು ಮೇ
26 ರಿಂದ ಜೂನ್ 12. 2025 ರವರೆಗೆ ದೇಶಾಧ್ಯಾಂತ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಳ್ಳಲು ಸೂಚಿಸಿದೆ. ಈ ಅಭಿಯಾನವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಯಶಸ್ವಿಗೊಳಿಸಲು ಹಾಡೋನಹಳ್ಳಿಯ ಭಾ.ಕೃ.ಸಂ.ಪ ಕೃಷಿ ವಿಜ್ಞಾನ ಕೇಂದ್ರವು ಕಾರ್ಯೋನ್ಮುಖವಾಗಿದೆ.

ಕೃಷಿ ವಿಜ್ಞಾನಿಗಳ ನಡೆ  ರೈತರ ಕಡೆ ಎಂಬ ಧೈಯೋದ್ದೇಶವನ್ನು ಸಫಲಗೊಳಿಸುವ ನಿಟ್ಟಿನಲ್ಲಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ಹನುಮಂತರಾಯ, ಬಿ.ಜಿ, ರವರು ಕೃಷಿ ವಿಜ್ಞಾನ: ಕೇಂದ್ರದ ವಿಜ್ಞಾನಿಗಳು, ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಹಾಗೂ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ಅಂಗ ಸಂಸ್ಥೆಗಳ ವಿಜ್ಞಾನಿ ಗಳನ್ನೊಳ ಗೊಂಡ. 3 ತಂಡಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ೧೩೫ ಹಳ್ಳಿಗಳಲ್ಲಿ ಮುಂಗಾರು ಪೂರ್ವ ಆಂದೋಲನ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ದ ಮೂಲಕ ದಿನಾಂಕ: 25,05,2025 ರಿಂದ 12,06,2025 ರವರೆಗೆ ಜಾಗೃತಿಯನ್ನು ಮೂಡಿಸುವುದ್ದಕ್ಕಾಗಿ ಯೋಜನೆಯನ್ನು ರೂಪಿಸಲಾಗಿದೆಯೆಂದು ತಿಳಿಸಿದರು.

 ಪ್ರಮುಖ ಬೆಳೆಗಳ ಉತ್ಪದಾಕತೆಯನ್ನು ಹೆಚ್ಚಿಸಲು ರೈತರಲ್ಲಿ ಜಾಗೃತಿ ಮೂಡಿಸಲು ತೆಗೆದು ಕೊಳ್ಳಬೇಕಾದ ಸುಧಾರಿತ ಬೇಸಾಯ ಕ್ರಮಗಳು, ಅಧಿಕ ಇಳುವರಿ ಹಾಗೂ ಬರ ಸಹಿಷ್ಣುತೆ ತಳಿಗಳ ಬಗ್ಗೆ, ಪೋಷಕಾಂಶಗಳ ನಿರ್ವಹಣೆ, ಕೀಟ ಮತ್ತು ರೋಗಗಳ ನಿರ್ವಹಣೆ, ಮಣ್ಣು ಪರೀಕ್ಷೆಯಾಧಾರಿತ ರಸಗೊಬ್ಬರಗಳು /

ಜೈವಿಕ ಗೊಬ್ಬರಗಳ ಬಳಕೆ, ಮಣ್ಣು ಮತ್ತು ನೀರು ಸಂರಕ್ಷಣೆ, ಕೃಷಿಯ ಇತರ ಉಪಕಸುಬುಗಳಾದ ಹೈನುಗಾರಿಕೆ, ಮೀನುಗಾರಿಕೆ, ಜೇನು ಕೃಷಿ, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ, ಆಣಬೆ ಬೇಸಾಯ ಹಾಗೂ ಕೃಷಿಯಲ್ಲಿ ಯಾಂತ್ರೀಕರಣ ಮುಂತಾದ ವಿಷಯಗಳ ಬಗ್ಗೆ ವಿಜ್ಞಾನಿಗಳ ಮೂಲಕ ಅರಿವು ಮೂಡಿಸುವುದಕ್ಕಾಗಿ ಭಾರತ ಸರ್ಕಾರವು ಈ ಅಭಿಯಾನವನ್ನು ಆಯೋಜಿಸಿದೆ.

ಅಲ್ಲದೆ, ಕೃಷಿಗೆ ಸಂಬಂಧಪಟ್ಟ ಖಾಸಗಿ ಕಂಪೆನಿಗಳು ಸಹ ಭಾಗವಹಿಸಲಿದ್ದು ಕೃಷಿಯಲ್ಲಿ ಡೋಕ್ ಬಳಕೆ ಹಾಗೂ ಇತರ ಪ್ರಾತ್ಯಕ್ಷಿಕೆಗಳನ್ನು ಸಹ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಈ ಅಭಿಯಾನದ ತಂಡವು ತಮ್ಮ ಗ್ರಾಮಗಳಿಗೆ ಬಂದಾಗ ರೈತ ಬಾಂಧವರೆಲ್ಲರೂ ತಪ್ಪದೇ ಭಾಗವಹಿಸಿ ಈ ಅಭಿಯಾನವನ್ನು ಸಫಲ ಗೊಳಿಸುವುದರೊಂದಿಗೆ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೃಷಿ ವಿಜ್ಞಾನ ಕೇಂದ್ರ ಮುಖ್ಯಸ್ಥರು ತಿಳಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ