Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲೆಯ ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧ: ಜಿಲ್ಲಾಧಿಕಾರಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂ.ಗ್ರಾ.ಜಿಲ್ಲೆ:
ಭಯೋತ್ಪಾದಕರು/ದೇಶ ವಿರೋಧಿಗಳು ಡ್ರೋನ್ ಗಳು
, ರಿಮೋಟ್ ಕಂಟ್ರೋಲ್ಡ್  ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಸಾಧ್ಯತೆಯಿರುವುದರಿಂದ ಜಿಲ್ಲೆಯ ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

   ಭಾರತ ಮತ್ತು ಪಾಕಿಸ್ಥಾನ ದೇಶಗಳ ನಡುವಿನ ಬಿಗುವಿನ ವಾತಾವರಣ ಈಗ ಶಮನಗೊಂಡಿದೆ.  ಅದಾಗ್ಯೂ ತುರ್ತು ಸಂದರ್ಭಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವಂತಹ ಸೂಕ್ಷ್ಮವಲಯಗಳನ್ನು ಗುರುತಿಸಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಭದ್ರತಾ ಕಾಳಜಿಗಳ ದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಲಾಗಿದೆ.

   ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭದ್ರತೆಯನ್ನು ಒದಗಿಸುವ ಎಲ್ಲಾ ಖಾಸಗಿ ಭದ್ರತಾ ಏಜೆನ್ಸಿಗಳಿಗೆ ಮಾಹಿತಿ ನೀಡಲಾಗಿದ್ದು ಕಣ್ಗಾವಲು ಅಥವಾ ಇತರ ಉದ್ದೇಶಗಳಿಗಾಗಿ ಡ್ರೋನ್ ಗಳನ್ನು ನಿಯೋಜಿಸುವುದನ್ನು ತಪ್ಪಿಸಲು ಸಲಹೆಗಳನ್ನು ಸೂಚಿಸಲಾಗಿದೆ. 

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವಂತಹ ಸೂಕ್ಷ್ಮವಲಯಗಳು
ದೇವನಹಳ್ಳಿ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಇಂಡಿಯನ್ ಆಯಿಲ್ ಸ್ಕೈಟ್ಯಾಂಕಿಂಗ್ಲಿ, ದೊಡ್ಡಬಳ್ಳಾಪುರ: ಮುಶಾಶಿ ಆಟೋ ಪಾರ್ಟ್ಸ್ ಪ್ರೈ. ಲಿಮಿಟೆಡ್.

ಹೊಸಕೋಟೆ: IOCL - ಇಂಡೇನ್ ಬಾಟ್ಲಿಂಗ್ ಪ್ಲಾಂಟ್, BPCL, IOCL, HPCL, MRPL, ನೆಲಮಂಗಲ:ಜ್ಯೋತಿಗ್ಯಾಸ್ ಪ್ರೈ ಲಿಮಿಟೆಡ್, ಇಂಡೋಗ್ಯಾಸ್, ಟೋಟಲ್ ಆಯಿಲ್ ಇಂಡಿಯಾ ಪ್ರೈ. ಲಿಮಿಟೆಡ್, ಏಜಿಸ್ ಗ್ಯಾಸ್ LPG ಪ್ರೈವೇಟ್ ಲಿಮಿಟೆಡ್, ಸ್ನೇಹಾ ಪೆಟ್ರೋಲಿಯಂ ಪ್ರೈ. ಲಿಮಿಟೆಡ್, ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್ (ರೋಲಿಂಗ್ ಮಿಲ್ ವಿಭಾಗ), ಜ್ಯೋತಿಗ್ಯಾಸ್  ಪ್ರೈ. ಲಿಮಿಟೆಡ್.

ಸಂಭವನೀಯ ವಿಧ್ವಂಸಕ ಕೃತ್ಯಗಳನ್ನು ತಡೆಗಟ್ಟಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಇಲಾಖೆಗೆ ಭದ್ರತೆಯನ್ನು ಒದಗಿಸಲು ತಿಳಿಸಿದೆ. ಜೊತೆಗೆ ಅಂತಹ ಚಟುವಟಿಕೆಗಳ ಮೇಲೆ ಕೆಲವು ನಿರ್ಬಂಧಗಳನ್ನು ಹಾಕುವುದು ಅಗತ್ಯವಾಗಿದೆ. ಜಿಲ್ಲಾ ಅಗ್ನಿಶಾಮಕದಳ ತುರ್ತು ಸಂದರ್ಭಗಳಲ್ಲಿ ಸಿದ್ಧರಿರಬೇಕು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ವಿಶೇಷವಾಗಿ ನಾಗರಿಕರಿಗೆ ಯಾವುದೇ ತೊಂದರೆ ಮತ್ತು ಅಪಘಾತಗಳನ್ನು ನಿರ್ವಹಿಸಲು ಸನ್ನದ್ಧವಾಗಿರಲು ಜಾಗೃತಿ ಮೂಡಿಸಲಾಗುವುದು.

 ನಕಲಿ ಸುದ್ದಿಗೆ ಕಡಿವಾಣ-
ಯಾವುದೇ ನಕಲಿ ಅಥವಾ ಸುಳ್ಳು ಸುದ್ದಿ ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸರಣ
, ಬಿತ್ತರವಾಗುವ ಸಂಗತಿಗಳನ್ನು ತಕ್ಷಣವೇ ನೈಜ ಸಂಗತಿಯೊಂದಿಗೆ ಪರಿಶೀಲಿಸಿ ಕ್ರಮಕೈಗೊಂಡು, ಇವುಗಳ ಮೂಲವನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.

ಸಮುದಾಯಗಳ ಮುಖಂಡರು ಮತ್ತು ಇತರ ಪ್ರಮುಖ ನಾಗರಿಕರೊಂದಿಗೆ ವಾಟ್ಸಾಪ್ ಗುಂಪುಗಳು ಸಕ್ರಿಯವಾಗಿರಬೇಕು, ಯಾವುದೇ ಸುಳ್ಳು ವದಂತಿಗಳು ಕಂಡು ಬಂದಾಗ ತಕ್ಷಣವೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಂಟ್ರೋಲ್ ರೂಂ. ಸಂಖ್ಯೆ: 080-28388005 ಗೆ ಸಂಪರ್ಕಿಸಿ ಮಾಹಿತಿಯನ್ನು ತಿಳಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ