LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

‘ಕುವೆಂಪು ವೃತ್ತ’ ನಾಮಕರಣಕ್ಕೆ ಪ್ರಕ್ರಿಯೆ ಆರಂಭ; ಆಕ್ಷೇಪಣೆ ಸಲ್ಲಿಕೆಗೆ 30 ದಿನ ಗಡುವು

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಚಿತ್ರದುರ್ಗ:
ನಗರದ ಶ್ರೀ ಚೆನ್ನಕೇಶವಸ್ವಾಮಿ ಬಡಾವಣೆ ಹಾಗೂ ಮಲ್ಲಯ್ಯ ಬಡಾವಣೆಯ ಮಧ್ಯಭಾಗದಲ್ಲಿರುವ ನಾಲ್ಕು ಕೂಡು ರಸ್ತೆಗಳ ಸ್ಥಳಕ್ಕೆ ಕುವೆಂಪು ವೃತ್ತಎಂದು ನಾಮಕರಣ ಮಾಡಲು ನಗರಸಭೆ ನಿರ್ಧರಿಸಿದೆ.

 ಚಿತ್ರ ಡಾನ್ ಬೋಸ್ಕೊ ಕಾಲೇಜು ಬಳಿ ಇರುವ ಕುವೆಂಪು ನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘವು ಸಲ್ಲಿಸಿದ್ದ ಮನವಿ ಪುರಸ್ಕರಿಸಿ, ಜಿಲ್ಲಾಧಿಕಾರಿಗಳು ಹಾಗೂ ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕರ್ನಾಟಕ ಪೌರಸಭೆಗಳ ಅಧಿಕಾರಿಗಳು (ಮಾಗದರ್ಶಿ ನಕಲು ಮಂಜೂರಾತಿ ಮತ್ತು ಇತರೆ ನಿಯಮಗಳು) 1966ರ ನಿಯಮ 39ರ ಪ್ರಕಾರ, ಈ ನಾಮಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸಲಹೆ ಹಾಗೂ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.

ಸಾರ್ವಜನಿಕರು ಅಥವಾ ಸಂಘ-ಸಂಸ್ಥೆಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಪ್ರಕಟಣೆ ಹೊರಡಿಸಿದ 30 ದಿನಗಳ ಒಳಗಾಗಿ ಚಿತ್ರದುರ್ಗ ನಗರಸಭೆ ಪೌರಾಯುಕ್ತರಿಗೆ ಲಿಖಿತ ರೂಪದಲ್ಲಿ ಸಲ್ಲಿಸಬೇಕಾಗಿದೆ. ನಿಗದಿತ ಅವಧಿ ಮುಗಿದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ 3 ದಿನಗಳ ವಸತಿಯುಕ್ತ ಉಚಿತ ಸಾವಯವ ಕೃಷಿ ತರಬೇತಿ ಹಾಗೂ ಪ್ರವಾಸಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಕುಮಾರಸ್ವಾಮಿ, ಆರ್.ಅಶೋಕ್ ಚಾಲನೆ: ಪಾದಯಾತ್ರೆಯಲ್ಲಿ ಹಿರಿಯೂರು ಮುಖಂಡರು ಭಾಗಿಸರ್ಕಾರಿ ಶಾಲೆಗೆ ಭೂಮಿ ದಾನ ಅತ್ಯಂತ ಶ್ರೇಷ್ಠ ಕಾರ್ಯ-ಎನ್. ಶ್ರೀನಿವಾಸ್ ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ:ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ಬೈರಮಂಗಲದಿಂದ ಬೆಂಗಳೂರಿಗೆ 'ಪಾದಯಾತ್ರೆ' ಆರಂಭ"ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ": ಹೆಚ್.ಡಿ. ಕೆ ವಾಗ್ದಾಳಿ ಖಾತೆ ಹಂಚಿಕೆ, ಸಂಪುಟ ಪುನಾರಚನೆ ಕಸರತ್ತು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಶಿವಕುಮಾರ್ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ; ರೆಡ್ಡಿ ಬ್ರದರ್ಸ್‌ಗೆ ಈಶ್ವರ್ ಖಂಡ್ರೆ ತಿರುಗೇಟು