Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಮಲ್ ಹಾಸನ್ ಹೇಳಿಕೆ ಖಂಡಿಸಿ ಡಾ. ರಾಜಕುಮಾರ್ ಅಭಿಮಾನಿ ಸಂಘದಿಂದ ಪ್ರತಿಭಟನೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕಾರ್ಯಕ್ರಮವೊಂದರಲ್ಲಿ ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದ್ದು
, ಕನ್ನಡಕ್ಕೆ ತಮಿಳು ತಾಯಿ ಇದ್ದಂತೆ ಎಂಬ ಕಮಲ್ ಹಾಸನ್ ರವರ ಹೇಳಿಕೆಯನ್ನು ಖಂಡಿಸಿ ದೊಡ್ಡಬಳ್ಳಾಪುರ ತಾಲೂಕು ರಾಜಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ನಗರದ ಡಿ. ಕ್ರಾಸ್ ನ ಡಾ. ರಾಜಕುಮಾರ್ ವೃತ್ತದಲ್ಲಿ ಸಾಂಕೇತಿಕ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆಯಲ್ಲಿ ಡಾ. ರಾಜ್ ಅಭಿಮಾನಿ ಸಂಘದ ಅಧ್ಯಕ್ಷ ಸು. ನರಸಿಂಹಮೂರ್ತಿ ಮಾತನಾಡಿ ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂಬ ಕಮಲಹಾಸನ್ ಹೇಳಿಕೆ ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿದೆ. ಚಿತ್ರರಂಗದಲ್ಲಿ ಕಮಲ್ ಉನ್ನತ ಸ್ಥಾನಕ್ಕೇರಲು ಕನ್ನಡಿಗರೂ ಸಹ ಕಾರಣ ಎಂಬುದನ್ನು ಕಮಲ್ ಮರೆತಂತಿದೆ. ಕನ್ನಡ ಭಾಷೆಗೆ ಪ್ರಾಚೀನ ಇತಿಹಾಸವಿದೆ. ಬೇರ್ಯಾವುದೇ ಭಾಷೆಯಿಂದಲೂ ಕನ್ನಡ ಬೆಳೆದಿಲ್ಲ ಕಮಲ್ ಹಾಸನ್ ಇದನ್ನು ಅರಿಯಬೇಕು.

ತಮ್ಮ ಚಿತ್ರಕ್ಕೋಸ್ಕರ ತಮಿಳರ ಓಲೈಕೆಗೋಸ್ಕರ ಕನ್ನಡವನ್ನು ಕಡೆಗಣಿಸುವ ರೀತಿ ಮಾತನಾಡಿದ್ದು ಕನ್ನಡಿಗರು ಉಗ್ರವಾಗಿ ಖಂಡಿಸುತ್ತಾರೆ. ಈ ಕೂಡಲೇ ಕಮಲ್ ಹಾಸನ್ ತನ್ನ ತನ್ನ ಕನ್ನಡ ವಿರೋಧಿ ಹೇಳಿಕೆಯನ್ನು ವಾಪಾಸ್ ಪಡೆದು ಕನ್ನಡಿಗರ ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಕರ್ನಾಟಕದಲ್ಲಿ ಕಮಲ್ ಚಿತ್ರಗಳನ್ನು ಬಿಡುಗಡೆ ಮಾಡಲು ಬಿಡುವುದಿಲ್ಲ ಎಂದ ನರಸಿಂಹಮೂರ್ತಿ ಈ ಕಾರ್ಯಕ್ರಮದಲ್ಲಿ ನಟ ಶಿವರಾಜಕುಮಾರ್ ಕೂಡಾ ಭಾಗಿಯಾಗಿದ್ದು ಕಮಲಹಾಸನ್ ಹೇಳಿಕೆಯನ್ನು ಖಂಡಿಸದೆ ತಾವೂ ಕೂಡ ತಮಿಳರ ಓಲೈಕೆಗಾಗಿ ತಮಿಳಿನಲ್ಲೇ ಮಾತನಾಡಿದ್ದು ನಮಗೆಲ್ಲ ಬೇಸರ ತರಿಸಿದೆ.

ಹಿಂದೆ ಡಾ. ರಾಜಕುಮಾರ್ ತಮಿಳುನಾಡು ಹಾಗೂ ಆಂ ದ್ರದ ಕಾರ್ಯಕ್ರಮಗಳಿಗೆ ಹೋದಾಗ ಕನ್ನಡದಲ್ಲೇ ಮಾತನಾಡಿ ಕನ್ನಡದ ಹಿರಿಮೆಯನ್ನು ಎತ್ತಿ ಹಿಡಿದಿದ್ದರು ಇಂತದರಲ್ಲಿ ಶಿವರಾಜಕುಮಾರ ನಡೆ ಸರ್ವಥಾ ಸಾಧುವಲ್ಲ. ಈ ಬಗ್ಗೆ ಅಭಿಮಾನಿ ಸಂಘ ವಿಷಾದ ವ್ಯಕ್ತಪಡಿಸುತ್ತದೆ. ಮುಂದಿನ ದಿನಗಳಲ್ಲಿ ಕಮಲ್ ಕನ್ನಡಿಗರ ಕ್ಷಮೆ ಯಾಚಿಸದಿದ್ದರೆ ಕನ್ನಡಪರ ಸಂಘಟನೆಗಳ ಜೊತೆ ಗೂಡಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದರು.

     ಪ್ರತಿಭಟನೆಯಲ್ಲಿ ಸುರೇಶ ರಾವ್, ಅಪ್ಪಿ ವೆಂಕಟೇಶ್, ಚಂದ್ರಣ್ಣ, ಶಿವಾಜಿರಾವ್, ಚೌಡರಾಜ್, ಗಳಗಲ ಮಂಜು, ಬಾಲರಾಜ್, ನಾಗಭೂಷಣ್, ರಮೇಶ್, ಮೂರ್ತಿ, ಸೇರಿದಂತೆ ಅನೇಕ ಅಭಿಮಾನಿ ಸಂಘದ ಸದಸ್ಯರು ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ