LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೌರವ ಧನ ಹೆಚ್ಚಳಕ್ಕೆ ಆಗ್ರಹಿಸಿ ಬಿಸಿಯೂಟ ತಯಾರಕರ ಪ್ರತಿಭಟನೆ

Advertisement
Advertisement

 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬಿಸಿಯೂಟ ತಯಾರಕರು ಮತ್ತು ಸಿಬ್ಬಂದಿ ತಮ್ಮ ಗೌರವಧನ ಹೆಚ್ಚಳ
, ಸಾಮಾಜಿಕ ಭದ್ರತೆ ಹಾಗೂ ಕಾಯಂ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ತಾಲ್ಲೂಕು ಕಚೇರಿ ಪ್ರತಿಭಟನೆ ನಡೆಸಿದರು.

 ಬಿಸಿಯೂಟ ತಯಾರಕರನ್ನು ಸರ್ಕಾರಿ ನೌಕರರೆಂದು ಅಧಿಕೃತವಾಗಿ ಗುರುತಿಸಬೇಕು. ಹಾಗೂ ಕನಿಷ್ಠ ವೇತನ ಜಾರಿಗೊಳಿಸಬೇಕು. 202223ರಿಂದ ನಿವೃತ್ತರಾದ ತಯಾರಕರಿಗೆ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡಬೇಕು. ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾದ ಕಾರಣ ಕೆಲಸ ಕಳೆದುಕೊಂಡವರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಅಲ್ಲದೆ ಮೊಟ್ಟೆ ಸುಲಿಯುವ ಕೆಲಸಕ್ಕೆ ಪ್ರತಿ ಮೊಟ್ಟೆಗೆ 1 ನೀಡಬೇಕು. ಬಾಕಿ ಇರುವ ಮೊಟ್ಟೆ ಸುಲಿಯುವ ಹಣವನ್ನು ತಕ್ಷಣ ಪಾವತಿಸಬೇಕು. 100 ವಿದ್ಯಾರ್ಥಿಗಳಿರುವ ಶಾಲೆಗಳಲ್ಲಿ ಇಬ್ಬರ ಬದಲು ಮೂರು ಬಿಸಿಯೂಟ ತಯಾರಕರನ್ನು ನೇಮಿಸಬೇಕು. ಪ್ರತಿ ತಿಂಗಳು ಗೌರವಧನವನ್ನು ಸಮಯಕ್ಕೆ ಸರಿಯಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕು ಎಂದು ಆಗ್ರಹಿಸಿದರು.

ಬಿಸಿಯೂಟ ತಯಾರಕರಿಗೆ 10 ಲಕ್ಷ ಮರಣ ಪರಿಹಾರ, ನಿವೃತ್ತ ತಯಾರಕರ ಪಿಂಚಣಿ ಹಾಗೂ ಇತರೆ ಸೌಲಭ್ಯಗಳನ್ನು ಹೆಚ್ಚಿಸುವುದು, ಸರ್ಕಾರಿ ಶಾಲೆಗಳ ಬಿಸಿಯೂಟ ಸಿಬ್ಬಂದಿಯನ್ನು ಕೆಲಸದಿಂದ ತೆಗೆದುಹಾಕದೆ ಸೇವೆಯಲ್ಲಿ ಮುಂದುವರಿಸುವುದು ಹಾಗೂ ಬಿಸಿಯೂಟ ತಯಾರಕರಿಗಾಗಿ ಕಲ್ಯಾಣ ಮಂಡಳಿ ರಚಿಸಿ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಕಲ್ಪಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಎಐಟಿಯುಸಿ ತಾಲೂಕು ಅಧ್ಯಕ್ಷ ಮಹೇಶ್‌ಕುಮಾರ್ ರಾಜಘಟ್ಟ, ಎಐಟಿಯುಸಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಾಂತರಾಜ ಜೈನ್, ಭಾನುಪ್ರಕಾಶ್, ಬಿಸಿಯೂಟ ತಯಾರಕರ ಸಂಘದ ಅಧ್ಯಕ್ಷೆ ಮಾಲಾ, ಕಾರ್ಯದರ್ಶಿ ಅಂಜಲಿ ಹಾಗೂ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಬಿಸಿಯೂಟ ತಯಾರಕರು ಭಾಗವಹಿಸಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಣಿ ವಿಲಾಸ ಸಾಗರ ಹಾಗೂ ಗಾಯತ್ರಿ ಜಲಾಶಯಗಳಿಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿರ್ಬಂಧಆಗಸ್ಟ್ 12ಕ್ಕೆ 'ಶತಮಾನದ ಖಗ್ರಾಸ ಸೂರ್ಯಗ್ರಹಣ': ಭಾರತದಲ್ಲಿ ಗೋಚರವಿಲ್ಲ, ಯಾವುದೇ ಆಚರಣೆ ಅಗತ್ಯವಿಲ್ಲರಾಣಿ ಎಲಿಜಬೆತ್ ಹೊಗಳಿದ್ದ ನಮ್ಮ ವಿಧಾನಸೌಧವೇ ನನಗೆ ಸ್ಫೂರ್ತಿ-ಟಿ.ಬಿ ಜಯಚಂದ್ರಕೆಪಿಸಿಸಿ ಅಧ್ಯಕ್ಷರ ಆಶೀರ್ವಾದ ಸಿಕ್ಕಿದೆ- ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ ಯುವ ಜನತೆಗೆ ಯೋಗ, ವ್ಯಾಯಾಮ ಅತ್ಯಂತ ಅವಶ್ಯ:ದಿವ್ಯ ಜ್ಞಾನಾನಂದ ಶ್ರೀಎಸ್. ನಾಗೇನಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್ಸವರ್ಣೀಯ ಮುಖಂಡರಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ-ಮಾರಸಂದ್ರ ಮುನಿಯಪ್ಪಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆಮೈಸೂರಲ್ಲಿ  'ಜೋಡೆತ್ತು' ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್