Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಬಿಸಿಯೂಟ ತಯಾರಕರ ಪ್ರತಿಭಟನೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಬಿಸಿಯೂಟ ತಯಾರಕರಿಗೆ ಕನಿಷ್ಠ ವೇತನ ನೀಡದ ಅನಿಷ್ಠ ಸರ್ಕಾರದ ವಿರುದ್ದ ಎಐಟಿಯುಸಿ.ಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಬಿಸಿಯೂಟ ತಯಾರಕರ ಸಹಾಯಕ ನಿರ್ದೇಶಕ ಗುರುರಾಜ್ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಮನವಿ ಸಲ್ಲಿಸಲಾಯಿತು.


ದಾವಣಗೆರೆ ರಸ್ತೆಯಲ್ಲಿರುವ ಕಮ್ಯುನಿಸ್ಟ್ ಕಚೇರಿಯಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಎ.ಐ.ಟಿ.ಯು.ಸಿ. ಪ್ರಧಾನ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‌ಬಾಬು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ಕಳೆದ ೨೩ ವರ್ಷಗಳಿಂದಲೂ ರಾಜ್ಯದಲ್ಲಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ, ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರು ಮಾಡುತ್ತಿದ್ದಾರೆ.

ಕನಿಷ್ಟ ವೇತನ, ಜೀವನ ಭದ್ರೆತೆಯಿಲ್ಲದೆ ಮಧ್ಯಾಹ್ನ ೨ ಗಂಟೆವರೆಗೆ ದುಡಿಯುತ್ತಿರುವವರಿಗೆ ಹೆಚ್ಚುವರಿಯಾಗಿ ಸಂಜೆ ನಾಲ್ಕು ಗಂಟೆವರೆಗೆ ಕೆಲಸ ಮಾಡಿ ತಿಂಗಳಿಗೆ ಐದು ನೂರು ರೂ.ಗಳನ್ನು ಜಾಸ್ತಿಕೊಡುವುದಾಗಿ ರಾಜ್ಯ ಸರ್ಕಾರ ಹೇಳಿರುವುದು ನಾಚಿಕೆಗೇಡಿನ ಸಂಗತಿ.

ಜಾತಿ ಗಣತಿ ಸಮೀಕ್ಷೆಯಲ್ಲಿ ತೊಡಗಿದ ಶಿಕ್ಷಕರುಗಳಿಗೆ ೨೦ ಸಾವಿರ ರೂ.ಗಳನ್ನು ನೀಡುತ್ತಿರುವ ಸರ್ಕಾರ ಅವರ ಜೊತೆಗೆ ಹೋಗುವ ಅಂಗನವಾಡಿ ಕಾರ್ಯಕರ್ತರಿಗೆ ಯಾವ ಪಗಾರವೂ ಕೊಡುತ್ತಿಲ್ಲ. ಬಿಸಿಯೂಟ ತಯಾರಕರಿಗೆ ಹೆಚ್ಚುವರಿ ಕೆಲಸದ ಹೊರೆ ಹೇರಬಾರದೆಂದು ಎಚ್ಚರಿಸಿದರು.

ಚಿಕ್ಕಮಗಳೂರು ಜಿಲ್ಲೆ ಎಐಟಿಯುಸಿ. ಮುಖಂಡ ವಿಜಯಕುಮಾರ್ ಮಾತನಾಡಿ ಜಿಲ್ಲೆಯ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕಡಿಮೆಯಿದೆ ಎಂದು ಬಿಸಿಯೂಟ ತಯಾರಕರನ್ನು ಕೆಲಸದಿಂದ ತೆಗೆಯಲಾಗುತ್ತಿದೆ. ಮಕ್ಕಳ ಹಾಜರಾತಿ ಹೆಚ್ಚಿರುವ ಶಾಲೆಗಳಲ್ಲಿ ಬಿಸಿಯೂಟ ತಯಾರಕರು ಇಬ್ಬರು ಇಲ್ಲವೇ ಮೂವರಿದ್ದಾರೆ.

ಮಕ್ಕಳಿಗೆ ಹಾಲು ರಾಗಿ ಮಾಲ್ಟ್ ಕೊಡುವ ಕೆಲಸ ಮಾಡಬೇಕಿದೆ. ಬೇಯಿಸಿದ ಒಂದು ಮೊಟ್ಟೆ ಸುಲಿಯಲು ಒಂದು ರೂ. ಕೊಡಬೇಕು. ಕೆಲವು ಶಾಲೆಗಳಲ್ಲಿ ಬಿಸಿಯೂಟ ತಯಾರಕರನ್ನು ಶೌಚಾಲಯ ಸ್ವಚ್ಚಗೊಳಿಸಲು ಬಳಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಖಂಡಿಸಿದರು.

ಎಐಟಿಯುಸಿ. ತಾಲ್ಲೂಕು ಅಧ್ಯಕ್ಷ ಕಾಂ.ಟಿ.ಆರ್.ಉಮಾಪತಿ ಮಾತನಾಡುತ್ತ ಜಿಲ್ಲೆಯಲ್ಲಿ ನಿವೃತ್ತಿಯಾಗಿರುವ ಬಿಸಿಯೂಟ ತಯಾರಕರಿಗೆ ಇಂಡಿಗಂಟು ಇನ್ನು ಸಿಕ್ಕಿಲ್ಲ. ಕೂಡಲೆ ಇಡಿಗಂಟು ನೀಡಬೇಕು. ಸಂಜೆ ೪-೩೦ ರತನಕ ಶಾಲೆಯಲ್ಲಿದ್ದು, ಮಕ್ಕಳಿಗೆ ಸ್ನ್ಯಾಕ್ಸ್ ನೀಡುವಂತೆ ಬಿಸಿಯೂಟ ತಯಾರಕರಿಗೆ ಸರ್ಕಾರ ಸೂಚಿಸಿದೆ. ಕೂಡಲೆ ಇದನ್ನು ಕೈಬಿಡಬೇಕೆಂದು ಒತ್ತಾಯಿಸಿದರು.

ಕಾಂ.ಕೆ.ಈ.ಸತ್ಯಕೀರ್ತಿ, ಕಾಂ.ಫರ್ವಿನ್‌ಬಾನು, ಕಾಂ.ಕಾಂತಮ್ಮ, ಕಾಂ.ರಜೀಯಾ, ಕಾಂ.ಶಾಂತಮ್ಮ, ಕಾಂ.ನಾಗಮ್ಮ, ಕಾಂ.ಗಿರಿಜಮ್ಮ, ಕಾಂ.ಸುವರ್ಣಮ್ಮ, ಕಾಂ.ದ್ರಾಕ್ಷಾಯಿಣಮ್ಮ ಕಾಂ.ಎನ್.ಸಿ.ಕುಮಾರಸ್ವಾಮಿ ಸೇರಿದಂತೆ ನೂರಾರು ಬಿಸಿಯೂಟ ತಯಾರಕಿಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ