Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದಿಂದ ಪ್ರತಿಭಟನೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
 ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಎರಡು ದಿನಗಳ ಹಿಂದೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ೧೪೫೦ ಕೋಟಿ ರೂ. ಹಗರಣವಾಗಿರುವುದನ್ನು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು.

ನೊಂದಾಯಿತ ಕಟ್ಟಡ ಕಾರ್ಮಿಕರ ಗುರುತಿನ ಚೀಟಿಯನ್ನು ಮೂರು ವರ್ಷಗಳಿಗೊಮ್ಮೆ ನವೀಕರಿಸಬೇಕು. ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ನೀಡುತ್ತಿರುವ ಮಾಸಿಕ ಪಿಂಚಣಿಯನ್ನು ಆರು ಸಾವಿರ ರೂ.ಗಳಿಗೆ ಹೆಚ್ಚಿಸಿ ಪ್ರತಿ ತಿಂಗಳು ೧ ರಿಂದ ೫ ನೇ ತಾರೀಖಿನೊಳಗೆ ಪಾವತಿಸಬೇಕು. ರಾಜ್ಯಾದ್ಯಂತ ಮಂಡಳಿಯಿಂದ ತೆರೆಯಲಾಗಿರುವ ಅಂಬೇಡ್ಕರ್ ಸೇವಾ ಕೇಂದ್ರಗಳನ್ನು ಮುಚ್ಚಬೇಕು. ಚಿತ್ರದುರ್ಗ ಜಿಲ್ಲೆಗೆ ಐಟಿ, ಬಿಟಿ. ಕಂಪನಿಗಳನ್ನು ಸ್ಥಳಾಂತರಿಸುವಂತೆ ಪ್ರತಿಭಟನಾಕಾರರು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಸಂಗ್ರಹಿಸಲಾಗಿರುವ ಸೆಸ್ ಹಣ ಲೂಟಿಯಾಗಿರುವ ಬಗ್ಗೆ ಕಾರ್ಮಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದ್ದು, ಮಾಹಿತಿ ಹಕ್ಕು ಅಡಿ ಪಡೆದಿರುವ ದಾಖಲೆಗಳು, ಆಡಿಟ್ ವರದಿಗಳು ಹಾಗೂ ಇತರೆ ಸಾಕ್ಷ್ಯಾಧಾರಗಳ ಆಧಾರದ ಮೇಲೆ ನಿಸ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಂಡು ಕಟ್ಟಡ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವಂತೆ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವೈ.ಕುಮಾರ್ ಸರ್ಕಾರವನ್ನು ಆಗ್ರಹಿಸಿದರು.

ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ, ಉಪಾಧ್ಯಕ್ಷರುಗಳಾದ ಸಿ.ಕೆ.ಗೌಸ್‌ಪೀರ್, ಎಂ.ಆರ್.ನರಸಿಂಹಸ್ವಾಮಿ, ಎಂ.ಗೌಸ್‌ಖಾನ್, ಸೈಯದ್ ನಾದಿಆಲಿ, ಈಶ್ವರಪ್ಪ ಡಿ, ರಾಜಪ್ಪ ಈ, ತಿಮ್ಮಯ್ಯ ಎಂ, ಚಾಂದ್‌ಪೀರ್, ಬಸವರಾಜ್ ವೈ, ಕೆ.ರಾಜಪ್ಪ, ರಾಘವೇಂದ್ರ ಈ

ಆರ್.ಮಹಂತಪ್ಪ, ಸಲೀಂ, ಹೆಚ್.ವೃಷಬೇಂದ್ರ, ಭರತ್ ಎಸ್, ಕೆ.ಲಕ್ಷ್ಮಣ್, ಮೊಹಮದ್ ರಫಿ, ಪ್ರಸನ್ನ ಡಿ.ಎನ್. ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.