ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಾಯಕನಹಟ್ಟಿಯಲ್ಲಿ ವಾಸಿಸುತ್ತಿರುವ ಅಲೆಮಾರಿ ಜನಾಂಗದವರಿಗೆ ಮೂಲಭೂತ ಸೌಲಭ್ಯಗಳನ್ನು ನೀಡುವಂತೆ ಅಲೆಮಾರಿ, ಅರೆಅಲೆಮಾರಿ ಬುಡಕಟ್ಟು ಮಹಾಸಭಾದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿಯಲ್ಲಿ ಕಳೆದ ಮೂವತ್ತು ವರ್ಷಗಳಿಂದಲೂ ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೆ ವಾಸಿಸುತ್ತಿರುವ ಅಲೆಮಾರಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಬುಡಕಟ್ಟು ಜನಾಂಗದವರು ಇಂದಿಗೂ ಟೆಂಟ್ಗಳಲ್ಲಿ ವಾಸಿಸುತ್ತಿದ್ದಾರೆ.
ಬೀದಿ ದೀಪ, ರಸ್ತೆ, ಕುಡಿಯುವ ನೀರು, ಚರಂಡಿ, ಶೌಚಾಲಯ ಯಾವುದೂ ಇಲ್ಲ. ನಿವೇಶನ, ವಸತಿಗಾಗಿ ಕಳೆದ ಹತ್ತು ವರ್ಷಗಳಿಂದಲೂ ಹೋರಾಟ ಮಾಡಿಕೊಂಡು ಬರುತ್ತಿದ್ದರೂ ಆಳುವ ಸರ್ಕಾರಗಳು ಗಮನ ಹರಿಸುತ್ತಿಲ್ಲ. ಈಗಲಾದರೂ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದೆಂದು ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಕೋಶದ ಜಿಲ್ಲಾಧ್ಯಕ್ಷ ಕೆ.ಎಂ.ನಾಗರಾಜ್ ಎಚ್ಚರಿಸಿದ್ದಾರೆ.
ಜಿಲ್ಲಾ ದೌರ್ಜನ್ಯ ತಡೆ ಕಾಯ್ದೆ ಸಮಿತಿ ಸದಸ್ಯ ನರೇನಹಳ್ಳಿ ಅರುಣ್ಕುಮಾರ್, ಜಿ.ಗಂಗಪ್ಪ, ರಂಗಪ್ಪ, ಮಾಂತಮ್ಮ, ರಂಗಮ್ಮ, ರಾಮಣ್ಣ, ಯಶೋಧಮ್ಮ, ದ್ಯಾಮವ್ವ ಕೆಂಚಪ್ಪ, ಸಂಗೀತ, ಚಿನ್ನಮ್ಮ, ತಿಪ್ಪಮ್ಮ, ಗಂಗಮ್ಮ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.



