Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಿರುಮಗೊಂಡನಹಳ್ಳಿ ರೈಲ್ವೇ ಗೇಟ್ ಬಳಿ ಮೇಲ್ಸೇತುವೆ ನಿರ್ಮಿಸಲು ಸಾರ್ವಜನಿಕರ ಆಗ್ರಹ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೊಕಿನ ತೂಬಗೆರೆ ಹೋಬಳಿ ತಿರುಮಗೊಂಡಹಳ್ಳಿಯ ರೈಲ್ವೆ ಗೇಟ್ ಪದೇ ಪದೇ ಮುಚ್ಚುವುದರಿಂದ ಸುಮಾರು ಘಂಟೆಗಳ ಕಾಲ ಸಂಚಾರ ದಟ್ಟಣೆ ಉಂಟಾಗಿ
, ವಾಹನ ಸವಾರರು, ಶಾಲಾ ಮಕ್ಕಳು ಹಾಗೂ ತುರ್ತು ಸೇವೆಗಳ ವಾಹನಗಳಿಗೆ ತೀವ್ರ ತೊಂದರೆಯಾಗಿದೆ. ಇದಕ್ಕೆ  ದೀರ್ಘಕಾಲದ ಪರಿಹಾರವಾಗಿ ರೈಲ್ವೆ ಮೇಲ್ಸೇತುವೆ  ನಿರ್ಮಿಸದಿರುವುದು. ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ರೈಲ್ವೇ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜವಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜವಾಗಿಲ್ಲ.

 ದೊಡ್ಡಬಳ್ಳಾಪುರ ತಾಲ್ಲೂಕು ತೂಬಗೆರೆ ಹೋಬಳಿಯ ಶ್ರೀಕ್ಷೇತ್ರ  ಘಾಟಿ ಸುಬ್ರಮಣ್ಯ ದೇವಾಲಯವು ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದು. ದಾರ್ಮಿಕ ಹಾಗು ನಾಗಾರಾಧನೆಯ ಪ್ರಮುಖ ಕ್ಷೇತ್ರವು ಹೌದು.

ಬೆಂಗಳೂರಿನಿಂದ ಕೇವಲ 60 ಕಿಲೋಮೀಟರ್ ದೂರದಲ್ಲಿರುವ ಈ ಕ್ಷೇತ್ರಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ.   ದೇವಸ್ಥಾನಕ್ಕೆ ಹೋಗಲು ರೈಲ್ವೆ ಗೇಟ್ ಪದೇ ಪದೇ ಮುಚ್ಚುವುದರಿಂದ ಸಮಸ್ಯೆಯಾಗಿದೆ. ದೂರದ ಊರಿನಿಂದ ಬಂದು ದೇವರ ದರ್ಶನ ಮುಗಿಸಿ ನಮ್ಮ ಕೆಲಸ ಕಾರ್ಯಗಳಿಗೆ ತುರ್ತಾಗಿ ಹೋಗಲು ರೈಲ್ವೆ ಗೇಟ್ ಮುಚ್ಚಿದಾಗ ವಾಹನಗಳು ಸಾಲುಗಟ್ಟಿ ನಿಲ್ಲುವುದರಿಂದ ಕಿಲೋ ಮೀಟರ್‌ಗಟ್ಟಲೆ ಸಂಚಾರ ದಟ್ಟಣೆ ಉಂಟಾಗುತ್ತದೆ. ಇದರಿಂದ ವಾಹನ ಸವಾರರು, ಪ್ರಯಾಣಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ.

ತುರ್ತು ಸೇವೆಗಳಿಗೆ ಅಡ್ಡಿ-
ರೈಲ್ವೆ ಗೇಟ್ ಮುಚ್ಚುವುದರಿಂದ ಆಂಬ್ಯುಲೆನ್ಸ್‌ ನಂತಹ ತುರ್ತು ವಾಹನಗಳು ಸಿಲುಕಿ
, ಗರ್ಭಿಣಿಯರು ಮತ್ತು ವೃದ್ಧರಿಗೆ ಆಸ್ಪತ್ರೆ ತಲುಪಲು ತೀವ್ರ ತಡವಾಗುವುದು.ತುರ್ತು ಸೇವೆಗಳಿಗೆ  ತುಂಬಾ ತೊಂದರೆ ಯಾಗುತ್ತಿದ್ದು

ಗೇಟ್ ತೆರೆಯುವವರೆಗೆ ಕಾಯಬೇಕಾಗುತ್ತದೆ.ಪರಿಸ್ಥಿತಿ ಎದುರಾಗಿದೆ

*ರೈತರ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಅಡ್ಡಿ,
ರೈಲ್ವೆ ಗೇಟ್ ಪದೇ ಪದೇ ಮುಚ್ಚುವುದರಿಂದ ತರಕಾರಿ ಸಾಗಾಟ ತಡವಾಗಿ ರೈತರಿಗೆ ಆರ್ಥಿಕ ನಷ್ಟವಾಗುತ್ತದೆ. ಸಮಯಕ್ಕೆ ಸರಿಯಾಗಿ ಮಾರುಕಟ್ಟೆ ತಲುಪದ ತರಕಾರಿಗಳು ಹಾಳಾಗುತ್ತವೆ. ಈ ಸಮಸ್ಯೆಗೆ ಪರಿಹಾರವಾಗಿ ರೈಲ್ವೆ ಮೇಲ್ಸೇತುವೆ  ನಿರ್ಮಾಣ ಅಗತ್ಯವಾಗಿದೆ.

ಭಕ್ತರಿಗೂ  ರೈತರಿಗೂ  ತುರ್ತು ಸೇವೆಗಳಿಗೂ  ರೈಲ್ವೆ  ಗೇಟ್ ಮುಚ್ಚುವುದರಿಂದ ತೊಂದರೆ ಯಾಗುತ್ತಿದೆ ಎಂದು ಸಂಬಂದ ಪಟ್ಟ ಅಧಿಕಾರಿಗಳಿಗೂ ಹಾಗು ಸಂಸದರಿಗೂ ತಿರುಮಗೊಂಡನಹಳ್ಳಿಯಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡಿ ಎಂದು ಸಾರ್ವಜನಿಕರಿಂದ ಮನವಿ ಸಲ್ಲಿಸಿದರೂ ಪ್ರಯೋಜನವಾಗುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ರೈಲ್ವೆ ಗೇಟ್ ಮುಚ್ಚುವುದರಿಂದ ಸಾರ್ವಜನಿಕರಿಗೆ ನಿತ್ಯವೂ ಸಾಕಷ್ಟು ತೊಂದರೆಗಳಾಗುತ್ತವೆ. ನಿರ್ದಿಷ್ಟವಾಗಿ ದೊಡ್ಡ ಪಟ್ಟಣಗಳು ​​ಮತ್ತು ನಗರ ಪ್ರದೇಶಗಳಲ್ಲಿ ಇರುವ ಕಾರ್ಖಾನೆ ಹಾಗೂ ಕಛೇರಿಗಳಿಗೆ ತೆರಳಲು ಹಾಗು  ದೈನಂದಿನ ಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.
 ಹಾಡೋನಹಳ್ಳಿ  ಮುನೇಗೌಡ, ಕಟ್ಟಡ  ಗುತ್ತಿಗೆದಾರ.

ದೇವಸ್ಥಾನ, ಮಠಗಳು ಅಥವಾ ಧಾರ್ಮಿಕ ಕೇಂದ್ರಗಳಿಗೆ ಹೋಗುವ ಮಾರ್ಗಗಳಲ್ಲಿ ರೈಲ್ವೆ ಗೇಟ್ ಘಂಟೆ ಗಟ್ಟಲೆ ಮುಚ್ಚುವುದರಿಂದ ಭಕ್ತರು ಸಾಕಷ್ಟು ಸಮಯ ಕಾಯಬೇಕಾಗುತ್ತದೆ. ಇದರಿಂದ ದಟ್ಟಣೆ ಉಂಟಾಗಿ, ವಾಹನ ಸವಾರರು ಮತ್ತು ಪಾದಚಾರಿಗಳಿಗೆ ತೀವ್ರ ತೊಂದರೆಯಾಗುತ್ತದೆ. ರೈಲ್ವೆ ಇಲಾಖೆಯು ರೈಲುಗಳ ಸುರಕ್ಷತೆಗಾಗಿ ಗೇಟ್‌ಗಳನ್ನು ಮುಚ್ಚುವುದು ಅನಿವಾರ್ಯವಾದರೂ, ಸಾರ್ವಜನಿಕರ ಅನುಕೂಲಕ್ಕಾಗಿ ಇಂತಹ ಸ್ಥಳಗಳಲ್ಲಿ ಮೇಲ್ಸೇತುವೆ  ಅಥವಾ ಸುರಂಗ ಮಾರ್ಗ  ನಿರ್ಮಿಸುವುದು ಅತ್ಯಂತ ಅಗತ್ಯವಾಗಿದೆ.
ರವಿಕುಮಾರ್ ಭಕ್ತ

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಿರುಮಗೊಂಡನಹಳ್ಳಿ ರೈಲ್ವೇ ಗೇಟ್ ಬಳಿ ಮೇಲ್ಸೇತುವೆ ನಿರ್ಮಿಸಲು ಸಾರ್ವಜನಿಕರ ಆಗ್ರಹಕನ್ನಡ ಸಿನಿಮಾ ನಿರ್ಲಕ್ಷ್ಯ ಮಾಡಿದ ವಿದ್ಯಾವಂತರು -ಡಾ.ಕೆ.ಪುಟ್ಟಸ್ವಾಮಿ ರಾಜ್ಯ ಯೋಗ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ನಿಸರ್ಗ ಯೋಗ ಕೇಂದ್ರದ ವಿದ್ಯಾರ್ಥಿಗಳಿಂದ ಅಪೂರ್ವ ಸಾಧನೆಪ್ರೊ. ಬಿ ಕೃಷ್ಣಪ್ಪ ಕರ್ನಾಟಕದ ಪ್ರಮುಖ ದಲಿತ ಚಳವಳಿಯ ಧೀಮಂತ ನಾಯಕ...ಆಯುರ್ವೇದ ಹಾಗೂ ಯೋಗದ ಬಗ್ಗೆ ಇಡೀ ಜಗತ್ತು ಶ್ಲಾಘಿಸುತ್ತಿದೆ-ಬಿ. ಎಸ್. ಯಡಿಯೂರಪ್ಪಪೋಸ್ಟರ್ ಅನಾವರಣಗೊಳಿಸಿ ಶುಭ ಹಾರೈಸಿದ ದೊಡ್ಮನೆ ಸೊಸೆ ಅಶ್ವಿನಿ ಪುನೀತ್ಹಳ್ಳಿ ಮಕ್ಕಳಿಗೂ ಸಿಗಲಿ ಎಲ್.ಕೆ.ಜಿ/ಯು.ಕೆ.ಜಿ ಭಾಗ್ಯ: ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ ಕರೆಮೋದಿ ಸರ್ಕಾರದ 12 ವರ್ಷಗಳ ಆಡಳಿತ: ದೇಶದ ಅಭಿವೃದ್ಧಿ ಶ್ಲಾಘಿಸಿದ ಆರ್. ಅಶೋಕ್ತುಮಕೂರು-ಯಶವಂತಪುರ ರೈಲ್ವೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಕೇಂದ್ರ ಸಚಿವ ವಿ. ಸೋಮಣ್ಣಕಾರ್ಮಿಕರ ಕಿಟ್ ಹಗರಣ: ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಜೆಡಿಎಸ್