Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ಮೌಲಾನಾ ಆಜಾದ್ ಶಾಲೆ' ಸ್ಥಾಪನೆಗೆ ಸಾರ್ವಜನಿಕರ ಒತ್ತಾಯ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಯು. ನಿಸಾರ್ ಅಹಮದ್ ಅವರು ಇಂದು ಚಿತ್ರದುರ್ಗ ನಗರಕ್ಕೆ ಭೇಟಿ ನೀಡಿ, ವಿವಿಧ ಉರ್ದು ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು ಹಾಗೂ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಲ್ಪಸಂಖ್ಯಾತ ಸಮುದಾಯದ ಸಾರ್ವಜನಿಕ ಕುಂದು-ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉರ್ದು ಶಿಕ್ಷಣದ ಗುಣಮಟ್ಟಕ್ಕೆ ಆದ್ಯತೆ ನೀಡಿ: ಯು. ನಿಸಾರ್ ಅಹಮದ್
ಸಭೆಯಲ್ಲಿ ಮಾತನಾಡಿದ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್, "ಅಲ್ಪಸಂಖ್ಯಾತ ಶಾಲೆಗಳ ಶಿಕ್ಷಣದ ಗುಣಮಟ್ಟ ಸುಧಾರಿಸಬೇಕು. ಉರ್ದು ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯವಿದೆ. ಕೇವಲ ಪಠ್ಯವಲ್ಲದೆ, ಉರ್ದು ಶಾಲೆಗಳ ವಿದ್ಯಾರ್ಥಿಗಳು ಎನ್.ಸಿ.ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಶಿಕ್ಷಣವೇ ಮೂಲಭೂತ ಹಕ್ಕಾಗಿದೆ. ಶಾಲಾ ಮೂಲಸೌಕರ್ಯಗಳ ಕೊರತೆಯಿಂದಾಗಿ ಯಾವುದೇ ಮಗು ಕಲಿಯುವ ಅವಕಾಶದಿಂದ ವಂಚಿತರಾಗಬಾರದು," ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಚಿತ್ರದುರ್ಗಕ್ಕೆ ಮತ್ತೊಂದು ಮೌಲಾನಾ ಆಜಾದ್ ಶಾಲೆಯ ತುರ್ತು ಅಗತ್ಯವಿದೆ: ಸೈಯದ್ ಖುದ್ದೂಸ್
ಇದೇ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾಧ್ಯಕ್ಷ ಸೈಯದ್ ಖುದ್ದೂಸ್ ಅವರು ಜಿಲ್ಲೆಯ ಶೈಕ್ಷಣಿಕ ಸಮಸ್ಯೆಯನ್ನು ಆಯೋಗದ ಗಮನಕ್ಕೆ ತಂದರು.

"ಚಿತ್ರದುರ್ಗ ನಗರದಲ್ಲಿ ಸದ್ಯವಿರುವ ಮೌಲಾನಾ ಆಜಾದ್ ಮಾದರಿ ಶಾಲೆಗೆ ತೀವ್ರ ಬೇಡಿಕೆಯಿದೆ. ಕಳೆದ ವರ್ಷ 6ನೇ ತರಗತಿಯ ಪ್ರವೇಶಕ್ಕಾಗಿ ಬರೊಬ್ಬರಿ 250 ಅರ್ಜಿಗಳು ಬಂದಿದ್ದವು. ಆದರೆ ಲಭ್ಯವಿದ್ದದ್ದು ಕೇವಲ 60 ಸೀಟುಗಳು ಮಾತ್ರ. ಇದರಿಂದಾಗಿ ಬಡತನ ರೇಖೆಗಿಂತ ಕೆಳಗಿರುವ ನೂರಾರು ಅರ್ಹ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಖಾಸಗಿ ಶಾಲೆಗಳ ಶುಲ್ಕ ಭರಿಸಲಾಗದೆ ಅನೇಕ ಬಡ ಕುಟುಂಬಗಳು ಪರದಾಡುತ್ತಿದ್ದು, ಮಕ್ಕಳು ಶಿಕ್ಷಣದಿಂದ ವಂಚಿತರಾಗುವ ಭೀತಿ ಎದುರಾಗಿದೆ. ಹಾಗಾಗಿ ಚಿತ್ರದುರ್ಗಕ್ಕೆ ತಕ್ಷಣವೇ ಮತ್ತೊಂದು ಹೆಚ್ಚುವರಿ ಮೌಲಾನಾ ಆಜಾದ್ ಮಾದರಿ ಶಾಲೆಯನ್ನು ಮಂಜೂರು ಮಾಡಬೇಕು," ಎಂದು ಅವರು ತೀವ್ರವಾಗಿ ಒತ್ತಾಯಿಸಿದರು.

ಈ ಪ್ರಮುಖ ಸಭೆಯಲ್ಲಿ ಆಯೋಗದ ವಿಶೇಷ ಅಧಿಕಾರಿ ಮುಜೀಬಲ್ಲ ಝುಹಾರಿ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ (ಚುಡಾ) ಅಧ್ಯಕ್ಷ ಎಂ.ಕೆ. ತಾಜ್‌ಪೀರ್, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ರೇಖಾ, ಜಿಲ್ಲಾ KMDC ಅಧಿಕಾರಿ ಮಹಬೂಬ್ ಅಲಿ, ಮುಖಂಡರಾದ ಇರ್ಫಾನ್ ಪಟೇಲ್, ಮಹಮ್ಮದ್ ರಫೀಕ್, ಸೈಯದ್, ಉರ್ದು ಶಾಲೆಯ ಪ್ರಾಂಶುಪಾಲ ಶಬ್ಬೀರ್ ಅಹಮದ್ ಖಾನ್, ಮಾಬುಬ್ ಖಾನ್ ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದ ಪ್ರಮುಖ ನಾಯಕರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.

ಸಾರ್ವಜನಿಕರ ಕುಂದು-ಕೊರತೆ ಸಭೆಯ ನಂತರ, ಆಯೋಗದ ಅಧ್ಯಕ್ಷರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯಲ್ಲೂ ಪಾಲ್ಗೊಂಡು ಚರ್ಚಿಸಿದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.