Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯಮಂತ್ರಿಗಳಿಂದ ಜನಸ್ಪಂದನ ಕಾರ್ಯಕ್ರಮ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು : 
ಮಾನ್ಯ ಮುಖ್ಯಮಂತ್ರಿಯವರು 2024ನೇ ಸೆಪ್ಟೆಂಬರ್ 23 ರಂದು ಕಲಬುರಗಿಯಲ್ಲಿ ಕಲಬುರಗಿ ವಿಭಾಗ ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ.

ಮೊದಲ ಬಾರಿಗೆ ಬೆಂಗಳೂರಿನಿಂದಾಚೆಗೆ ನಡೆಸಲಿರುವ ಕಾರ್ಯಕ್ರಮದಲ್ಲಿ ಕಲಬುರಗಿ ವಿಭಾಗದ ಬೀದರ್. ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ನಾಗರಿಕರು ಮುಖ್ಯಮಂತ್ರಿಯವರನ್ನು ಖುದ್ದಾಗಿ ಭೇಟಿ ಮಾಡಿ ಅಹವಾಲು ಸಲ್ಲಿಸಬಹುದು.

ಇದಕ್ಕಾಗಿ ಅವರು ಗ್ರಾಮ ಒನ್, ಬಾಪೂಜಿ ಸೇವಾಕೇಂದ್ರ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಮುಂಚಿತವಾಗಿಯೇ ಪೂರಕ ದಾಖಲೆಗಳೊಂದಿಗೆ ಅಹವಾಲು ಸಲ್ಲಿಸಿ. ಸ್ವೀಕೃತಿ ಪಡೆದುಕೊಂಡು ನೋಂದಾಯಿಸಿಕೊಳ್ಳಬಹುದು. ಹೀಗೆ ನೋಂದಾಯಿಸಿಕೊಂಡವರು ಕಲಬುರಗಿಯಲ್ಲಿ ತಮ್ಮ ಅಹವಾಲಿನ ಸ್ವೀಕೃತಿ ಪತ್ರದೊಂದಿಗೆ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರನ್ನು ಖುದ್ದಾಗಿ ಭೇಟಿಯಾಗಿ ಸಮಸ್ಯೆಗೆ ಪರಿಹಾರ ಪಡೆಯಬಹುದಾಗಿದೆ.

ಒಂದು ವೇಳೆ ಕಾರಣಾಂತರಗಳಿಂದ ನೋಂದಾಯಿಸಿಕೊಳ್ಳಲು ಸಾಧ್ಯವಾಗದಿದ್ದರೆ, ನೇರವಾಗಿ ಕಾರ್ಯಕ್ರಮ ನಡೆಯು ದಿನ ಸ್ಥಳದಲ್ಲಿಯೇ ನಿಗದಿತ ಕೌಂಟರುಗಳಲ್ಲಿ ನೋಂದಾಯಿಸಿಕೊಳ್ಳಬಹುದು. ಜನಸ್ಪಂದನ ಕಾರ್ಯಕ್ರಮದ ಪ್ರಯೋಜನವನ್ನು ಕಲಬುರಗಿ ವಿಭಾಗದ ನಾಗರೀಕರು ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ