Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನಕಶ್ರೀ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾದ ಪಿವಿ ಮಲ್ಲಿಕಾರ್ಜುನಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪರಿಸರ ಪ್ರೇಮಿ ಪಿ.ವಿ.ಮಲ್ಲಿಕಾರ್ಜುನಯ್ಯನವರು ವೃತ್ತಿಯಲ್ಲಿ ಶಿಕ್ಷಕರು
, ನಿವೃತ್ತಿ ನಂತರ ಸಾವಿರಾರು ಗಿಡ ಮರಗಳನ್ನು ನೆಟ್ಟು ಪೋಷಿಸಿ ಪರಿಸರ ಪ್ರೇಮಿಗಳಾಗಿ ರೂಪುಗೊಂಡವರು.

ಇನ್ನೂ ನಿವೃತ್ತಿಗೆ ಮೂರು ವರ್ಷ ಮುಂಚೆಯೇ ಪುರಾತತ್ವ ಮತ್ತು ಪ್ರಾಚ್ಯವಸ್ತು ಸರ್ವೆಕ್ಷಣಾ ಇಲಾಖೆಯ ಅನುಮತಿಯೊಂದಿಗೆ ಚಿತ್ರದುರ್ಗದ ಕೋಟೆ ಆವರಣದಲ್ಲಿ ಇಲ್ಲಿಯವರೆಗೆ ನೀರು ನೈಸರ್ಗಿಕ ಗೊಬ್ಬರವನ್ನು ಹಾಕುತ್ತಾ ಸಾವಿರಾರು ಗಿಡ ಮರಗಳನ್ನು ಬೆಳೆಸುತ್ತಾ ಪೋಷಣೆ ಮಾಡುತ್ತಾ ಬರುತ್ತಿದ್ದಾರೆ.

ಇವರ ಸೇವೆ ಗುರುತಿಸಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಇವರು ಭಾಜನರಾಗಿದ್ದಾರೆ.

 ಅನೇಕ ಸಂಘ ಸಂಸ್ಥೆಗಳು ಹಲವು ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ. ಅವುಗಳಲ್ಲಿ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ, ರಾಷ್ಟ್ರೀಯ ಬಸವಶ್ರೀ ಪ್ರಶಸ್ತಿ, ನಾಡಪ್ರಭು ಕೆಂಪೆಗೌಡ ರಾಜ್ಯ ಪ್ರಶಸ್ತಿ, ಪರಿಸರ ಪ್ರೇಮಿ ಪ್ರಶಸ್ತಿ, ವೃಕ್ಷಮಿತ್ರ ಪ್ರಶಸ್ತಿ, ವೃಕ್ಷ ರಕ್ಷಕ ಪ್ರಶಸ್ತಿ, ಸಹೃದಯ ಪರಿಸರ ಪ್ರೇಮಿ ಪ್ರಶಸ್ತಿ, ಸೌರಭ ರತ್ನ ಪ್ರಶಸ್ತಿ,

ಕನ್ನಡ ಗಡಿನಾಡ ರತ್ನ ಪ್ರಶಸ್ತಿ, ಇನ್ನೂ ಅನೇಕ ಪ್ರಶಸ್ತಿಗಳು ಲಭಿಸಿದ್ದು ಇದೀಗ ದಿ.೧೮-೧೧-೨೦೨೪ರಂದು ತ ರಾ ಸು ರಂಗಮಂದಿರದಲ್ಲಿ ನಡೆದ ಚಿತ್ರದುರ್ಗ ಜಿಲ್ಲಾ ಪಂಚಾಯತ್, ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಚಿತ್ರದುರ್ಗ,

ಜಿಲ್ಲಾ ಕುರುಬರ ಸಮಾಜ ಚಿತ್ರದುರ್ಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸಂತಶ್ರೇಷ್ಠ ಭಕ್ತ ಕನಕದಾಸರ ಜಯಂತಿ-೨೦೨೪ರ ಸಮಾರಂಭದಲ್ಲಿ ಪರಿಸರ ಪ್ರೇಮಿ ಪಿ.ವಿ.ಮಲ್ಲಿಕಾರ್ಜುನಯ್ಯ ನವರಿಗೆ ಕನಕಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಇಂತಹ ಹತ್ತು ಹಲವು ಪ್ರಶಸ್ತಿಗಳು ಇವರಿಗೆ ಲಭ್ಯವಾಗಿದ್ದರೂ ತನ್ನ ಕಾಯಕ ಕೈಬಿಟ್ಟಿಲ್ಲ. ಇಂದಿಗೂ ಗಿಡ ಮರಗಳ ನೆಟ್ಟು ಪೋಷಣೆ ಮಾಡುತ್ತಿರುವುದು ನೋಡಿದರೆ ಯುವಕರು ನಾಚುವಂತೆ ಆಗಿದೆ. ಇವರ ಸತ್ಕಾರ್ಯಕ್ಕೆ ಚಂದ್ರವಳ್ಳಿ ಪತ್ರಿಕೆಯು ಅಭಿನಂದನೆ ಸಲ್ಲಿಸುತ್ತದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ