LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆ.10 ರಂದು ಭಾರತ ಬಿಟ್ಟು ತೊಲಗಿ ಚಳುವಳಿ ಆಯೋಜನೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಕೇಂದ್ರ ಸರ್ಕಾರ ಕೃಷಿಯನ್ನು ನಿರ್ಲಕ್ಷಿಸುತ್ತಿದ್ದು
, ರೈತರನ್ನು ನಾಶಪಡಿಸಿ ಬಹುರಾಷ್ಟ್ರೀಯ ಕಂಪನಿಗಳು ಕಾರ್ಪೊರೇಟರ್‌ಗಳ ಪರವಾಗಿರುವುದರಿಂದ ಆ.೧೦ ರಂದು ಭಾರತ ಬಿಟ್ಟು ತೊಲಗಿ ಚಳುವಳಿಯನ್ನು ಕಿಸಾನ್ ಮೋರ್ಚಾದಿಂದ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ತಿಳಿಸಿದರು.

ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಹುರಾಷ್ಟ್ರೀಯ ಕಂಪನಿಗಳು ಕೃಷಿ ಕ್ಷೇತ್ರವನ್ನು ಆಕ್ರಮಿಸಿಕೊಂಡಿರುವುದರಿಂದ ರೈತರಿಗೆ ಬೀಜ

ರಸಗೊಬ್ಬರ, ಹಾಗೂ ಕೃಷಿ ಪರಿಕರಗಳು ದುಬಾರಿಯಾಗಿದೆ. ಅಭಿವೃದ್ದಿಗೆ ಮಾರಕವಾಗಿರುವ ಭ್ರಷ್ಟ ರಾಜಕಾರಣಿಗಳ ವಿರುದ್ದ ಚಳುವಳಿಗೆ ಮುಂದಾಗಿದ್ದೇವೆ. ರಾಜ್ಯದ ೧೮೦ ತಾಲ್ಲೂಕುಗಳು ಬರ ಎದುರಿಸುತ್ತಿದ್ದು, ಶೇ.೨೦ ರಿಂದ ೩೦ ರಷ್ಟು ಬಿತ್ತನೆಯಾಗಿದೆ. ಶೇಂಗಾ, ತೊಗರಿ, ಹತ್ತಿ ಬೆಳೆ ನಾಶವಾಗಿದೆ. ಕೃಷಿ ಕಾರ್ಮಿಕರಿಗೆ ಕೆಲಸವಿಲ್ಲ. ಜಾನುವಾರುಗಳಿಗೆ ಮೇವು ನೀರಿನ ಕೊರತೆಯಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಇಷ್ಟೊತ್ತಿಗಾಗಲೆ ಬರಗಾಲವೆಂದು ಘೋಷಿಸಬೇಕಿತ್ತು. ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಯತ್ತ ಮುಖ ಮಾಡಿದ್ದಾರೆ. ರೈತರು ಅನೇಕ ಹೋರಾಟ ಮಾಡುತ್ತಿದ್ದರು ರಸಗೊಬ್ಬರ ಸಮಸ್ಯೆಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ೨೨ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಧಾನಿ ಮೋದಿ ಎಲ್ಲದಕ್ಕೂ ಮೌನ ವಹಿಸುತ್ತಿದ್ದಾರೆಂದು ಆಪಾದಿಸಿದರು.

ಬರಗಾಲಕ್ಕೆ ತುತ್ತಾಗಿರುವ ರೈತರಿಗೆ ಸಾಲ ಪಾವತಿಸುವಂತೆ ಬ್ಯಾಂಕ್‌ನವರು ನೋಟಿಸ್ ಕೊಡುತ್ತಿದ್ದಾರೆ. ರೈತರ ಸಾಲ ಮನ್ನ ಆಗಬೇಕು. ಕೇಂದ್ರಕ್ಕೆ ಕಾಂಗ್ರೆಸ್‌ನ್ನು ಟೀಕಿಸುವುದೇ ಕೆಲಸವಾಗಿದೆ. ರಾಜ್ಯ ಸರ್ಕಾರ ಕೇಂದ್ರಕ್ಕೆ ನಿಯೋಗ ಹೊಗಬೇಕು. ಜಿ.ಎಸ್.ಟಿ.ಪಾಲು ಬರುತ್ತಿಲ್ಲ. ರೈತರು, ಕಾರ್ಮಿಕರು, ಮಹಿಳೆಯರು, ಅಲ್ಪಸಂಖ್ಯಾತರು ನಲುಗುತ್ತಿದ್ದಾರೆಂದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಂದ್‌ಗೆ ಕರೆ ನೀಡಿರುವುದಕ್ಕೆ ನಮ್ಮ ನೈತಿಕ ಬೆಂಬಲವಿದೆ. ಬಂದನ್ ಸ್ವರೂಪ ತಿಳಿದುಕೊಂಡು ಖಚಿತ ನಿಲುವು ತೆಗೆದುಕೊಳ್ಳುತ್ತೇವೆ. ಅಶಾಂತಿಯಾಗಬಾರದು. ನೀರಿಗಾಗಿ ಜನಾಂಗೀಯ ಘರ್ಷಣೆ,  ಭಾಷೆ ಭಾಷೆಗಳ ನಡುವೆ ಗಲಾಟೆ ಬೇಡ. ರಾಜ್ಯದಿಂದ ಆಯ್ಕೆಯಾಗಿರುವ ಸಂಸದರಿಗೂ ಜವಾಬ್ದಾರಿಯಿದೆ. ಗಡಿ, ನೆಲ, ಜಲ, ಭಾಷೆಯ ವಿಚಾರ ಬಂದಾಗ ತಮಿಳುನಾಡು ಒಂದಾಗುತ್ತದೆ. ಕೃಷ್ಣ, ಕಾವೇರಿ, ಕಳಸಾ ಭಂಡೂರಿ ಬಗ್ಗೆ ನಿಮ್ಮ ಹೋರಾಟವೇನು ಎಂದು ಜನಪ್ರತಿನಿಧಿಗಳನ್ನು ಪ್ರಶ್ನಿಸಿದರು?

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಸಂಕಷ್ಟ ಸೂತ್ರ ರಚಿಸಬೇಕು. ರಾಜ್ಯದಲ್ಲಿ ಕೆರೆ ಕಟ್ಟೆ ಬೆಳೆಗಳು ಒಣಗುತ್ತಿವೆ. ನೀರಲ್ಲು ರಾಜಕೀಯ ಬೇಡ. ಎಲ್ಲರೂ ಒಂದೆ ಧ್ವನಿಯಾಗಿ ನಿರ್ಣಯ ಕೈಗೊಳ್ಳಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರನ್ನು ನಿರ್ಲಕ್ಷಿಸಬಾರದು. ಸಂಕಷ್ಟ ಸೂತ್ರಕ್ಕೆ ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಬೇಕು.

 ಕೃಷಿ ವಿಶ್ವವಿದ್ಯಾನಿಲಯದಲ್ಲಿನ ಬಿಎಸ್ಸಿ. ಪದವೀಧರರು ಕಷ್ಟದಲ್ಲಿರುವುದರಿಂದ ಸರ್ಕಾರ ಪರೀಕ್ಷೆಯನ್ನು ಮುಂದಕ್ಕೆ ಹಾಕಬೇಕು. ಕಂಬಳದ ಬಗ್ಗೆ ನಮ್ಮ ವಿರೋಧವಿಲ್ಲ. ಆದರೆ ಕಂಬಳವನ್ನು ಮೈಸೂರಿನಲ್ಲಿ ಮಾಡುವುದು ಬೇಡ. ಬಿಡದಿ ಟೌನ್‌ಶಿಪ್ ಬಗ್ಗೆ ನಮ್ಮ ಹೋರಾಟವಿದೆ. ಬೆಂಗಳೂರು ನಗರ ಬೆಳೆದಂತೆ ಕೃಷಿ ಹಾಳಾಗುತ್ತಿದೆ. ೯೬೪೦ ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲು ನಾವುಗಳು ಬಿಡುವುದಿಲ್ಲ. ಲಂಗು ಲಗಾಮಿಲ್ಲದೆ ಭೂಸ್ವಾಧೀನವಾಗುತ್ತಿರುವುದಕ್ಕೆ ನಮ್ಮ ವಿರೋಧವಿದೆ ಎಂದು ರಾಜ್ಯ ಸರ್ಕಾರವನ್ನು ಎಚ್ಚರಿಸಿದರು.

ರೈತ ಮುಖಂಡರುಗಳಾದ ವಸಂತಕುಮಾರ್, ಧನಂಜಯ ಹಂಪಯ್ಯನಮಾಳಿಗೆ, ಹೊರಕೇರಪ್ಪ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಕೆ.ಪಿ.ಭೂತಯ್ಯ, ಬಸ್ತಿಹಳ್ಳಿ ಸುರೇಶ್‌ಬಾಬು ಇನ್ನು ಅನೇಕರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂತರು ಮಳೆಯ ನಡುವೆ ಸಂಭ್ರಮದಿಂದ ನಡೆದ ಗಾಳಿಪಟ ಹಬ್ಬಆ.10 ರಂದು ಭಾರತ ಬಿಟ್ಟು ತೊಲಗಿ ಚಳುವಳಿ ಆಯೋಜನೆಶೀಬಾರ ಮಠದ ವನದಲ್ಲಿ ಇಂದು ಶ್ರಮದಾನ, ಶಿವಯೋಗ ಹಾಗೂ ಶ್ರದ್ಧಾಂಜಲಿ ಕಾರ್ಯಕ್ರಮಜವಗೊಂಡನಹಳ್ಳಿಯಲ್ಲಿ ಕಾಮಗೇತಿ ಇಮ್ಮಡಿ ಚಿಕ್ಕಣ್ಣ ನಾಯಕರ ಆಡಳಿತಾವಧಿಯ ಲಿಪಿಗಲ್ಲು ಪತ್ತೆಪೊಲೀಸ್ ನೇಮಕಾತಿ ಪರೀಕ್ಷೆ ಕೆ.ಇ.ಎ ಮಾರ್ಗಸೂಚಿಗಳ ಪಾಲನೆ ಕಡ್ಡಾಯ-ಜಿಲ್ಲಾಧಿಕಾರಿ ಟಿ.ವೆಂಕಟೇಶ್ಅಡುಗೆ ತಯಾರಕ ಎಂ.ಮಹಮ್ಮದ್ ಚಮನ್ ಅವರಿಗೆ ಆತ್ಮೀಯ ಬಿಳ್ಕೋಡುಗೆನಿವೃತ್ತಿ, ವರ್ಗಾವಣೆ ಹೊಂದಿದ ಅಧಿಕಾರಿಗಳಿಗೆ ಬೀಳ್ಕೊಡುಗೆಬಬ್ಬೂರು ಫಾರಂನಲ್ಲಿ ರೈತರಿಗೆ ಸಮಗ್ರ ಕೃಷಿ ಪದ್ಧತಿ ಕುರಿತು ಮೂರು ದಿನಗಳ ವಸತಿಯುಕ್ತ ಉಚಿತ ತರಬೇತಿಸಂಗೀತ ಪ್ರೇಮಿಗಳ ಹೃದಯದಲ್ಲಿ ಎಸ್. ಜಾನಕಮ್ಮ ಶಾಶ್ವತ ಡಾ.ಕೆ.ಜೆ. ಕಾಂತರಾಜ್ಕ್ಷೇತ್ರ ಶಿಕ್ಷಣಾಧಿಕಾರಿ ಬೈಲಾಂಜಿನಪ್ಪ ನವರಿಗೆ ಬೀಳ್ಕೊಡುಗೆ