Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ‘ಗ್ಯಾರೆಂಟಿ ಸಮಿತಿಗಳು ಕತ್ತೆ ಕಾಯುತ್ತಿದ್ದವಾ?’ ಎಂದು ಆರ್. ಅಶೋಕ್ ತೀವ್ರ ವಾಗ್ದಾಳಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿಯೋಜನೆಯ ಹಣ ಲಕ್ಷಾಂತರ ಮೃತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಪ್ರತಿಪಕ್ಷ ನಾಯಕ ಆರ್. ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. "ಮೃತರ ಖಾತೆಗೂ ಹಣ ಹೋಗುತ್ತಿದ್ದರೆ, ಗ್ಯಾರೆಂಟಿ ಅನುಷ್ಠಾನ ಸಮಿತಿಗಳುಕತ್ತೆ ಕಾಯುತ್ತಿದ್ದವಾ?!" ಎಂದು ಅವರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರಹಾಕಿದ್ದಾರೆ.

​ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಹಗರಣಗಳ ಗೂಡಾಗಿವೆ ಎಂದು ಟೀಕಿಸಿರುವ ಅವರು, ಆರ್. ಅಶೋಕ್ ಅವರು ಎತ್ತಿರುವ ಪ್ರಮುಖ ಅಂಶಗಳು ಇಲ್ಲಿವೆ.

ಆಡಳಿತ ಕುಸಿತಕ್ಕೆ ಸಾಕ್ಷಿ:
​ಇಡೀ ರಾಜ್ಯದಲ್ಲಿ ಲಕ್ಷಾಂತರ ಮೃತರ ಬ್ಯಾಂಕ್ ಖಾತೆಗಳಿಗೆ ಸರ್ಕಾರದ ಕಣ್ಣು ತಪ್ಪಿಸಿ ಗೃಹಲಕ್ಷ್ಮಿ ದುಡ್ಡು ಜಮೆಯಾಗುತ್ತಿರುವುದು ರಾಜ್ಯದಲ್ಲಿ ಆಡಳಿತ ಯಾವ ಮಟ್ಟಕ್ಕೆ ಕುಸಿದಿದೆ ಎನ್ನುವುದನ್ನು ತೋರಿಸುತ್ತದೆ. ಜನರ ತೆರಿಗೆ ಹಣ ಈ ರೀತಿ ಪೋಲಾಗುತ್ತಿದ್ದರೂ ನಾಲಾಯಕ್ ಸಮಿತಿಗಳು ಕಣ್ಣು ಮುಚ್ಚಿ ಕುಳಿತಿವೆ.

ಗ್ಯಾರೆಂಟಿ ಸಮಿತಿಗಳೇ ಸೂತ್ರಧಾರಿಗಳೇ?:
​"
ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟ ಎಂದು ಮೂರು ಹಂತಗಳಲ್ಲಿ ಅತೃಪ್ತ ಕಾಂಗ್ರೆಸ್ಸಿಗರನ್ನು ತಂದು ಕೂರಿಸಿ, ಲಕ್ಷ ಲಕ್ಷ ಸಂಬಳ, ಐಷಾರಾಮಿ ಗೂಟದ ಕಾರು, ಭತ್ಯೆ ನೀಡುತ್ತಿರುವುದು ಸತ್ತವರ ಖಾತೆಗೆ ಹಣ ಹೋಗುವುದನ್ನು ನೋಡಿಕೊಂಡು ತಮಾಷೆ ನೋಡಲೋ? ಅಥವಾ ಈ ಗ್ಯಾರೆಂಟಿ ಅನುಷ್ಠಾನ ಸಮಿತಿಗಳೇ ಈ ಹಗರಣದ ಹಿಂದಿರುವ ಸೂತ್ರಧಾರಿಗಳೋ?"
ಆರ್. ಅಶೋಕ್, ಪ್ರತಿಪಕ್ಷ ನಾಯಕ.

ಸಮಿತಿಗಳ ತಕ್ಷಣದ ರದ್ದತಿಗೆ ಆಗ್ರಹ:
​ಗ್ಯಾರೆಂಟಿ ಯೋಜನೆ ಅನುಷ್ಠಾನದ ಹೆಸರಿನಲ್ಲಿ ಸಾರ್ವಜನಿಕರ ಹಣ ಪೋಲು ಮಾಡುತ್ತಿರುವ ಈ ಎಲ್ಲಾ ಅಪ್ರಯೋಜಕ ಗ್ಯಾರೆಂಟಿ ಅನುಷ್ಠಾನ ಸಮಿತಿಗಳನ್ನುಸರ್ಕಾರ ತಕ್ಷಣವೇ ರದ್ದುಗೊಳಿಸಬೇಕು ಮತ್ತು ಬೊಕ್ಕಸಕ್ಕೆ ಆಗುತ್ತಿರುವ ಅನಗತ್ಯ ನಷ್ಟವನ್ನು ತಡೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸಂಬಳ, ಸವಲತ್ತು ವಾಪಸ್ ವಸೂಲಾತಿಗೆ ಡಿಮ್ಯಾಂಡ್:
​ಕೇವಲ ಸಮಿತಿ ರದ್ದು ಮಾಡಿದರೆ ಸಾಲದು; ಇದುವರೆಗೆ ಯಾವುದೇ ಕೆಲಸ ಮಾಡದೆ ಕೇವಲ ಮಜಾ ಉಡಾಯಿಸಿದ ಈ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರಿಗೆ ಪಾವತಿಸಲಾಗಿರುವ ಸಂಬಳ ಮತ್ತು ಸವಲತ್ತುಗಳ ಸಂಪೂರ್ಣ ಮೊತ್ತವನ್ನು ಸರ್ಕಾರ ತಕ್ಷಣವೇ ಅವರಿಂದ ವಾಪಸ್ ವಸೂಲಿ ಮಾಡಬೇಕು ಎಂದು ಆರ್. ಅಶೋಕ್ ಆಗ್ರಹಿಸಿದ್ದಾರೆ.

​ಸಿಎಂ ಎಚ್ಚರಿಕೆ:
​ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಹೆಸರನ್ನು ಉಲ್ಲೇಖಿಸಿರುವ ಅವರು, "ಗ್ಯಾರೆಂಟಿ ಅನುಷ್ಠಾನ ಸಮಿತಿ ಹೆಸರಿನಲ್ಲಿ ಗಂಜಿ ಕೇಂದ್ರ ತೆರೆದು ಸ್ವಪಕ್ಷದ ಕಾರ್ಯಕರ್ತರಿಗೆ ಪುಕ್ಕಟೆ ಸಂಬಳ ಕೊಟ್ಟು ಸಾಕುವ ಪರಿಪಾಠ ನಿಲ್ಲಲಿ. ಈ ಹಗಲು ದರೋಡೆ ಇನ್ನೂ ಮುಂದುವರೆದರೆ ಸಾರ್ವಜನಿಕರ ತೆರಿಗೆ ಹಣ ದುರುಪಯೋಗಕ್ಕೆ ಕಾಂಗ್ರೆಸ್ ಪಕ್ಷ ತಕ್ಕ ಬೆಲೆ ತೆರಬೇಕಾಗುತ್ತದೆ," ಎಂದು ತೀವ್ರ ಎಚ್ಚರಿಕೆ ನೀಡಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಧಾನಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ: ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಸೂಚನೆರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ವರ್ತುಲ ರಸ್ತೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೂಚನೆಪೂರ್ವಭಾವಿ ಸಭೆ ಉದ್ದೇಶಿಸಿ ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರ ಹಾಲಪ್ಪ ಮಾತನಾಡಿದರುಕರವೇ ಕನ್ನಡಿಗರ ಬಣದಿಂದ ದಿ.ಆರ್. ಜಿ ವೆಂಕಟಾಚಲಯ್ಯನವರಿಗೆ ನುಡಿ ನಮನಅಂಬೇಡ್ಕರ್, ಬಸವಣ್ಣನವರ ವಿಚಾರ ಧಾರೆಗಳು ಜೀವಂತ : ಮಾದಾರಶ್ರೀರಕ್ತವನ್ನು ಯಾವುದೇ ಲ್ಯಾಬ್ ನಲ್ಲಿ ತಯಾರಿಸಲು ಸಾಧ್ಯವಿಲ್ಲ107 ದಿನಗಳ ಅಮೆರಿಕ-ಇರಾನ್ ಯುದ್ಧಕ್ಕೆ ಅಂತ್ಯ: ಕಚ್ಚಾ ತೈಲ ದರ ಭಾರೀ ಕುಸಿತ!ಹಿರಿಯ ಲೇಖಕಿ ಇಂದಿರಾ ಲಂಕೇಶ್ ಇನ್ನಿಲ್ಲ: ಲಂಕೇಶ್ ಪರಂಪರೆಯ ಪ್ರೇರಕ ಶಕ್ತಿ ಅಸ್ತಂಗತ"ಖಜಾನೆ ಖಾಲಿಯಾಗಿಲ್ಲ, ಗ್ಯಾರಂಟಿ ನಿಲ್ಲಲ್ಲ": ಹತಾಶ ಬಿಜೆಪಿಗೆ ಸಿದ್ದರಾಮಯ್ಯ ಖಡಕ್ ಕೌಂಟರ್!ಬಿಡದಿ ಟೌನ್‌ಶಿಪ್ ರಾಜಕೀಯ: ಹೆಚ್‌ಡಿಕೆ ವಿರುದ್ಧ ಡಿಕೆಶಿ ಕಿಡಿ; 'ಗೃಹಲಕ್ಷ್ಮಿ' ಫಲಾನುಭವಿಗಳಿಗೆ ಶೀಘ್ರದಲ್ಲೇ ಐಡಿ ಕಾರ್ಡ್!