LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈಲ್ವೆ ನೌಕರನ ಪುತ್ರನ ಅಪೂರ್ವ ಸಾಧನೆ: JEE ಪರೀಕ್ಷೆಯಲ್ಲಿ 485ನೇ ರ್ಯಾಂಕ್ ಪಡೆದ ಸುಮಂತ್‌ಗೆ ಸನ್ಮಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸವಿದ್ದರೆ ಎಂತಹ ಕಠಿಣ ಗುರಿಯನ್ನೂ ತಲುಪಬಹುದು ಎಂಬುದನ್ನು ಚಿತ್ರದುರ್ಗ ಜಿಲ್ಲೆಯ ಪ್ರತಿಭೆಯೊಬ್ಬರು ಸಾಬೀತುಪಡಿಸಿದ್ದಾರೆ. ನೈರುತ್ಯ ರೈಲ್ವೆ ವಲಯದ ಸಾಮಾನ್ಯ ನೌಕರರೊಬ್ಬರ ಪುತ್ರನಾದ ಸುಮಂತ್ ಬಿ. ಅವರು ರಾಷ್ಟ್ರೀಯ ಮಟ್ಟದ ಜೆಇಇ (JEE - Joint Entrance Examination) ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 485ನೇ ರ್ಯಾಂಕ್ (AIR 485) ಗಳಿಸುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ನೈರುತ್ಯ ರೈಲ್ವೆ ವಲಯದ ಮೈಸೂರು ವಿಭಾಗದ ಮೊಳಕಾಲ್ಮೂರು ಸೆಕ್ಷನ್‌ನ ಇಂಜಿನಿಯರಿಂಗ್ ವಿಭಾಗದಲ್ಲಿ ಸಾಮಾನ್ಯ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ಬೊಮ್ಮಯ್ಯ ಎಸ್. ಅವರ ಪುತ್ರನೇ ಈ ಸಾಧಕ ಸುಮಂತ್ ಬಿ.

ಬಡತನ ಮೆಟ್ಟಿ ನಿಂತ ಸಾಧನೆ:
ಚಳ್ಳಕೆರೆಯ ಎಸ್.ಆರ್.ಎಸ್. ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಸುಮಂತ್, ಅತ್ಯಂತ ಸಾಮಾನ್ಯ ಬಡ ಕುಟುಂಬದ ಹಿನ್ನೆಲೆಯಿಂದ ಬಂದವರು. ಆರ್ಥಿಕ ಮುಗ್ಗಟ್ಟಿನ ನಡುವೆಯೂ ನಿರಂತರ ಅಧ್ಯಯನ ಹಾಗೂ ದೃಢ ಸಂಕಲ್ಪದ ಮೂಲಕ ದೇಶದ ಅತ್ಯಂತ ಕಠಿಣ ಪರೀಕ್ಷೆಗಳಲ್ಲೊಂದಾದ ಜೆಇಇಯಲ್ಲಿ ಈ ಅತ್ಯುನ್ನತ ಸಾಧನೆ ಮಾಡಿ, ಇಂದಿನ ವಿದ್ಯಾರ್ಥಿ ಬಳಗಕ್ಕೆ ಮಾದರಿಯಾಗಿದ್ದಾರೆ.

SWRES ವತಿಯಿಂದ ಆತ್ಮೀಯ ಸನ್ಮಾನ:
ಸುಮಂತ್ ಅವರ ಈ ವಿಶಿಷ್ಟ ಹಾಗೂ ಅಪೂರ್ವ ಸಾಧನೆಯನ್ನು ಗುರುತಿಸಿ, ಸೌತ್ ವೆಸ್ಟರ್ನ್ ರೈಲ್ವೆ ಎಂಪ್ಲಾಯಿಸ್ ಸಂಘ (SWRES) ಚಿತ್ರದುರ್ಗ ಶಾಖೆಯ ವತಿಯಿಂದ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಲಾಯಿತು.

ಈ ಅಭಿನಂದನಾ ಸಮಾರಂಭದಲ್ಲಿ SWRES ಚಿತ್ರದುರ್ಗ ಶಾಖೆಯ ಕಾರ್ಯದರ್ಶಿ ಮಂಜುನಾಥ್, ಕಾರ್ಯದಕ್ಷ ಬಾಲರಾಜು ಜಿ.ಸಿ. ಹಾಗೂ ಪ್ರಮುಖರಾದ ವಿಶ್ವನಾಥ್, ರಮೇಶ್ ಪೂಜಾರಿ, ರಮೇಶ್ ಗೌಡ, ನಿರಂಜನ್, ಜಾಕಿರ್ ಹುಸೇನ್, ಏಳುಕೋಟಿ, ಉಮೇಶ್, ಮಲ್ಲಿಕಾರ್ಜುನ, ಮನೀಶ್ ಕುಮಾರ್, ರೂಪೇಶ್ ಕುಮಾರ್, ರಾಘವೇಂದ್ರ, ಬೀರಪ್ಪ ಸೇರಿದಂತೆ ರೈಲ್ವೆ ಇಲಾಖೆಯ ನೌಕರರು ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದು, ಸಾಧಕ ಸುಮಂತ್ ಅವರ ಉಜ್ವಲ ಭವಿಷ್ಯಕ್ಕೆ ಹಾರ್ದಿಕ ಶುಭ ಹಾರೈಸಿದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಣಿ ವಿಲಾಸ ಸಾಗರ ಹಾಗೂ ಗಾಯತ್ರಿ ಜಲಾಶಯಗಳಿಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿರ್ಬಂಧಆಗಸ್ಟ್ 12ಕ್ಕೆ 'ಶತಮಾನದ ಖಗ್ರಾಸ ಸೂರ್ಯಗ್ರಹಣ': ಭಾರತದಲ್ಲಿ ಗೋಚರವಿಲ್ಲ, ಯಾವುದೇ ಆಚರಣೆ ಅಗತ್ಯವಿಲ್ಲರಾಣಿ ಎಲಿಜಬೆತ್ ಹೊಗಳಿದ್ದ ನಮ್ಮ ವಿಧಾನಸೌಧವೇ ನನಗೆ ಸ್ಫೂರ್ತಿ-ಟಿ.ಬಿ ಜಯಚಂದ್ರಕೆಪಿಸಿಸಿ ಅಧ್ಯಕ್ಷರ ಆಶೀರ್ವಾದ ಸಿಕ್ಕಿದೆ- ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ ಯುವ ಜನತೆಗೆ ಯೋಗ, ವ್ಯಾಯಾಮ ಅತ್ಯಂತ ಅವಶ್ಯ:ದಿವ್ಯ ಜ್ಞಾನಾನಂದ ಶ್ರೀಎಸ್. ನಾಗೇನಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್ಸವರ್ಣೀಯ ಮುಖಂಡರಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ-ಮಾರಸಂದ್ರ ಮುನಿಯಪ್ಪಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆಮೈಸೂರಲ್ಲಿ  'ಜೋಡೆತ್ತು' ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್