Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ಟೋಬರ್-31 ರಂದು ರಾಜ ವೀರ ಮದಕರಿನಾಯಕ ನಾಟಕ ಪ್ರದರ್ಶನ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹವಾಮಾನ ವೈಪರಿತ್ಯದಿಂದ ವೀರ ಮದಕರಿ ನಾಟಕದ ಪ್ರದರ್ಶನ ಮುಂದೂಡಲಾಗಿದ್ದು ಇದೇ ತಿಂಗಳ ಅಕ್ಟೋಬರ್-31 ರಂದು ರಾತ್ರಿ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.


ವೀರಮದಕರಿ ನಾಟಕ ನೋಡಲು ಸಾವಿರಾರು ಜನ ಬರುವ ನಿರೀಕ್ಷೆ ಇದೆ. ಜಿಲ್ಲಾ ವಕೀಲರಿಂದ ಈಗಾಗಲೇ ಯಶಸ್ವಿಯಾಗಿ 2 ಬಾರಿ ಕುರುಕ್ಷೇತ್ರ ಪೌರಾಣಿಕ ನಾಟಕ ಮತ್ತು 1 ಬಾರಿ ಸಾಮಾಜಿಕ ನಾಟಕವು ಪದರ್ಶನ ಮಾಡಿ ಜನ ಮನ್ನಣೆ ಗಳಿಸಿರುತ್ತಾರೆ.

ಈ ಹಿಂದೆ ಪ್ರದರ್ಶನ ಮಾಡಿದಂತಹ ನಾಟಕಗಳನ್ನು ನೋಡಲು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಮತ್ತು ಹಳ್ಳಿ ಹಳ್ಳಿಗಳಿಂದಲೂ ಜನ ಸಾಗರ ಹರಿದು ಬಂದಿದ್ದು ರಾಜ ವೀರ ಮದಕರಿ ನಾಯಕ ನಾಟಕ ಪ್ರದರ್ಶನಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಬರಲಿದ್ದು ಎಲ್ಲರಿಗೂ ಮೂಲ ಸೌಲಭ್ಯಗಳ ವ್ಯವಸ್ಥೆ ಮಾಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ರಾಜ ವೀರ ಮದಕರಿ ನಾಯಕ ನಾಟಕವು ಚಿತ್ರದುರ್ಗದ ಇತಿಹಾಸ ಪ್ರತಿಬಿಂಬಿಸುತ್ತದೆ. ಜೊತೆಗೆ ಪಾಳೇಗಾರರ ಆಡಳಿತದ ಬಗ್ಗೆ ಬೆಳಕು ಚಲ್ಲುತ್ತದೆ. ಆದ್ದರಿಂದ ಬಹುತೇಕ ಜನರು ನಾಟಕ ಪ್ರದರ್ಶನಕ್ಕೆ ಸಾಗರೂಪಾದಿಯಲ್ಲಿ ಹರಿದು ಬರುವ ನಿರೀಕ್ಷೆ ಇದೆ.

ರಾಜ ವೀರ ಮದಕರಿ ನಾಯಕ ನಾಟಕವನ್ನು ಅಂದು ಸಂಜೆ 7.30 ಗಂಟೆಗೆ ಉಚ್ಛ ನ್ಯಾಯಾಲದ ನ್ಯಾಯಮೂರ್ತಿ ಟಿ.ವೆಂಕಟೇಶ್‌ನಾಯ್ಕ ರವರು ಉದ್ಘಾಟಿಸಲಿದ್ದಾರೆ.

ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ನ್ಯಾಯಾಧೀಶರಾದ ರೋಣ್ ವಾಸುದೇವ್, ಸಹಾಯಕ ಜಿಲ್ಲಾ ನ್ಯಾಯಾಧೀಶರಾದ ಎಸ್.ಎನ್.ಕಲ್ಕಣಿ ಮತ್ತು ಗಂಗಾಧರ್.ಸಿ.ಹೆಚ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಕರ್ನಾಟಕ ರಾಜ್ಯ ವಕೀಲ ಪರಿಷತ್ತಿನ ಸದಸ್ಯರಾದ ಗೌತಮ್ ಚಂದ್, ಶ್ರೀನಿವಾಸ್ ಬಾಬು, ರಾಜಣ್ಣ, ದೇವರಾಜು ಭಾಗವಹಿಸಲಿದ್ದಾರೆ.

ಸಮಾರಂಭದ ಅಧ್ಯಕ್ಷತೆ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ವಹಿಸಲಿದ್ದಾರೆ. ವೀರ ಮದಕರಿ ನಾಯಕ ನಾಟಕದ ಸಂಪೂರ್ಣ ಸಾರಥ್ಯವನ್ನು ವಕೀಲರಾದ ಎನ್.ಶರಣಪ್ಪ ವಹಿಸಿದ್ದಾರೆ.

ನಾಟಕದ ವ್ಯವಸ್ಥಾಪಕ ಮತ್ತು ನಿರ್ದೇಶಕರಾಗಿ ಮಾಜಿ ಅಧ್ಯಕ್ಷ ಎಸ್.ವಿಜಯ್‌ಕುಮಾರ್ ಮತ್ತು ಪಿ.ಆರ್.ವೀರೇಶ್ ನಿರ್ವಹಿಸುತ್ತಾರೆ.

ವಕೀಲರು ಪ್ರದರ್ಶನ ಮಾಡುತ್ತಿರುವ ವೀರ ಮದಕರಿ ನಾಯಕ ನಾಟಕ ಪ್ರದರ್ಶನಕ್ಕೆ ಜಿಲ್ಲಾ ಮತ್ತು ಎಲ್ಲಾ ತಾಲ್ಲೂಕು ವಕೀಲರ ಸಂಘದ ಎಲ್ಲಾ ಪದಾಧಿಕಾರಿಗಳು, ವಕೀಲರು ಅವರ ಕುಟುಂಬದವರು ಹಾಗೂ ಜಿಲ್ಲೆಯ ಎಲ್ಲಾ ಕಲಾಭಿಮಾನಿಗಳು, ಕಲಾ ಪೋಷಕರು, ಕಲಾ ಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಐತಿಹಾಸಿಕ ನಾಟಕ ಯಶಸ್ವಿಗೊಳಿಸಬೇಕೆಂದು ಚಿತ್ರದುರ್ಗ ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ಸಿ.ಶಿವು ಯಾದವ್ ವಿನಂತಿ ಮಾಡಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ