ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರವರ ಸಚಿವ ಸಂಪುಟದಲ್ಲಿ ಸಚಿವ ರಾಮಲಿಂಗಾರೆಡ್ಡಿರವರು ಕೇಳಿದ ಖಾತೆ ನೀಡಲಿಲ್ಲವೆಂದು ಬೇಸತ್ತು ರಾಜೀನಾಮೆ ನೀಡಿರುವುದು ನಮಗೆಲ್ಲಾ ಮನಸ್ಸಿಗೆ ಅತೀವ ನೋವುಂಟಾಗಿದೆ ಎಂದು ಮಂಜುನಾಥರೆಡ್ಡಿ ಬೇಸರ ವ್ಯಕ್ತಪಡಿಸಿದರು.
ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೊದಲಿನಿಂದಲೂ ಪಕ್ಷಕ್ಕೆ ನಿಷ್ಟಾವಂತರಾಗಿರುವ ಹಿರಿಯ ಅನುಭವಿ ರಾಜಕಾರಣಿ ರಾಮಲಿಂಗಾರೆಡ್ಡಿರವರು ಸಿದ್ದರಾಮಯ್ಯನವರ ಅಧಿಕಾರವಧಿಯಲ್ಲಿ ಸಾರಿಗೆ ಸಚಿವರಾಗಿದ್ದರು. ಈಗ ಬೆಂಗಳೂರು ನಗರಾಭಿವೃದ್ದಿ ಕೇಳಿದ್ದರು. ಅದಕ್ಕೆ ಬದಲಾಗಿ ಜಲಸಂಪನ್ಮೂಲ ಖಾತೆ ನೀಡಿರುವುದು ಅವರಿಗೆ ಸಮಾಧಾನವಾಗಿಲ್ಲ. ಅದಕ್ಕಾಗಿ ರಾಜಿನಾಮೆ ಕೊಟ್ಟಿದ್ದಾರೆ. ಹೈಕಮಾಂಡ್ ಇದನ್ನು ಪುನರ್ ಪರಿಶೀಲಿಸುವಂತೆ ಒತ್ತಾಯಿಸಿದರು.
ವಿಜಯಕುಮಾರ್ರೆಡ್ಡಿ ಮಾತನಾಡಿ ಸಚಿವ ರಾಮಲಿಂಗಾರೆಡ್ಡಿರವರು ಹಿಂದಿನಿಂದಲೂ ಕಾಂಗ್ರೆಸ್ನಲ್ಲಿಯೇ ಉಳಿದುಕೊಂಡಿದ್ದಾರೆ. ಸರಳ ಸಜ್ಜನಿಕೆಯ ವ್ಯಕ್ತಿತ್ವವುಳ್ಳ ಇವರಿಗೆ ಯಾವುದೆ ಕಪ್ಪು ಚುಕ್ಕೆ ಕಳಂಕವಿಲ್ಲ.
ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರವರ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ನೀಡಬೇಕೆಂದು ದೆಹಲಿಗೆ ಹೋಗಿ ನಾಯಕರುಗಳ ಬಳಿ ಲಾಭಿ ಮಾಡಿದವರಲ್ಲ. ನಗರಾಭಿವೃದ್ದಿ ಖಾತೆ ಸಿಗಲಿಲ್ಲವೆಂದು ಬೇಜಾರಾಗಿ ರಾಜಿನಾಮೆ ಸಲ್ಲಿಸಿದ್ದಾರೆ. ವರಿಷ್ಟರು ಮತ್ತೊಮ್ಮೆ ಪರಾಮರ್ಶಿಸಲಿ ಎಂದು ಮನವಿ ಮಾಡಿದರು. ಪುರುಷೋತ್ತಮ, ವೆಂಕಟೇಶ್ರೆಡ್ಡಿ, ರಾಜಣ್ಣ, ನಾಗರಾಜ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿದ್ದರು.



