Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಮಾಯಣ ಮತ್ತು ಮಹಾಭಾರತಗಳು ಭಾರತದ ಮಹಾನ್ ಚರಿತ್ರೆಯಾಗಿವೆ: ಬಿಂದುಶ್ರೀ

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಶ್ರೀಮದ್ ರಾಮಾಯಣ ಮತ್ತು ಮಹಾಭಾರತಗಳೆಂಬ ಮಹಾಕಾವ್ಯಗಳು  ಭಾರತದ ಮಹಾನ್ ಚರಿತ್ರೆಯಾಗಿವೆ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಶಾರದಾ ಬಾಲಕ ಸಂಘದ ವಿದ್ಯಾರ್ಥಿನಿ ಕುಮಾರಿ ಬಿಂದುಶ್ರೀ ತಿಳಿಸಿದರು.  


ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದಲ್ಲಿ ಮಕ್ಕಳಿಗಾಗಿ ಆಯೋಜಿಸಿದ್ದ "ವಿವೇಕ ವಿಹಾರ ವಿದ್ಯಾರ್ಥಿ ಶಿಬಿರ" ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು "ಶ್ರೀಮದ್ ರಾಮಾಯಣದ ಬಾಲಖಂಡ"ದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.


ನಾರದಾ ಮಹರ್ಷಿಗಳಿಂದ ಹೇಳಲ್ಪಟ್ಟು ಮಹರ್ಷಿ ವಾಲ್ಮೀಕಿಗಳಿಂದ ರಚಿಸಲ್ಪಟ್ಟ   ರಾಮಾಯಣ ಮಹಾಕಾವ್ಯವು ಒಟ್ಟು ಇಪ್ಪತ್ನಾಲ್ಕು ಸಾವಿರ ಶ್ಲೋಕಗಳನ್ನು ಬಾಲಖಂಡ, ಅಯೋಧ್ಯಾಖಂಡ, ಕಿಷ್ಕಿಂಧಾ ಖಂಡ, ಅರಣ್ಯಖಂಡ, ಯುದ್ಧಖಂಡ, ಸುಂದರಖಂಡ, ಉತ್ತರಖಂಡಗಳೆಂಬ ಏಳು ಖಂಡಗಳನ್ನು ಒಳಗೊಂಡಿದ್ದು ಅದರಲ್ಲಿ ಶ್ರೀರಾಮನ ಬಾಲ್ಯಜೀವನದ ವಿವರಣೆ ನೀಡುವ ಬಾಲಖಂಡವು ರಾಮಾಯಣದ ಬಗ್ಗೆ ಪೀಠಿಕೆ ರೂಪದ ಚರಿತ್ರೆಯನ್ನು ತಿಳಿಸುತ್ತದೆ ಎಂದು ಬಾಲಖಂಡದ ವಿವಿಧ ವಿಷಯಗಳ ಬಗ್ಗೆ ಮಾತನಾಡಿದರು.

ಶಿಬಿರದ ಪ್ರಯುಕ್ತ ಮಕ್ಕಳಿಂದ ಓಂಕಾರ, ದಿವ್ಯತ್ರಯರ ಪ್ರಣಾಮಮಂತ್ರ, ಶ್ರೀರಾಮಕೃಷ್ಣರ ನಾಮಸ್ಮರಣೆ, ಸ್ವಾಮಿ ವಿವೇಕಾನಂದರ ಶಕ್ತಿಮಂತ್ರ, ಸ್ವದೇಶ ಮಂತ್ರ, ಚೈತನ್ಯದಾಯಕ ನುಡಿಗಳ ಪಠಣ, ಅಮ್ಮಾ ಶಾರದಾಮಾತೆ, ಯತೀಶ್ ಎಂ ಸಿದ್ದಾಪುರ ಅವರು   "ಜಯ ದುರ್ಗಾ" ನಾಮಾವಳಿ ಹೇಳಿಕೊಟ್ಟರೆ ಸಂತೋಷ್ ಕುಮಾರ್ ಅವರು ಮಕ್ಕಳಿಗೆ ವಿವಿಧ ಆಟಗಳನ್ನು ಆಡಿಸಿದರು.                                      ತರಗತಿಯಲ್ಲಿ ಪೂಜ್ಯ ಮಾತಾಜೀ ತ್ಯಾಗಮಯೀ, ಸುಧಾಮಣಿ,ಡಾ.ಭೂಮಿಕ ಅದ್ವೈತ್,ವಿವಿಕ್ತ, ವಶಿಷ್ಠಾ, ಜಶ್ವಿತಾ , ಲಕ್ಷ್ಮೀ , ಯಶಸ್,ನೇಹ, ಹರ್ಷವರ್ಧನ್, ಚರಣ್ಯ,ಸಂಜನಾ,ಭೂಮಿಕಾ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ಬೆಂಗಳೂರಿಗೆ ಮತ್ತೊಂದು ಗರಿ: ಐಎಸ್ಒ ಮಾನ್ಯತೆ ಪಡೆದ ದೇಶದ ಮೊದಲ ಜಲಮಂಡಳಿ ಸಮಾಜದ ಋಣ ತೀರಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು-ಭೋವಿಶ್ರೀಸಂವಿಧಾನದ ಮೌಲ್ಯಗಳನ್ನು ಅಳವಡಿಸಿಕೊಳ್ಳಿ- ನ್ಯಾ.ರೋಣ ವಾಸುದೇವ್ ಕರೆ ಆಸಿಡ್ ದಾಳಿಗೆ ಒಳಗಾದ ನೊಂದ ವ್ಯಕ್ತಿಗಳಿಗೆ ಒಂದು ತಿಂಗಳಲ್ಲೇ ಮಧ್ಯಂತರ ಪರಿಹಾರ ವಿತರಣೆಯಾದವ ಗೊಲ್ಲರ ಸಂಘದ ಆಡಳಿತಾಧಿಕಾರಿ ಅವಧಿ ವಿಸ್ತರಣೆಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಶಾಖಾಧಿಕಾರಿ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನಸಂಸದರ ಕಚೇರಿ ಎದುರು ಕಮ್ಯುನಿಸ್ಟ್ ಪಕ್ಷ ಪ್ರತಿಭಟನೆ ಆರೋಗ್ಯ ರಕ್ಷಣೆಗೆ ಜೀವನ ಶೈಲಿ ಬದಲಾಗಬೇಕು- ಮಾಜಿ ಸಚಿವ ಆಂಜನೇಯ ವಿದ್ಯಾರ್ಥಿವೇತನ ಬಿಡುಗಡೆಗೆ ಸಿಎಂಗೆ ಮನವಿಕುಂಚಿಟಿಗ ಕುಲ ದೇವತೆಗಳ ವಿಶಿಷ್ಟ ಆಚರಣೆ: ಏನಿದು ಶ್ರೀಕಣಿವೆ ಮಾರಮ್ಮನ 'ಸೆಳೆ' ವೈಭವ