LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸೌಹಾರ್ದತೆಗೆ ರೆಡ್‌ಕ್ರಾಸ್ ಸಂಸ್ಥೆ ಮಾದರಿ: ಶಶಿಕಲಾ ರವಿಶಂಕರ್

Advertisement
Advertisement

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ವಿಶ್ವಮಟ್ಟದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಎತ್ತಿಹಿಡಿಯುವಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಪಾತ್ರ ಹಾಗೂ ಸೇವೆ ಅತ್ಯಂತ ಮಾದರಿಯಾಗಿದೆ ಎಂದು ಯೂಥ್ ರೆಡ್‌ಕ್ರಾಸ್ ಘಟಕದ ಸಂಯೋಜಕಿ ಶಶಿಕಲಾ ರವಿಶಂಕರ್ ಹೇಳಿದರು.

ನಗರದ ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ತಾಲ್ಲೂಕು ಘಟಕ, ಯೂಥ್ ರೆಡ್‌ಕ್ರಾಸ್ ಘಟಕ ಹಾಗೂ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ 'ಜಿನೀವಾ ಒಪ್ಪಂದ ದಿನಾಚರಣೆ'ಯ ಅಂಗವಾಗಿ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಸಾಮಾಜಿಕ ಅರಿವು ಮತ್ತು ಜಾಥಾ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ವಿಶ್ವದ ಇತಿಹಾಸದಲ್ಲಿ ಮಾನವೀಯ ಬದುಕು ಹಾಗೂ ಸಾಧನೆಗಳು ಸದಾ ಜೀವಂತವಾಗಿರುತ್ತವೆ. ಜಿನೀವಾ ಒಪ್ಪಂದದ ಸಂದರ್ಭದಲ್ಲಿ ಮಿತ್ರ-ಶತ್ರು ಎಂಬ ಭೇದಭಾವವಿಲ್ಲದೆ, ಯುದ್ಧದ ಸಾವು-ನೋವಿನ ನಡುವೆ ಸ್ವಯಂಪ್ರೇರಿತರಾಗಿ ವೈದ್ಯಕೀಯ ನೆರವು ನೀಡಿದ ಜೀನ್ ಹೆನ್ರಿ ಡ್ಯೂನಾಂಟ್ ಅವರ ಮಾನವೀಯ ಸೇವೆ ವಿಶ್ವಕ್ಕೇ ಮಾದರಿಯಾಗಿದೆ. ಅವರ ಸ್ಮರಣಾರ್ಥವಾಗಿಯೇ ಜಗತ್ತಿನಾದ್ಯಂತ ರೆಡ್‌ಕ್ರಾಸ್ ಸಂಸ್ಥೆ ಕಾರ್ಯಾಚರಿಸುತ್ತಿದೆ ಎಂದು ತಿಳಿಸಿದರು. 

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ತಾಲ್ಲೂಕು ಚೇರ್ಮನ್ ರಾಧಾ ಎಚ್.ಎಸ್. ಸುಂದರ್‌ರಾಜ್ ಸಂಸ್ಥೆಯ ಚಟುವಟಿಕೆಗಳನ್ನು ಶ್ಲಾಘಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯೆ ಬಿ.ಆರ್. ಹೇಮಲತಾ ಮಾತನಾಡಿ, ರೆಡ್‌ಕ್ರಾಸ್ ಸಂಸ್ಥೆಯ ಮೂಲ ಉದ್ದೇಶ ಮತ್ತು ಗುರಿಗಳು ಸಮಾಜಮುಖಿ ಹಾಗೂ ಪ್ರಗತಿಪರ ಚಿಂತನೆಗಳಿಗೆ ಪ್ರೇರಣೆಯಾಗಿವೆ ಎಂದರು.

ಈ ಸಂದರ್ಭದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಂ.ಎಸ್. ರಾಘವೇಂದ್ರ, ರಾಜ್ಯ ಸಮಿತಿ ಸದಸ್ಯ ಅನಂತರಾಮ್, ಪ್ರೊ. ಬಿ.ಕೆ. ನಾಗಣ್ಣ, ಬಸವರಾಜ್ ಟಿ. ಬೆಳಗಟ್ಟಿ, ಬಿ.ಟಿ. ಭರತ್, ಎಸ್.ಎಂ. ವೀರೇಶ್, ಡಾ. ಎ. ದೇವಿಕಾ, ಮಹಮದ್ ಸಾದತ್, ನರಸಿಂಹಮೂರ್ತಿ, ಎಚ್.ಎಸ್. ಚಂದ್ರವದನ, ಎಂ.ವಿ. ನಾಗರತ್ನಮ್ಮ, ಸರೋಜಮ್ಮ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾವೇರಿ ಕಿಚ್ಚು: ಸುಪ್ರೀಂ ತೀರ್ಪು ನೋಡಿ ಮುಂದಿನ ನಿರ್ಧಾರ, ಹೆಚ್‌ಡಿಕೆಗೆ ಸಚಿವ ರಾಮಲಿಂಗಾರೆಡ್ಡಿ ಸವಾಲು!ಉಗ್ರರೂಪ ತಾಳಿದ ಕಾವೇರಿ ಕಿಚ್ಚು: ಹೆದ್ದಾರಿ ತಡೆದು ರೈತರ ಬೃಹತ್ ಪ್ರತಿಭಟನೆ!ಆಗಸ್ಟ್ 13ರ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ: ಸಾರಿಗೆ, ಶಾಲಾ-ಕಾಲೇಜು ಕಾರ್ಯನಿರ್ವಹಣೆ?ಪ್ರಜ್ವಲ್ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ: DIG ನೇತೃತ್ವದಲ್ಲಿ ಆಂತರಿಕ ತನಿಖೆ!ಐಎಎಸ್ ಅಧಿಕಾರಿಗಳ ವರ್ಗಾವಣೆ: ಕೆಪಿಎಸ್‌ಸಿ ಪರೀಕ್ಷಾ ಜವಾಬ್ದಾರಿ ಕೆಇಎ 'ಎಚ್. ಪ್ರಸನ್ನ' ಹೆಗಲಿಗೆ!ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಹಿರಿಯ ನಾಯಕರ ರಹಸ್ಯ ಸಭೆ: ಡಾ. ಯತೀಂದ್ರ ಸಮಾಧಾನದ ಯತ್ನ!ಜೈಲಿನ ಮೇಲೆ ಸಿಸಿಬಿ ದಾಳಿ ನನ್ನದೇ ಆದೇಶ: ಪ್ರಿಯಾಂಕ್ ಖರ್ಗೆ!ಜೈಲಿನ ಮೇಲೆ ಸಿಸಿಬಿ ಹಠಾತ್ ದಾಳಿ: ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್ ಡ್ರೈವ್ ಪತ್ತೆ- FIR ದಾಖಲು!ನೂತನ ಸಚಿವರಿಗೆ ಖಾತೆ ಹಂಚಿಕೆ: ರಾಮಲಿಂಗಾರೆಡ್ಡಿ, ಮುನಿಯಪ್ಪ ಖಾತೆ ಬದಲಾವಣೆ–ಯಾರಿಗೆ ಯಾವ ಇಲಾಖೆ?ಯುಎಪಿಎ ಪ್ರಕರಣಗಳ ಸುದೀರ್ಘ ವಿಳಂಬಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ