ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲೂಕಿನ ಜವನಗೊಂಡನಹಳ್ಳಿ ಹಾಗೂ ಕಸಬಾ ಹೋಬಳಿಗಳಲ್ಲಿ ಆಗಸ್ಟ್ ಕೊನೆಯವರೆಗೂ ಬಿತ್ತನೆ ಮಾಡಲು ಅವಕಾಶವಿದೆ. ಉಳಿದ ಹೋಬಳಿಗಳಲ್ಲಿ ಇದುವರೆಗೆ ಬಿತ್ತನೆಯಾಗದ ಜಮೀನುಗಳಲ್ಲಿ ಪರ್ಯಾಯ ಬೆಳೆಗಳಾದ ರಾಗಿ, ಹುರುಳಿ ಮತ್ತು ಸಿರಿಧಾನ್ಯಗಳನ್ನು ಬೆಳೆಯಬಹುದು ಎಂದು ಕೃಷಿ ಇಲಾಖೆ ತಿಳಿಸಿದೆ.
ರಾಗಿ ಬೆಳೆ ಬೆಳೆಯುವ ರೈತರು ‘ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ’ಯಡಿ ಬೆಳೆ ವಿಮೆ ನೋಂದಣಿ ಮಾಡಿಸಲು ಆಗಸ್ಟ್ 14 ಕೊನೆಯ ದಿನವಾಗಿದೆ.
ಯೋಜನೆಯ ಪ್ರಯೋಜನವನ್ನು ಪ್ರತಿಯೊಬ್ಬ ರೈತರೂ ಪಡೆದುಕೊಳ್ಳಬೇಕು ಎಂದು ಯಲ್ಲದಕೆರೆ ಗ್ರಾಮದಲ್ಲಿ ನಡೆದ ಬೆಳೆ ವಿಮೆ ಪ್ರಚಾರ ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ನಿರ್ದೇಶಕ ಅಶೋಕ್ ಜೆ. ಮನವಿ ಮಾಡಿದ್ದಾರೆ.



