Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತ್ಯಾಗ, ಹೋರಾಟ, ಸೇವಾ ತತ್ಪರತೆ ಸ್ಮರಿಸಿ

Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : 
ಹಿಂದಿನ ತಲೆಮಾರುಗಳ ತ್ಯಾಗ
, ಹೋರಾಟ, ಸೇವಾ ತತ್ಪರತೆ ಸ್ಮರಿಸಿ ಅವರ ಆದರ್ಶಗಳನ್ನು ಪಾಲಿಸುವ ಅಗತ್ಯವಿದೆ ಎಂದು ವಿಶ್ರಾಂತ ಜಂಟಿ ನಿರ್ದೇಶಕ ಪ್ರೊ.ಟಿ.ವಿ.ಸುರೇಶ್‌ಗುಪ್ತ ಹೇಳಿದರು.

ಆರ್ಯವೈಶ್ಯ ಸಂಘ, ಆರ್ಯವೈಶ್ಯ ಸಾಹಿತ್ಯ ಪರಿಷತ್ತು, ವಾಸವಿ ಮಹಿಳಾ ಸಂಘದಿಂದ ಚಿತ್ರದುರ್ಗದ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಏರ್ಪಡಿಸಲಾಗಿದ್ದ ವಾಸವಿ ಜಯಂತಿ ಸಪ್ತೋತ್ಸವದ ಮೂರನೆ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಾತಿನಿಧಿಕವಾಗಿ ಹತ್ತು ಮಂದಿ ವಣಿಜಕುಲದ ಮಹನೀಯರನ್ನು ಚಿತ್ರ ಸಮೇತ ಕಿರುಪರಿಚಯ ಹಾಡಿನೊಂದಿಗೆ ಪ್ರಸ್ತುತ ಪಡಿಸಲಾಗಿದೆ. ನಮ್ಮ ಸಮುದಾಯದಲ್ಲಿ ಸಾಹಿತಿಗಳು, ಸ್ವಾತಂತ್ರ ಹೋರಾಟಗಾರರು ಮಹಾದಾನಿಗಳು ಹಾಗೂ ಬೇರೆ ಬೇರೆ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿರುವವರನ್ನು ಸ್ಮರಿಸಿಕೊಳ್ಳಬೇಕಿದೆ ಎಂದರು.

ವಾಸವಿ ಮಹಿಳಾ ಸಂಘದ ಅಧ್ಯಕ್ಷೆ ಸರ್ವದಾ ಸುರೇಶ್ ಗುಪ್ತ ಮಾತನಾಡಿ ಜನಪ್ರಿಯವಾದ ಹರಟೆ ಕಾರ್ಯಕ್ರಮದಂತೆ ಈ ದಿನ ಹಬ್ಬಗಳು ಅಂದು ಇಂದು ವಿಷಯ ಕುರಿತು ಏರ್ಪಡಿಸಲಾಗಿದ್ದ ಸಂವಾದ ಗೋಷ್ಠಿಯಲ್ಲಿ ಆರು ಗೃಹಲಕ್ಷ್ಮಿಯರು ಮಂಡಿಸಿದ ವಿಚಾರದಲ್ಲಿ ಜೆ.ಆರ್.ಶಿವಕುಮಾರ್ ರಚಿತವಾದ ಏಕತಾಗೀತೆಗೆ ನಮ್ಮ ಗಾಯಕಿಯರು ಧ್ವನಿಗೂಡಿಸಿದ್ದು, ವಿಶೇಷ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಆರ್ಯವೈಶ್ಯ ಸಂಘದ ಅಧ್ಯಕ್ಷ ಶ್ರೀನಿವಾಸಬಾಬು ಉದ್ಘಾಟಿಸಿದರು. ಎಂ.ಎಚ್.ಮಂಜುನಾಥ್, ಎನ್.ಶಶಿಧರಗುಪ್ತ ಇವರುಗಳು ವೇದಿಕೆಯಲ್ಲಿದ್ದರು.

ಮಹಿಳೆಯರಿಂದ ಕೋಲಾಟ, ಹಳೆ ಚಿತ್ರಗೀತೆಗಳ ಜಾಮಿಂಗ್ ಅನೇಕ ಹೃನ್ಮನ ಸೆಳೆಯಿತು.
ಸ್ವರ್ಣರಾಜ್ ಪ್ರಾರ್ಥಿಸಿದರು. ಸುಧಾ ಮಂಜುನಾಥ್ ಸ್ವಾಗತಿಸಿದರು. ಜೆ.ಆರ್.ಶಿವಕುಮಾರ್ ವಂದಿಸಿದರು. ದೇವಿಗೆ ಮಂಗಳಾರತಿ ನಂತರ ಪ್ರಸಾದ ವಿನಿಯೋಗಿಸಲಾಯಿತು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಂಗಲ್ಯ, ಜನಿವಾರ ವಿವಾದ: ಕಾಂಗ್ರೆಸ್‌ಸರ್ಕಾರದ ವಿರುದ್ಧ ಅಶೋಕ್ ತೀವ್ರ ವಾಗ್ದಾಳಿಭಕ್ತಿಭಾವದ ಶ್ರೀ ರಾಮನವಮಿ ಆಚರಣೆ; ಆರ್. ಅಶೋಕ್ ಭಾಗಿದಾವಣಗೆರೆ ವಿಶ್ವವಿದ್ಯಾಲಯದ ಬಳಿ ಸುಸಜ್ಜಿತ ಬಸ್ ನಿಲ್ದಾಣ: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ನವೋದ್ಯಮ ಮತ್ತು ಕೈಗಾರಿಕಾ ಕ್ರಾಂತಿಯ ನಾಯಕತ್ವ: ಕರ್ನಾಟಕದ ಕಹಳೆಬಂಗಾಳದಲ್ಲಿ ಚುನಾವಣಾ ಹಿಂಸಾಚಾರ: ಬಿಜೆಪಿ ಅಭ್ಯರ್ಥಿಯ ಮೇಲೆ ಹಲ್ಲೆ;- ಸಿ.ಟಿ. ರವಿ ಆಕ್ರೋಶ"ಗ್ಯಾರಂಟಿ ಬೇಡ, ಜೀವಕ್ಕೆ ಗ್ಯಾರಂಟಿ ಕೊಡಿ": ನಿಖಿಲ್ ಕುಮಾರಸ್ವಾಮಿ ಆಗ್ರಹಶರಾವತಿ ಯೋಜನೆಗೆ ಕೇಂದ್ರದ ಅಸಹಕಾರ: ಸಿದ್ದರಾಮಯ್ಯ ತೀವ್ರ ಅಸಮಾಧಾನಗ್ರಾಮ ಪಂಚಾಯತ್ ಅನುದಾನ ಬಿಡುಗಡೆಗೆ ತಾರತಮ್ಯ: ಕೇಂದ್ರದ ವಿರುದ್ಧ ಸಿಎಂ ಆಕ್ರೋಶಕೇಂದ್ರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ: "ಕರ್ನಾಟಕಕ್ಕೆ ಸಿಗದ ಮೂಲಸೌಕರ್ಯ ನ್ಯಾಯ"ಬೆಂಗಳೂರು ಕೃಷಿ ತಂತ್ರಜ್ಞಾನದ ರಾಜಧಾನಿಯಾಗಲಿ: ಸಿಎಂ ಸಿದ್ದರಾಮಯ್ಯ ಆಶಯ