Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ : ನೋಂದಣಿಗೆ ಮನವಿ 

 ಚಂದ್ರವಳ್ಳಿ ನ್ಯೂಸ್, ತುಮಕೂರು:
ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ತಾವು ಬೆಳೆಯುವ ಬೆಳೆಗಳನ್ನು ವಿಮಾ ಸೌಲಭ್ಯಕ್ಕೊಳಪಡಿಸಲಿಚ್ಛಿಸುವ ರೈತರು ತಮ್ಮ ಹೆಸರನ್ನು  ನೋಂದಾಯಿಸಿಕೊಳ್ಳಬೇಕೆಂದು ಜಂಟಿ ಕೃಷಿ ನಿರ್ದೇಶಕ ರಮೇಶ್ ಮನವಿ ಮಾಡಿದ್ದಾರೆ.


ಜಿಲ್ಲೆಯಲ್ಲಿ ಬೆಳೆ ವಿಮಾ ಯೋಜನೆಯನ್ನು ಅನು?ನ ಮಾಡಲು ಓರಿಯಂಟಲ್  ಜನರಲ್ ಇನ್ಯೂರೆನ್ಸ್ ಕಂಪನಿಯನ್ನು ನಿಗಧಿ ಮಾಡಲಾಗಿದೆ.

ಅನಿಶ್ಚಿತ ಕೃಷಿಯಲ್ಲಿ ನಿಶ್ಚಿತ ಆದಾಯ ತರುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರವು ೨೦೨೪-೨೫ನೇ ಸಾಲಿನ ಹಿಂಗಾರು ಹಂಗಾಮಿಗಾಗಿ  ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಿದೆ.  ಮಳೆ ಅಥವಾ ಇತರ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಧಿಸೂಚಿತ ಘಟಕದಲ್ಲಿ ಶೇ.೭೫ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಠ ಶೇ.೨೫ರಷ್ಟು ಬೆಳೆ ವಿಮೆ ನಷ್ಟ ಹಾಗೂ ಸ್ಥಳ ನಿರ್ಧಿಷ್ಠ ಪ್ರಕೃತಿ ವಿಕೋಪಗಳಿಂದ ಉಂಟಾಗುವ ನಷ್ಟವನ್ನು  ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರ ನೀಡಲಾಗುವುದು. 

     ಸ್ಥಳ ನಿರ್ಧಿಷ್ಟ ಪ್ರಕೃತಿ ವಿಕೋಪಗಳಿಂದ ಉಂಟಾಗುವ ನಷ್ಟವನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ಈ ಯೋಜನೆಯಲ್ಲಿ ಅವಕಾಶವಿದೆ. ಅಧಿಸೂಚಿತ ವಿಮಾ ಘಟಕದಲ್ಲಿ ಬಿತ್ತನೆಯಾದ ನಂತರ ಕಟಾವಿಗೆ ಮೊದಲು  ನಿರೀಕ್ಷಿತ ಇಳುವರಿಯು ಪ್ರಾರಂಭಿಕ ಇಳುವರಿಗಿಂತ ಶೇಕಡಾ ೫೦ಕ್ಕಿಂತ ಕಡಿಮೆ ಇದ್ದರೆ, ವಿಮೆ ಮಾಡಿಸಿದ ರೈತರಿಗೆ ಅಂದಾಜು ಮಾಡಲಾದ ಬೆಳೆ ವಿಮಾ ನಷ್ಟ ಪರಿಹಾರದಲ್ಲಿ ಶೇಕಡಾ ೨೫ರಷ್ಟು ಹಣವನ್ನು ವಿಮಾ ಸಂಸ್ಥೆಯು ಮುಂಚಿತವಾಗಿ ನೀಡುತ್ತದೆ.

ಈ ಯೋಜನೆಯಡಿ ಬೆಳೆಯನ್ನು ಜಮೀನಿನಲ್ಲೇ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಕಟಾವು ಮಾಡಿದ ಎರಡು ವಾರದೊಳಗೆ(ಹದಿನಾಲ್ಕು ದಿನಗಳು) ಪ್ರಕೃತಿ ವಿಕೋಪದಿಂದ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮಾ ಪರಿಹಾರ ನೀಡಲಾಗುವುದು.  ರೈತರು ಬೆಳೆ ಹಾನಿಗೆ ಕಾರಣಗಳನ್ನು ೭೨ ಗಂಟೆಗಳೊಳಗಾಗಿ ತಿಳಿಸತಕ್ಕದ್ದು.

ಜಿಲ್ಲೆಯ ಗುಬ್ಬಿ ತಾಲ್ಲೂಕು ಕಡಬ, ಕಸಬಾ, ಚೇಳೂರು ಹೋಬಳಿ; ಕುಣಿಗಲ್ ತಾಲ್ಲೂಕಿನ ಕೊತ್ತಗೆರೆ; ಶಿರಾ ತಾಲ್ಲೂಕು ಕಸಬಾ, ಗೌಡಗೆರೆ, ಹುಲಿಕುಂಟೆ; ತುಮಕೂರು ತಾಲ್ಲೂಕಿನ ಕಸಬಾ(ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ), ಗೂಳೂರು; ತುರುವೇಕೆರೆ ತಾಲ್ಲೂಕು ಕಸಬಾ, ದಬ್ಬೇಘಟ್ಟ, ದಂಡಿನಶಿವರ, ಮಾಯಸಂದ್ರ; ಪಾವಗಡ ತಾಲ್ಲೂಕು ನಾಗಲಮಡಿಕೆ, ಕಸಬಾ; ಶಿರಾ ತಾಲ್ಲೂಕು ಬುಕ್ಕಾಪಟ್ಟಣ ಹೋಬಳಿ ಮಟ್ಟದಲ್ಲಿ ಹುರುಳಿ(ಮಳೆ ಆಶ್ರಿತ) ಬೆಳೆಯನ್ನು ಅಧಿಸೂಚಿಸಲಾಗಿದೆ.

ಮಧುಗಿರಿ ತಾಲ್ಲೂಕು ಐ.ಡಿ.ಹಳ್ಳಿ, ಪುರವರ; ಪಾವಗಡ ತಾಲ್ಲೂಕು ನಾಗಲಮಡಿಕೆ ಹೋಬಳಿಗಳಲ್ಲಿ ಮುಸುಕಿನ ಜೋಳ(ನೀರಾವರಿ)ಬೆಳೆ ಹಾಗೂ ಪಾವಗಡ ತಾಲ್ಲೂಕು ನಾಗಲಮಡಿಕೆ, ಕಸಬಾ; ಶಿರಾ ತಾಲ್ಲೂಕು ಬುಕ್ಕಾಪಟ್ಟಣ ಹೋಬಳಿಗಳಲ್ಲಿ ಕಡಲೆ(ಮಳೆ ಆಶ್ರಿತ) ಬೆಳೆಯನ್ನು ಅಧಿಸೂಚಿಸಲಾಗಿದೆ.

ವಿಮೆ ಕಂತು ಪಾವತಿಸಲು ಹುರುಳಿ(ಮಳೆ ಆಶ್ರಿತ) ಬೆಳೆಗೆ ನವೆಂಬರ್ ೧೫, ಕಡಲೆ(ಮಳೆ ಆಶ್ರಿತ) ಬೆಳೆಗೆ ನವೆಂಬರ್ ೩೦ ಹಾಗೂ ಮುಸುಕಿನ ಜೋಳ(ನೀರಾವರಿ) ಬೆಳೆಗೆ ಡಿಸೆಂಬರ್ ೧೬ ಕಡೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಸಮೀಪದ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ