Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರಿ ವಾಹನ ಚಾಲಕರುಗಳಿಗೆ ಜಿಲ್ಲಾ ಕೇಂದ್ರದಲ್ಲಿಯೇ ಪರವಾನಗಿ ನವೀಕರಿಸಲು ಮನವಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಭಾರಿ ವಾಹನ ಚಾಲಕರುಗಳಿಗೆ ಜಿಲ್ಲಾ ಕೇಂದ್ರದಲ್ಲಿಯೇ ಪರವಾನಗಿ ನವೀಕರಿಸುವಂತೆ ಜಿಲ್ಲಾ ಚಾಲಕರ ಕ್ಷೇಮಾಭಿವೃದ್ದಿ ಒಕ್ಕೂಟದಿಂದ ಪ್ರಾದೇಶಿಕ ಸಾರಿಗೆ ಅಧಿಕಾರಿ ಮೂಲಕ ಸಾರಿಗೆ ಸಚಿವ ರಾಮಲಿಂಗರೆಡ್ಡಿರವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.


ಪ್ರತಿ ಐದು ವರ್ಷಕ್ಕೊಮ್ಮೆ ಬಸ್ಸು, ಲಾರಿ ಭಾರಿ ವಾಹನ ಚಾಲಕರುಗಳು ಪರವಾನಗಿಯನ್ನು ನವೀಕರಿಸಿಕೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೆಂಗಳೂರು, ಧಾರವಾಡ, ಮಂಗಳೂರು ಹಾಗೂ ಕಲ್ಬುರ್ಗಿಯಲ್ಲಿ ಮಾತ್ರ ಅವಕಾಶ ಕಲ್ಪಿಸಿವೆ. ಜಿಲ್ಲೆಯಲ್ಲಿ ಐದು ಸಾವಿರಕ್ಕೂ ಹೆಚ್ಚು ಭಾರಿ ವಾಹನ ಚಾಲಕರುಗಳಿದ್ದು, ದೂರದ ಜಿಲ್ಲೆಗಳಿಗೆ ಹೋಗಿ ಪರವಾನಗಿ ನವೀಕರಿಸಿಕೊಳ್ಳುವುದು ಕಷ್ಟವಾಗುತ್ತದೆ. ಅದಕ್ಕಾಗಿ ಜಿಲ್ಲಾ ಕೇಂದ್ರದಲ್ಲಿಯೇ ಪರವಾನಗಿ ನವೀಕರಿಸಿಕೊಳ್ಳಲು ಅವಕಾಶ ನೀಡುವಂತೆ ಚಾಲಕರ ಕ್ಷೇಮಾಭಿವೃದ್ದಿ ಒಕ್ಕೂಟದ ಅಧ್ಯಕ್ಷ ಮಂಜುನಾಥ್ ಹೆಚ್. ಪ್ರಾದೇಶಿಕ ಸಾರಿಗೆ ಅಧಿಕಾರಿಯನ್ನು ಒತ್ತಾಯಿಸಿದರು.

ಚಾಲಕರುಗಳು ಕುಟುಂಬ ನಿಭಾಯಿಸುವುದೇ ಕಷ್ಟವಾಗಿರುವ ಈಗಿನ ಕಾಲದಲ್ಲಿ ದೂರದ ಜಿಲ್ಲೆಗಳಿಗೆ ಹೋಗಿ ಪರವಾನಗಿ ನವೀಕರಿಸಿಕೊಂಡು ಬರಬೇಕಾದರೆ ಊಟ ವಸತಿ ಸೇರಿದಂತೆ ಮೂರರಿಂದ ನಾಲ್ಕು ಸಾವಿರ ರೂ.ಗಳಷ್ಟು ವೆಚ್ಚವಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸಿರುವ ಈ ಆದೇಶವನ್ನು ರದ್ದುಪಡಿಸಿ ಆಯಾ ಜಿಲ್ಲೆಗಳಲ್ಲಿಯೇ ಪರವಾನಗಿ ನವೀಕರಿಸಿಕೊಳ್ಳಲು ಅನುಮತಿಸುವಂತೆ ವಿನಂತಿಸಿದರು.

ಜಿಲ್ಲಾ ಚಾಲಕರ ಕ್ಷೇಮಾಭಿವೃದ್ದಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪರಮೇಶ್ವರಪ್ಪ ಆರ್. ಖಜಾಂಚಿ ರಾಘವೇಂದ್ರ ಕೆ.ಟಿ. ಕುಮಾರ್, ಶಾನ್‌ನವಾಜ್ ಹಾಗೂ ಯುವ ನ್ಯಾಯವಾದಿ ಓ.ಪ್ರತಾಪ್‌ಜೋಗಿ ಈ ಸಂದರ್ಭದಲ್ಲಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ