Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮ್ಯಾನೇಜ್‌ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲಾತಿ-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೋಆಪರೇಟೀವ್ ಮ್ಯಾನೇಜ್‌ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲಾತಿ ತರುವ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ
, ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಆಯೋಜಿಸಿದ್ದ 71ನೇ ಅಖಿಲ‌ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

ನಾನು ಯಾವತ್ತೂ ಸಹಕಾರಿ ಚಳವಳಿ ಮತ್ತು ಸಹಕಾರಿ ತತ್ವದ ಪರವಾಗಿ ಇರುವವನು. ಈ ಕಾರಣಕ್ಕೆ ಸಹಕಾರ ಇಲಾಖೆಯ ನೇಮಕಾತಿಗಳಲ್ಲಿ ಕೋಆಪರೇಟೀವ್ ಮ್ಯಾನೇಜ್ ಮೆಂಟ್ ಪದವಿ, ಡಿಪ್ಲೊಮೋ ಪಡೆದವರಿಗೆ ಮೀಸಲಾತಿ ನೀಡುವ ಪರವಾಗಿದ್ದೀನಿ. ರಾಜ್ಯದಲ್ಲಿ ಸಹಕಾರಿ ಚಳವಳಿ 1904 ರಲ್ಲೇ ಅಂದರೆ ಸ್ವಾತಂತ್ರ್ಯ ಪೂರ್ವದಲ್ಲೇ ಆರಂಭವಾಗಿತ್ತು.

1905 ರಲ್ಲಿ ಸಹಕಾರಿ ನಿಯಮಗಳು ಜಾರಿಗೆ ಬಂದವು. ಸ್ವಾತಂತ್ರ್ಯ ನಂತರ ನೆಹರೂ ಅವರು ದೇಶದ ಪ್ರಧಾನಿಯಾಗಿ ಸಹಕಾರಿ ಕ್ಷೇತ್ರಕ್ಕೆ ಹೆಚ್ಚಿನ ಬೆಂಬಲ ಮತ್ತು ಪ್ರೋತ್ಸಾಹ ಕೊಟ್ಟಿದ್ದರಿಂದ ಸಹಕಾರಿ ಚಳವಳಿ ದೇಶವ್ಯಾಪಿ ವ್ಯಾಪಿಸಲು ನೆರವಾಯಿತು. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಹೆಚ್ಚೆಚ್ಚು ಸಹಕಾರಿ ಚಳವಳಿಯಲ್ಲಿ ತೊಡಗಿಸಿಕೊಳ್ಳಬೇಕು. ನಾನು ಮುಖ್ಯಮಂತ್ರಿಯಾಗಿದ್ದಾಗ ಸಹಕಾರ ಸಂಘಗಳಿಗೆ ಈ ಸಮುದಾಯದ ಯುವಕ / ಯುವತಿಯರನ್ನು ಉಚಿತವಾಗಿ ಸದಸ್ಯರನ್ನಾಗಿ ಮಾಡಿದ್ದೆ. ಈಗಲೂ ಇದು ಮುಂದುವರೆಯಬೇಕು ಎಂದು ಅವರು ತಿಳಿಸಿದರು.

ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ಹೆಚ್ಚು ಪ್ರೋತ್ಸಾಹ ನೀಡಬೇಕು ಮತ್ತು ಇವರಿಂದ ಹೆಚ್ಚೆಚ್ಚು ಹಾಲನ್ನು ಖರೀದಿಸಬೇಕು. ಸಹಕಾರ ಸಂಘಗಳ ಹಾಲಿಗೆ ಮಾರುಕಟ್ಟೆ ವಿಸ್ತರಿಸಬೇಕು. ಚನ್ನಪಟ್ಟಣ ತಾಲ್ಲೂಕೊಂದರಲ್ಲೇ 3 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಲೀ ಹಾಲಿಗೆ 31 ರೂ ಅಂದರೆ 3 ಲಕ್ಷ ಲೀಟರ್ ಗೆ ಕೋಟಿ ರೂಪಾಯಿ ಆಗ್ತದೆ. ಇದು ಆರ್ಥಿಕತೆಗೂ ಹೆಚ್ಚಿನ ಕೊಡುಗೆ ನೀಡಿದಂತಾಗುತ್ತದೆ.

ಹಾಲು ಉತ್ಪಾದಕರಿಗೆ ಅನುಕೂಲ ಮಾಡುವ ಉದ್ದೇಶದಿಂದಲೇ ನಮ್ಮ ಸರ್ಕಾರ ಕ್ಷೀರಭಾಗ್ಯ ಆರಂಭಿಸಿತು. ಲೀಟರ್ ಹಾಲಿಗೆ 5 ರೂ ಪ್ರೋತ್ಸಾಹಧನ ನೀಡುವುದನ್ನು ನಮ್ಮ ಅವಧಿಯಲ್ಲಿ ಆರಂಭಿಸಲಾಯಿತು. ರೈತರ ಕೈಯಲ್ಲೇ ಹಾಲು ಉತ್ಪಾದಕ ಸಂಘಗಳು ಇರಬೇಕು ಎನ್ನುವ ಉದ್ದೇಶದಿಂದ ಡೈರಿಗಳನ್ನು ರೈತರಿಗೇ ನೀಡುವ ತೀರ್ಮಾನ ಮಾಡಿದೆವು. ಈ ಅಧಿಕಾರ ವಿಕೇಂದ್ರೀಕರಣದಿಂದ ಗ್ರಾಮೀಣ ಆರ್ಥಿಕತೆ ಗಟ್ಟಿಯಾಯಿತು. ಇದೇ ಮಹಾತ್ಮಗಾಂಧಿಯವರ ಗ್ರಾಮ ಸ್ವರಾಜ್ಯದ ಆಶಯವೂ ಆಗಿದೆ ಎಂದು ತಿಳಿಸಿದರು.

ಪಂಚಾಯ್ತಿ, ಸೊಸೈಟಿ, ಶಾಲೆ ಈ ಮೂರೂ ಪ್ರತೀ ಗ್ರಾಮಗಳಲ್ಲಿ ಇರಲೇಬೇಕು. ಆಗಲೇ ಗ್ರಾಮಗಳ ಪ್ರಗತಿ ಸಾಧ್ಯ ಎನ್ನುವುದು ಮಹಾತ್ಮಗಾಂಧಿಯವರ ಆಶಯವಾಗಿತ್ತು‌.

ರಾಜೀವ್ ಗಾಂಧಿಯವರು ಸಂವಿಧಾನಕ್ಕೆ ತಿದ್ದುಪಡಿ ತಂದು ಅಧಿಕಾರ ವಿಕೇಂದ್ರೀಕರಣ ಜಾರಿ ಮಾಡಿ ಮಹಿಳೆಯರು, ಹಿಂದುಳಿದವರು, ದಲಿತರ ಕೈಗೆ ಅಧಿಕಾರ ಸಿಗುವಂತೆ ಮಾಡಿದರು.

ಸಮಾನತೆಯ ಸಮಾಜ ನಿರ್ಮಾಣ ಆಗಬೇಕು ಎನ್ನುವ ಆಶಯದಿಂದ ಸಮಾಜದ ಎಲ್ಲಾ ವರ್ಗದವರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ರೂಪಿಸಿ ಜಾರಿ ಮಾಡಿದೆ ಎಂದು ಸಿಎಂ ಹೇಳಿದರು.

ಸಹಕಾರ ಕ್ಷೇತ್ರ ರಾಜ್ಯ ವ್ಯಾಪ್ತಿಗೆ ಸೇರಿದ್ದು. ಆದರೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರದಲ್ಲಿ ಸಹಕಾರ ಇಲಾಖೆ ಆರಂಭಿಸಿದರು. ಇದಕ್ಕೆ ಅಮಿತ್ ಶಾ ಅವರೇ ಸಚಿವರು‌. ಇದು ಕೇಂದ್ರದ ವ್ಯಾಪ್ತಿಗೆ ಬರುವ ವಿಷಯ ಅಲ್ಲ. ಇದರಿಂದಾಗಿ ನಮಗೆ ನಬಾರ್ಡ್ ನಿಂದ ಬರುವ ರೈತರ ಪಾಲಿನ ನೆರವು ಕಡಿತಗೊಂಡಿದೆ. ಒಮ್ಮೆಲೇ 58% ನಬಾರ್ಡ್ ನೆರವು ಕಡಿತಗೊಂಡಿದೆ. ಇದು ನಮ್ಮ ರೈತರಿಗೆ ಆದ ಬಹಳ ದೊಡ್ಡ ಅನ್ಯಾಯ.

ರೈತರ ಬಗ್ಗೆ ಬಿಜೆಪಿ ಭಾಷಣ ಮಾತ್ರ ಚೆನ್ನಾಗಿ ಮಾಡುತ್ತದೆ. ಬರೀ ಭಾಷಣದಿಂದ ರೈತರ ಬದುಕನ್ನು ಉದ್ಧಾರ ಮಾಡಲು ಸಾಧ್ಯವಿಲ್ಲ. ಆದ್ದರಿಂದ ನಬಾರ್ಡ್ ನಿಂದ ನಮಗೆ ಆದ ಅನ್ಯಾಯವನ್ನು  ಪ್ರತಿಯೊಬ್ಬರು ಪ್ರತಿಭಟಿಸಬೇಕು.

2013 ರಲ್ಲಿ ₹8,165 ಕೋಟಿ ರೈತರ ಸಾಲವನ್ನು ನಾನು ಮೊದಲು ಬಾರಿ ಮುಖ್ಯಮಂತ್ರಿಯಾಗಿ ಮನ್ನಾ ಮಾಡಿದ್ದೆ. ಇದರಿಂದ ಸಹಸ್ರಾರು ರೈತರ ಬದುಕಿಗೆ ನೆರವಾಯಿತು.



ಸಹಕಾರ ಮಹಾಮಂಡಳದ ಕಟ್ಟಡಗಳ ನಿರ್ಮಾಣಕ್ಕೆ ಸರ್ಕಾರದ ನೆರವು ನೀಡಬೇಕು ಎನ್ನುವ ಬೇಡಿಕೆ ಇದೆ. ಈ ಬೇಡಿಕೆಯನ್ನೂ ಈಡೇರಿಸಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ