Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಭಾಪತಿ ಹುದ್ದೆಗೆ ರಾಜೀನಾಮೆ ನೀಡಿದ ಹೊರಟ್ಟಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿರಿಯ ರಾಜಕಾರಣಿ ಬಸವರಾಜ್‌ಹೊರಟ್ಟಿ ಅವರು ತಮ್ಮ
ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪತ್ರ ಹರಿದಾಡುತ್ತದ್ದು ವೈರಲ್ ಆಗಿದೆ.

ಹೊರಟ್ಟಿ ಅವರ ರಾಜೀನಾಮೆ ಪತ್ರ ಸಾಮಾಜಿ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವ ರಾಜೀನಾಮೆ ಪತ್ರದಲ್ಲಿ ಮಾರ್ಚ್ 18 ಎನ್ನುವ ದಿನಾಂಕ ನಮೂದಾಗಿದೆ. ಹಾಗೇ ಪತ್ರದಲ್ಲಿ ಹೊರಟ್ಟಿ ಅವರ ಸಹಿ ಸಹ ಇಲ್ಲ ಎನ್ನುವುದು ಮುಖ್ಯ.
ಹೀಗಾಗಿ ರಾಜೀನಾಮೆ ಪತ್ರ ಹಲವು ಗೊಂದಲಗಳಿಗೆ ಕಾರಣವಾಗಿದ್ದು ರಾಜಕೀಯದಲ್ಲಿ ಯಾವ ರೀತಿಯ ತಿರುವು ಪಡೆಯಲಿದೆ ಎನ್ನುವುದು ಕಾದುನೋಡಬೇಕಿದೆ.
ಪತ್ರದಲ್ಲಿ ಏನಿದೆ
?

ಬಸವರಾಜ್ ಹೊರಟ್ಟಿ ಅವರು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆಂದು ಮಾರ್ಚ್ 23 ರಂದು ಬೆಳಗ್ಗೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಅವರು ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ್​ ಅವರಿಗೆ  ರವಾನಿಸಿರುವ ಸಾಧ್ಯತೆ ಇದ್ದು ಆ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ವೈರಲ್ ಆಗಿದೆ.

ಹೊರಟ್ಟಿ ಅವರು ಮಾರ್ಚ್​ 18ರಂದೇ ರಾಜೀನಾಮೆ ಪತ್ರವನ್ನು ಪ್ರಾಣೇಶ್ ಅವರಿಗೆ ಕಳುಹಿಸಿದ್ದು, ದಿನಾಂಕ 1-4-25ರಂದು ನನ್ನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ವೈಯಕ್ತಿ ಕಾರಣಗಳಿಂದ ರಾಜೀನಾಮೆ ನೀಡುತ್ತಿದ್ದು, ಸದರಿ ರಾಜೀನಾಮೆಯನ್ನು 31-3-25ರೊಳಗೆ ಸ್ವೀಕರಿಸಿ ದಿನಾಂಕ 1-4-2025ರಿಂದ ಅನ್ವಯವಾಗುವಂತೆ ಕ್ರಮಕೈಗೊಂಡು ಹಾಗೂ ನನನ್ನು ಈ ಹುದ್ದೆಯಿಂದ ಮುಕ್ತಿಗೊಳಿಸಲು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ರಾಜೀನಾಮೆ
ಪತ್ರದಲ್ಲಿ ಹೊರಟ್ಟಿ ಅವರ ಸಹಿ ಇಲ್ಲದಿರುವುದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.

ಇವತ್ತಿನ ರಾಜಕಾರಣಿಗಳನ್ನು ಸದನದಲ್ಲಿ ಸಂಭಾಳಿಸಲು ಸಾಧ್ಯವಿಲ್ಲ ಹಾಗೂ ನಾನು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ. ಇಂದಿನ ದಿನಗಳಲ್ಲಿ ಸದನಗಳನ್ನು ನಿರ್ವಹಿಸುವುದು ಕಷ್ಟ ಎಂಬುದು ಅರ್ಥವಾಗಿದೆ ಎಂದು ಹೊರಟ್ಟಿ ಅವರು ಹುಬ್ಬಳ್ಳಿಯಲ್ಲಿ ಭಾನುವಾರ ಮಾಧ್ಯಮಗಳ ಮುಂದೆ ಬೇಸರ ವ್ಯಕ್ತಪಡಿಸಿದ್ದರು.

ಸದನದಲ್ಲಿ ನಡೆಯುತ್ತಿರುವ ಘಟನೆಗಳಿಂದ ನನಗೆ ಬೇಜಾರಾಗಿದೆ. ಸಭಾಪತಿಗೆ ಹೇಳೋದಿಲ್ಲ ಕೇಳೋದಿಲ್ಲ. ಸದನದೊಳಗೆ ಪ್ರತಿಭಟನೆ ನಡೆಸುತ್ತಾರೆ. ಪರಿಷತ್​ಗೆ ಪ್ಲೇ ಕಾರ್ಡ್‌ಗಳನ್ನು ತೆಗೆದುಕೊಂಡು ಬರುತ್ತಾರೆ. ಸದನ ನಡೆಸುವುದಕ್ಕೆ ನನಗೆ ಯೋಗ್ಯತೆ ಇಲ್ಲ. ಮೊನ್ನೆ ನಾನು 17 ನಿಮಿಷ ಸುಮ್ಮನೆ ಕುತ್ತಿದ್ದೆ. ಇದರಿಂದ ನಾನು ಸದನದಲ್ಲಿ ಇರಬಾರದು ಎಂದು ತೀರ್ಮಾನ ಮಾಡಿದ್ದೇನೆ. 45 ವರ್ಷಗಳಿಂದ ರಾಜಕೀಯದಲ್ಲಿ ಇದ್ದೇನೆ. ಸದನದಲ್ಲಿ ಯಾರೂ ಗೌರವ ಕೊಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿ ಬೇಸರ ಹೊರಹಾಕಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ