Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಷ್ಕರಣೆಗೊಂಡ ರೈಲ್ವೆ ವೇಳಾಪಟ್ಟಿ, ಇಂದಿನಿಂದ ಜಾರಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರೈಲ್ವೆ ವೇಳಾಪಟ್ಟಿ ಪರಿಷ್ಕರಣೆ ಮಾಡಲಾಗಿದ್ದು ಹೊಸ ರೈಲ್ವೆ  ವೇಳಾಪಟ್ಟಿ
01.01.2025 ರಿಂದ ಜಾರಿಗೆ ಬಂದಿದ್ದೂ, ಭಾರತೀಯ ರೈಲ್ವೆಯಾದ್ಯಂತ ಮೈಸೂರು ಮತ್ತು ಇತರ ನಿಲ್ದಾಣಗಳಿಂದ ಹೊರಡುವ/ಆಗಮಿಸುವ ಹಲವಾರು ರೈಲುಗಳ ಆಗಮನ ಮತ್ತು ನಿರ್ಗಮನ ಸಮಯವನ್ನು ಪರಿಷ್ಕರಿಸಲಾಗಿದೆ. ಎಲ್ಲಾ ಪ್ರಯಾಣಿಕರು ರೈಲು ಪ್ರಯಾಣವನ್ನು ಪ್ರಾರಂಭಿಸುವ ಮೊದಲು ಈ ಕೆಳಗೆ ನೀಡಿರುವ ವೆಬ್ ಸೈಟ್ ಲಿಂಕ್‌ನ ಸಹಾಯದಿಂದ ಹೊಸ ರೈಲು ವೇಳಾಪಟ್ಟಿಯನ್ನು ಪರಿಶೀಲಿಸಲು ವಿನಂತಿಸಲಾಗಿದೆ.

01.01.2025 ರಿಂದ ಮೈಸೂರು ಮತ್ತು ಇತರ ನಿಲ್ದಾಣಗಳಿಗೆ ನಿರ್ಗಮಿಸುವ ಮತ್ತು ಆಗಮಿಸುವ ರೈಲುಗಳಲ್ಲಿ ಪರಿಷ್ಕೃತ ಸಮಯವನ್ನು ಹೊಂದಿರುವ ರೈಲುಗಳ ಪಟ್ಟಿಯನ್ನು ಪ್ರಯಾಣಿಸುವ ಯಾತ್ರಿಕರ ಮಾಹಿತಿಗಾಗಿ ಈ ಕೆಳಗೆ ಪಟ್ಟಿ ಮಾಡಲಾಗಿದೆ.

  1. ಮೈಸೂರಿನಿಂದ ಸಾಯಿನಗರ ಶಿರಡಿಗೆ ಹೊರಡುವ ರೈಲು ಸಂಖ್ಯೆ 16217 ದಿನಾಂಕ 06.01.2025 ರಿಂದ ಬೆಳಿಗ್ಗೆ 05:00 ಗಂಟೆಗೆ ಮೈಸೂರಿನಿಂದ ಹೊರಡಲಿದೆ.


  2. 2. ಟುಟಿಕೋರಿನ್‌(ತೂತುಕುಡಿ)ನಿಂದ ಮೈಸೂರಿಗೆ ಹೊರಡುವ ರೈಲು ನಂ.16235 ಪಾಂಡವಪುರ ನಿಲ್ದಾಣಕ್ಕೆ 08:39 ಗಂಟೆಗೆ ತಲುಪುತ್ತದೆ ಮತ್ತು 08:40 ಗಂಟೆಗೆ ಹೊರಟು ಅಂತಿಮವಾಗಿ 09:30 ಗಂಟೆಗೆ ಮೈಸೂರು ತಲುಪುತ್ತದೆ.


  3. ನಂಜನಗೂಡಿನಿಂದ ಮೈಸೂರಿಗೆ ಹೊರಡುವ ರೈಲು ನಂ.06299 ನಂಜನಗೂಡಿನಿಂದ 10:25 ಗಂಟೆಗೆ ಹೊರಟು 11:15 ಗಂಟೆಗೆ ಮೈಸೂರು ತಲುಪಲಿದೆ. ಮಾರ್ಗದಲ್ಲಿ ರೈಲು ಸುಜಾತಪುರಂ ಹಾಲ್ಟ್ ನಲ್ಲಿ 10:25 - 10:29, ತಾಂಡವಪುರ ಹಾಲ್ಟ್ 10:32 - 10:33, ಕಡಕೋಳ 10:38 - 10-:39, ಅಶೋಕಪುರಂ 10:48 - 10:49, ಚಾಮರಾಜಪುರಂ ನಿಲ್ದಾಣದಲ್ಲಿ 10:54 - 10:55 ಆಗಮಿಸುತ್ತದೆ – ನಿರ್ಗಮಿಸುತ್ತದೆ.


  4. ಮೈಸೂರಿನಿಂದ ನಂಜನಗೂಡಿಗೆ ಹೊರಡುವ ಪ್ಯಾಸೆಂಜರ್ ರೈಲು ನಂ.06300 ನಂಜನಗೂಡಿಗೆ 10:00 ಗಂಟೆಗೆ ತಲುಪಲಿದೆ.
    5. ಮೈಸೂರಿನಿಂದ ಚಾಮರಾಜನಗರಕ್ಕೆ ಹೋಗುವ ಪ್ಯಾಸೆಂಜರ್ ರೈಲು ನಂ.60276 ಮೈಸೂರಿನಿಂದ 11:45 ಗಂಟೆಗೆ ನಿರ್ಗಮಿಸುತ್ತದೆ ಮತ್ತು ಚಾಮರಾಜನಗರಕ್ಕೆ 13:30 ಗಂಟೆಗೆ ತಲುಪುತ್ತದೆ. ಮಾರ್ಗದಲ್ಲಿ ರೈಲು ಚಾಮರಾಜಪುರಂನಲ್ಲಿ 11:50-11:51, ಅಶೋಕಪುರಂ 11:56-11:55, ಕಡಕೋಳ 12:08-12:09, ತಾಂಡವಪುರ ಹಾಲ್ಟ್ 12:14-12:15,

  5. ಸುಜಾತಪುರಂ ಹಾಲ್ಟ್ 12:18-12:19, ನಂಜನಗೂಡು ಟೌನ್ 12:23-12:25, ಚಿನ್ನದಗುಡಿ ಹುಂಡಿ ಹಾಲ್ಟ್ 12:35-12:36, ನರಸಾಂಬುಧಿ ಹಾಲ್ಟ್ 12:38-12:39, ಕವಲಂದೆ ಹಾಲ್ಟ್ 12:44-12:45, ಕೊಣ್ಣನೂರು ಹಾಲ್ಟ್ 12:50-12:51, ಬದನಗುಪ್ಪೆ ಹಾಲ್ಟ್ 12:56-12:57, ಮರಿಯಾಲ ಹಾಲ್ಟ್ 13:03-13:04 ಗಂಟೆಗೆ ಆಗಮಿಸುತ್ತದೆ – ನಿರ್ಗಮಿಸುತ್ತದೆ.


  6. 6. ಚಾಮರಾಜನಗರದಿಂದ ಮೈಸೂರಿಗೆ ಹೊಗುವ ಪ್ಯಾಸೆಂಜರ್ ರೈಲು ನಂ.06234 ಅಶೋಕಪುರಂಗೆ 11:53 ಕ್ಕೆ ತಲುಪುತ್ತದೆ ಮತ್ತು 11:55 ಕ್ಕೆ ನಿರ್ಗಮಿಸುತ್ತದೆ ಹಾಗು ಚಾಮರಾಜಪುರಂಗೆ 12:01 ಕ್ಕೆ ಆಗಮಿಸಿ 12:02 ಕ್ಕೆ ನಿರ್ಗಮಿಸುತ್ತದೆ.
    7. ಚಾಮರಾಜನಗರದಿಂದ ತುಮಕೂರು ಪ್ಯಾಸೆಂಜರ್ ರೈಲು ನಂ.07345 ಚಿನ್ನದಗುಡಿ ಹುಂಡಿಯಲ್ಲಿ 07:51- 07:52, ನಂಜನಗೂಡು ಟೌನ್ 08:02-08:04, ಸುಜಾತಪುರಂ ಹಾಲ್ಟ್ 08:08 - 08:09, ತಾಂಡವಪುರ ಹಾಲ್ಟ್ 08:13 - 08:14, ಕಡಕೋಳ 08:19-08:20, ಅಶೋಕಪುರಂ 08:33-08:34 ಮತ್ತು ಚಾಮರಾಜಪುರಂ 08:39-08:40.


  7. ಪ್ರಯಾಣಿಸುವ ಯಾತ್ರಿಕರ ಅನುಕೂಲಕ್ಕಾಗಿ ಪ್ರಕಟಣೆ ಹೊರಡಿಸಲಾಗಿದೆ ಎಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಮತ್ತು ಸಾರ್ವಜನಿಕ ಸಂಪರ್ಕಾಧಿಕಾರಿ ಗಿರೀಶ ಧರ್ಮರಾಜ ಕಲಗೊಂಡ
    ತಿಳಿಸಿದ್ದಾರೆ.


 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ