Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾಲರ್ ಎದುರು ರೂಪಾಯಿ ತೀವ್ರ ಕುಸಿತ

Advertisement
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಅಮೆರಿಕನ್ ಡಾಲರ್ ಎದುರು ಭಾರತದ ಕರೆನ್ಸಿಯಾದ ರೂಪಾಯಿಯ ದುರ್ಬಲ ಸಾಧನೆ ಮುಂದುವರಿದಿದೆ.
ಒಂದು ಡಾಲರ್​ಗೆ ರೂಪಾಯಿ ಮೌಲ್ಯ 94 ರೂ ಮಟ್ಟಕ್ಕಿಂತ ಕೆಳಗೆ ಕುಸಿದಿದೆ. ಈ ಮಟ್ಟಕ್ಕೆ ರೂಪಾಯಿ ಇಳಿದ್ದು ಇತಿಹಾಸದಲ್ಲಿ ಇದೇ ಪ್ರಥಮ. ಮಾ.23 ರಂದು ಸೋಮವಾರ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ 93.83ರಲ್ಲಿ ಆರಂಭಗೊಂಡಿತು. ನಂತರದ ವಹಿವಾಟಿನಲ್ಲಿ ಅದು 94ರ ಮಟ್ಟ ದಾಟಿ ಹೋಯಿತು.


ರೂಪಾಯಿ ಮೌಲ್ಯ ಕುಸಿತಕ್ಕೆ ಏನು ಕಾರಣ?-
ಕಚ್ಛಾ ತೈಲ ಬೆಲೆಗಳು ಸತತವಾಗಿ ಹೆಚ್ಚಿನ ಮಟ್ಟದಲ್ಲಿ ಇರುವುದು ಭಾರತದ ಆಮದು ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಿದೆ. ಆಮದು ಹೆಚ್ಚಾದಾಗ ಡಾಲರ್​ಗೆ ಬೇಡಿಕೆ ಹೆಚ್ಚುತ್ತದೆ. ಪರಿಣಾಮವಾಗಿ ಡಾಲರ್ ಎದುರು ರೂಪಾಯಿ ಮೌಲ್ಯ ಸಹಜವಾಗಿ ಕುಂದಿದೆ.
ರೂಪಾಯಿ ಮೌಲ್ಯ ಕುಸಿತಕ್ಕೆ ಅಮೆರಿಕನ್ ಡಾಲರ್ ಪ್ರಬಲಗೊಂಡಿರುವುದಷ್ಟೇ ಅಲ್ಲ
, ಕೆಲ ಕಾರಣಗಳಿವೆ.

ಭಾರತೀಯ ಮಾರುಕಟ್ಟೆಗಳಿಂದ ವಿದೇಶಿ ಹಣದ ಹೊರಹರಿವು ಸತತವಾಗಿ ನಡೆಯುತ್ತಿದೆ. ಹಾಗೆಯೇ, ಬಾಂಡ್ ಯೀಲ್ಡ್​ಗಳೂ ಕೂಡ ಹೆಚ್ಚಿನ ಮಟ್ಟದಲ್ಲಿವೆ. ಈ ಅಂಶಗಳು ರೂಪಾಯಿ ಮೇಲೆ ಒತ್ತಡ ಹಾಕಿವೆ ಎಂಬುದು ಆರ್ಥಿಕ ಮತ್ತು ಮಾರುಕಟ್ಟೆ ತಜ್ಞರ ಅಭಿಪ್ರಾಯವಾಗಿದೆ.

ವಿದೇಶಿ ಪೋರ್ಟ್​ಫೋಲಿಯೋ ಹೂಡಿಕೆದಾರರು ಅಥವಾ ಎಫ್​ಪಿಐಗಳು ಭಾರತದ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲಾಗಿದ್ದ ಷೇರುಗಳು, ಬಾಂಡ್​ಗಳು ಇತ್ಯಾದಿಯನ್ನು ಮಾರುತ್ತಿರುವುದು ಹೆಚ್ಚಾಗಿದೆ. ಹೀಗೆ ಮಾರುವಾಗ ರೂಪಾಯಿಯನ್ನು ಡಾಲರ್​ಗಳಾಗಿ ಪರಿವರ್ತಿಸುತ್ತಾರೆ. ಹೀಗಾಗಿ, ಅಮೆರಿಕನ್ ಡಾಲರ್​ಗೆ ಬೇಡಿಕೆ ಹೆಚ್ಚಿ, ರೂಪಾಯಿ ಮೌಲ್ಯ ಕುಸಿಯಲು ಕಾರಣವಾಗುತ್ತದೆ. ಜಾಗತಿಕವಾಗಿ ಅನಿಶ್ಚಿತ ಪರಿಸ್ಥಿತಿ ಇದ್ದಾಗ ಹೂಡಿಕೆದಾರರು ಎಚ್ಚರಿಕೆ ವಹಿಸುತ್ತಾರೆ. ಇಂಥ ಸಂದರ್ಭಗಳಲ್ಲಿ ರೂಪಾಯಿಯಂತಹ ಕರೆನ್ಸಿಗಳ ಬದಲು ಡಾಲರ್ ಅನ್ನು ಇಟ್ಟುಕೊಳ್ಳುವುದುಂಟು. ಇದು ಡಾಲರ್​ಗಿರುವ ಬೇಡಿಕೆಯನ್ನು ಇನ್ನಷ್ಟು ಹೆಚ್ಚಿಸುತ್ತದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ