Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಏಕೀಕರಣದ ರೂವಾರಿ ನಿಜಲಿಂಗಪ್ಪ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಮಹನೀಯರ ವಿಚಾರಗಳನ್ನು ಸಮಾಜಕ್ಕೆ ತಿಳಿಸದಿದ್ದರೆ ಅದುವೆ ಸಾಂಸ್ಕೃತಿಕ ದರಿದ್ರವೆಂದು ಎಸ್.ಜೆ.ಎಂ. ಬೃಹನ್ಮಠ ಹಾಗೂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಬಸವಕುಮಾರ ಸ್ವಾಮೀಜಿ ಹೇಳಿದರು.


ಸೀಬಾರದಲ್ಲಿರುವ ಎಸ್.ಎನ್.ರವರ ಸ್ಮಾರಕದ ಸಮೀಪ ಮಂಗಳವಾರ ಎಸ್.ನಿಜಲಿಂಗಪ್ಪನವರ ೧೨೩ ನೇ ಜನ್ಮದಿನದ ಸಾನಿಧ್ಯ ವಹಿಸಿ ಮಾತನಾಡಿದರು.

ಕರ್ನಾಟಕ ಏಕೀಕರಣದ ರೂವಾರಿಯಾಗಿದ್ದ ಎಸ್.ನಿಜಲಿಂಗಪ್ಪನವರು ಮುರುಘಾಮಠದ ಪಾರಂಪರಿಕ ಭಕ್ತರಾಗಿದ್ದರು. ಜಯದೇವ ಜಗದ್ಗುರುಗಳ ಜೊತೆ ಅವಿನಾಭಾವ ಸಂಬಂಧವಿತ್ತು. ಅಪರೂಪದ ರಾಜಕಾರಣಿ. ಕನ್ನಡ ನಾಡು, ನುಡಿಗೆ ಅಪಾರ ಕೊಡುಗೆ ನೀಡಿದ್ದಾರೆಂದು ಸ್ಮರಿಸಿದರು.

ನೇರ, ನಿಷ್ಟುರವಾದಿ, ನಿಷ್ಕಳಂಕ ರಾಜಕಾರಣಿಯಾಗಿದ್ದ ಎಸ್.ನಿಜಲಿಂಗಪ್ಪನವರ ಆಚಾರ-ವಿಚಾರಗಳನ್ನು ಪಠ್ಯದಲ್ಲಿ ಸೇರಿಸಿ ಇಂದಿನ ಪೀಳಿಗೆಗೆ ಪರಿಚಯಿಸಬೇಕು. ಈಗಿನ ರಾಜಕಾರಣಿಗಳಿಗೆ ಎಸ್.ಎನ್.ರವರು ಮಾದರಿಯಾಗಿದ್ದಾರೆಂದರು.

ಎಸ್.ಎನ್.ಮೆಮೋರಿಯಲ್ ಟ್ರಸ್ಟ್‌ನ ಗೌರವ ಕಾರ್ಯದರ್ಶಿ, ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ಮಾತನಾಡಿ ಎಸ್.ಎನ್.ರವರ ವ್ಯಕ್ತಿತ್ವ ದೊಡ್ಡದು. ಪಾರದರ್ಶಕ ರಾಜಕಾರಣಿ, ಭ್ರಷ್ಟಾಚಾರದಿಂದ ದೂರವಿದ್ದರು. ವಕೀಲ ವೃತ್ತಿಯಿಂದ ಗಳಿಸಿದ ಸಂಪಾದನೆಯಲ್ಲಿ ಕಟ್ಟಿಸಿಕೊಂಡ ನಿವಾಸದಲ್ಲಿಯೇ ಕೊನೆಯವರೆಗೂ ಜೀವಿಸಿದರು. ಸರ್ಕಾರದ ಬಂಗಲೆ ಪಡೆದುಕೊಳ್ಳಲಿಲ್ಲ. ಚಿಕ್ಕಂದಿನಲ್ಲಿ ಸಾಕಷ್ಟು ಬಡತನ ಅನುಭವಿಸಿದವರು. ಅವರೊಬ್ಬ ಅಪರೂಪದ ರಾಜಕಾರಣಿಯಾಗಿದ್ದರೆಂದು ಗುಣಗಾನ ಮಾಡಿದರು.

ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯಸ್ವಾಮೀಜಿ, ಛಲವಾದಿ ಗುರುಪೀಠದ ಬಸವನಾಗಿದೇವಸ್ವಾಮಿ ಸಾನಿಧ್ಯ ವಹಿಸಿದ್ದರು. ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ವೀರೇಶ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ಪಾಪಯ್ಯ ವೇದಿಕೆಯಲ್ಲಿದ್ದರು.

ಎಸ್.ಎನ್.ಮೆಮೋರಿಯಲ್ ಟ್ರಸ್ಟ್‌ನ ಟ್ರಸ್ಟಿ ಎಸ್.ಷಣ್ಮುಖಪ್ಪ, ಶಾರದ ಬ್ರಾಸ್‌ಬ್ಯಾಂಡ್‌ನ ಗುರುಮೂರ್ತಿ, ರೊ.ಎಸ್.ವೀರೇಶ್, ಬಸವೇಶ್ವರ ವಿದ್ಯಾಸಂಸ್ಥೆಯ ಕೆ.ವಿ.ಶಂಕರಪ್ಪ

ಎಂ.ವಿ.ಎಂ.ಸ್ವಾಮಿ, ರುದ್ರೇಶ್, ಲೋಕನಾಥ್, ರುದ್ರಮೂರ್ತಿ, ಮಂಜುನಾಥ್, ರೊ.ವೀರಭದ್ರಸ್ವಾಮಿ, ಇಟಗಿ ಜಯದೇವಮೂರ್ತಿ, ಮುರುಗೇಶ್ ಡಿ.ವಿ. ಅನಿತ ಮುರುಗೇಶ್ ಇನ್ನು ಅನೇಕರು ಎಸ್.ಎನ್.ಜನ್ಮದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ