ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಇಲ್ಲಿನ ಪ್ರವಾಸಿ ಮಂದಿರದಲ್ಲಿ ವಂದೇಮಾತರಂ ಜನ ಜಾಗೃತಿ ವೇದಿಕೆ ವತಿಯಿಂದ ಕರ್ನಾಟಕ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾದ ಡಿ. ಸುಧಾಕರ್ ಅವರಿಗೆ ನುಡಿ ನಮನ ಹಾಗೂ ಪುಣ್ಯ ಸಮರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಸಚಿವ ಡಿ. ಸುಧಾಕರ್ ಅವರು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ನೀಡಿರುವ ಅಭೂತಪೂರ್ವ ಕೊಡುಗೆಗಳು, ಅವರ ಸಮಾಜಮುಖಿ ಸೇವೆ ಹಾಗೂ ಜನಪರ ಕಾರ್ಯಗಳನ್ನು ನೆರೆದಿದ್ದ ಗಣ್ಯರು ಮುಕ್ತಕಂಠದಿಂದ ಸ್ಮರಿಸಿ, ನುಡಿ ನಮನ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಸಚಿವರಿಗೆ ಗೌರವ ಸಮರ್ಪಣೆಯನ್ನು ಸಹ ನೆರವೇರಿಸಲಾಯಿತು.
ಸೌಹಾರ್ದಯುತವಾಗಿ ಜರುಗಿದ ಈ ಸಭೆಯಲ್ಲಿ ಜಿಲ್ಲೆಯ ಹಾಗೂ ತಾಲ್ಲೂಕಿನ ಪ್ರಮುಖ ಜನಪ್ರತಿನಿಧಿಗಳು ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಂದ್ರಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಪ್ಪ, ವಂದೇ ಮಾತರಂ ರಾಜ್ಯ ಯುವ ಘಟಕದ ಅಧ್ಯಕ್ಷ ಪಿ. ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ವಿ. ಅರುಣ್ ಕುಮಾರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷ ಎಂ.ಎಲ್. ಗಿರಿಧರ್,
ಹಿರಿಯೂರು ರೈತ ಘಟಕದ ಅಧ್ಯಕ್ಷ ದೇವರಾಜ ನಾಗಣ್ಣ ಸೇರಿದಂತೆ ಸಂಘಟನೆಯ ನಿರ್ದೇಶಕರುಗಳಾದ ಮಸ್ಕಲ್ ನಾಗರಾಜ್, ಬಾಬು ಹಿರಿಯೂರು, ಗೋವಿಂದರಾಜು, ರಂಗೇನಹಳ್ಳಿ ಪರಮೇಶ್, ಮಸ್ಕಲ್ ಕೆ.ಎಂ. ತಿಪ್ಪರುದ್ರಸ್ವಾಮಿ, ಫಿಶ್ ಕೃಷ್ಣಪ್ಪ ಸೇರಿದಂತೆ ಮತ್ತಿತರ ಹಲವು ಮುಖಂಡರು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.



