ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹಿರಿಯೂರು ನಗರಸಭೆ, ತಾಲ್ಲೂಕಿನ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆಯ ಜಂಟಿ ಸಹಯೋಗದೊಂದಿಗೆ ನಗರದ ವಿವಿಧ ಪಾರ್ಕ್ಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಗಿಡ ನೆಟ್ಟು ಚಾಲನೆ ನೀಡಿದ ನ್ಯಾಯಾಧೀಶರು:
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು, ಜೆ.ಎಂ.ಎಫ್.ಸಿ ಹಾಗೂ ಅಧ್ಯಕ್ಷರಾದ ಶ್ರೀಮತಿ ಸುಜಾತ ಸುವರ್ಣ ಬಿ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಪಾರ್ವತಮ್ಮ, ಮತ್ತು ಗೌರವಾನ್ವಿತ ಅಪರ ಸಿವಿಲ್ ನ್ಯಾಯಾಧೀಶರಾದ ರಘು ಎಂ ರವರುಗಳು ಸಸಿ ನೆಡುವುದರ ಮೂಲಕ ಚಾಲನೆ ನೀಡಿದರು.
ತ್ಯಾಜ್ಯ ಮುಕ್ತ ನಗರಕ್ಕೆ ಕರೆ: 4 ಬಿನ್ಗಳ ಸೂತ್ರ ವಿವಿರಣೆ:
ಇದೇ ಸಂದರ್ಭದಲ್ಲಿ ಘನ ತ್ಯಾಜ್ಯವಸ್ತು ನಿರ್ವಹಣೆ ನಿಯಮ 2026ರ ಅನ್ವಯ ಸಾರ್ವಜನಿಕರಿಗೆ ತ್ಯಾಜ್ಯವನ್ನು ಮೂಲದಲ್ಲಿಯೇ ವಿಂಗಡಿಸುವ ಮಹತ್ವದ ಕುರಿತು ನಗರಸಭೆ ಪೌರಾಯುಕ್ತ ಎ.ವಾಸೀಂ ಅವರು ಅರಿವು ಮೂಡಿಸಿದರು. ಕಸವನ್ನು ಎಲ್ಲೆಂದರಲ್ಲಿ ಬಿಸಾಡದೆ, ಪ್ರತ್ಯೇಕ 4 ಬಿನ್ಗಳಲ್ಲಿ ಸಂಗ್ರಹಿಸಿ ವಿಲೇವಾರಿ ಮಾಡುವ ವಿಧಾನವನ್ನು ಅಧಿಕಾರಿಗಳು ಮತ್ತು ಗಣ್ಯರು ಸಾರ್ವಜನಿಕರಿಗೆ ವಾಸೀಂ ಅವವರು ವಿವರಿಸಿದರು.
ಹಸಿ ತ್ಯಾಜ್ಯ, ಒಣ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ, ವಿಶೇಷ ಆರೈಕೆ ತ್ಯಾಜ್ಯ:
"ಘನ ತ್ಯಾಜ್ಯದ ಸಮರ್ಪಕ ನಿರ್ವಹಣೆಯಿಂದ ಮಾತ್ರ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛ, ಸುಂದರ ಮತ್ತು ಆರೋಗ್ಯಕರವಾಗಿ ನಿರ್ಮಿಸಲು ಸಾಧ್ಯ" ಎಂದು ಪೌರಾಯುಕ್ತ ಎ.ವಾಸೀಂ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.
ವಕೀಲರ ಸಂಘದ ಅಧ್ಯಕ್ಷ ಎಂ.ಆರ್. ರಂಗಸ್ವಾಮಿ ಹಾಗೂ ವಲಯ ಅರಣ್ಯಾಧಿಕಾರಿ ಬಾಬು ಎಸ್ ಮತ್ತು ಅರಣ್ಯ ಇಲಾಖೆಯ ಮುಖ್ಯಸ್ಥರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಹಿರಿಯೂರು ನಗರಸಭೆಯ ಆರೋಗ್ಯ ನಿರೀಕ್ಷಕರುಗಳಾದ ಸಂಧ್ಯಾ ವೈ.ಎಸ್, ಸುನೀಲ್ ಕುಮಾರ್, ನಯಾಜ್ ಷರೀಪ್, ಅಶೋಕ್ ಕುಮಾರ್, ಮಹಾಲಿಂಗರಾಜ್ ಹಾಗೂ ನಗರಸಭೆಯ ಇತರೆ ಸಿಬ್ಬಂದಿಗಳು, ತಾಲ್ಲೂಕಿನ ಕಾನೂನು ಸೇವಾ ಸಮಿತಿಯ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.



