Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ,  ಆರ್ ಎಸ್ಎಸ್ ಕೈಗೆ ಅಧಿಕಾರ ಕೊಡಬೇಡಿ- ಸಾತಿ ಸುಂದರೇಶ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಧರ್ಮ ಜಾತಿ ಆಧಾರದ ಮೇಲೆ ದೇಶವನ್ನು ವಿಭಜಿಸುತ್ತಿರುವ ಬಿಜೆಪಿ,  ಆರ್.ಎಸ್.ಎಸ್ ಕೈಗೆ ಅಧಿಕಾರ ಕೊಡಬಾರದು. ಅದಕ್ಕಾಗಿ ೨೪ ದಿನಗಳ ಕಾಲ ರಾಜ್ಯದ ಮೂಲೆ ಮೂಲೆಗೆ ನಮ್ಮ ಜಾಥಾ ಸಂಚರಿಸಲಿದೆ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಹೇಳಿದರು.

ಭಾರತ ಕಮ್ಯುನಿಸ್ಟ್ ಪಕ್ಷದ ಶತಮಾನೋತ್ಸವ ಸಂಭ್ರಮದ ಅಂಗವಾಗಿ ಹೊರಟಿರುವ ಜಾಥಾ ಮಂಗಳವಾರ ಚಿತ್ರದುರ್ಗಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು ನೂರು ವರ್ಷಗಳ ಹಿಂದೆ ಸಿಪಿಐ. ಉದಯವಾದಾಗ ದೇಶ ಸಂಕಷ್ಟದಲ್ಲಿತ್ತು. ಆಗ ನಮ್ಮ ನಾಯಕರುಗಳು ಬ್ರಿಟೀಷರ ವಿರುದ್ದ ಹೋರಾಡಿ ಅನೇಕರು ಜೈಲು ಸೇರಿ ಪ್ರಾಣ ತ್ಯಾಗ ಮಾಡಿದ ಇತಿಹಾಸವಿದೆ. ಈಗ ಮತ್ತೆ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಬೇಕಿದೆ. ದೇಶದ ಸಂಪತ್ತನ್ನು ಉದ್ಯಮಿ, ಬಂಡವಾಳಶಾಹಿಗಳ ಕೈಗೆ ಕೊಡಲು ಹೊರಟಿರುವ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವುದು ನಮ್ಮ ಜಾಥಾ ಉದ್ದೇಶ ಎಂದರು.

ಗಾಂಧಿಜಿಯನ್ನು ಕೊಂದ ಆರ್.ಎಸ್.ಎಸ್.ನವರು ಬ್ರಿಟೀಷರ ಪರವಾಗಿದ್ದರು. ನಾಡಿನ ಬಹುತ್ವ, ಹಿಂದೂ-ಮುಸಲ್ಮಾನರ ಐಕ್ಯತೆಯನ್ನು ಉಳಿಸಬೇಕಿದೆ. ರೈತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಶೋಷಣೆ ನಿಲ್ಲಬೇಕು. ಸೌಜನ್ಯಾಳನ್ನು ಕೊಂದವರಿಗೆ ಶಿಕ್ಷೆಯಾಗಬೇಕು. ಸಮಾನತೆ ನಮ್ಮ ಕನಸು. ಪ್ರತಿ ದಲಿತ ಕಾಲೋನಿಗಳು ಸ್ಲಂಗಳಾಗುತ್ತಿವೆ. ಸೂರಿಗಾಗಿ ಸಮರ ನಮ್ಮ ಹೋರಾಟ. ಮನೆಗಳನ್ನು ನೀಡುವ ಬದಲು ಬಡವರಿಗೆ ನಿವೇಶನಗಳನ್ನು ಕೊಡಿ. ಆಶ್ರಯ ಯೋಜನೆ ಜಾರಿಗೆ ತಂದವರು ಮುಖ್ಯಮಂತ್ರಿಯಾಗಿದ್ದ ಎಸ್.ಬಂಗಾರಪ್ಪನವರು. ಕೇಂದ್ರದಲ್ಲಿರುವ ಜನ ವಿರೋಧಿ ಸರ್ಕಾರ ತೊಲಗಿಸಿ ಬಡವರಿಗೆ ಸೂರು ಒದಗಿಸುವುದು ನಮ್ಮ ಆಶಯ ಎಂದು ತಿಳಿಸಿದರು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‌ಬಾಬು ಮಾತನಾಡಿ ಕಮ್ಯುನಿಸ್ಟ್, ಕಾಂಗ್ರೆಸ್, ಮುಸ್ಲಿಂ ಲೀಗ್ ಬಿಟ್ಟರೆ ಬೇರೆ ಯಾರು ಬ್ರಿಟೀಷರ ವಿರುದ್ದ ಹೋರಾಡಲಿಲ್ಲ. ಕೋಮುಗಲಭೆ, ಸಂಘರ್ಷ ಇವುಗಳೆ ಬಿಜೆಪಿ.ಯ ನೀತಿಗಳು, ೧೯೨೫ ರಲ್ಲಿ ಕಾರ್ಮಿಕರ ಪರವಾಗಿ ಕಾನೂನು ಜಾರಿಗೆ ಬರುವಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ ಬಹುದೊಡ್ಡ ಕೊಡುಗೆಯಿದೆ. ಆರ್.ಎಸ್.ಎಸ್. ಕೂಡ ನೂರು ವರ್ಷಗಳನ್ನು ಪೂರೈಸಿದೆ ಎಂದು ಸಂಭ್ರಮಾಚರಣೆಯನ್ನು ಆಚರಿಸಿತು. ಆದರೆ ದೇಶದ ಸ್ವಾತಂತ್ರ್ಯಕ್ಕಾಗಿ ಇವರ ಹೋರಾಟ ಶೂನ್ಯ ಎಂದು ಟೀಕಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್ ಮಾತನಾಡಿ ಕಾಂಗ್ರೆಸ್, ಕಮ್ಯುನಿಸ್ಟ್ ಪಕ್ಷದ ಉದ್ದೇಶ ಒಂದೆ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಅನೇಕ ಹಿರಿಯರು ತ್ಯಾಗ ಬಲಿದಾನಗಳನ್ನು ಸಮರ್ಪಿಸಿದ್ದಾರೆ. ಊಟ, ವಸತಿ, ಬಟ್ಟೆಗಾಗಿ ಹೋರಾಡಿದವರಲ್ಲಿ ಕಮ್ಯುನಿಸ್ಟ್ ಮುಂಚೂಣಿಯಲ್ಲಿದೆ. ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ಸಂವಿಧಾನಕ್ಕೆ ಧಕ್ಕೆ ಬಂದಿರುವುದರಿಂದ ಉಳಿಸಿಕೊಳ್ಳಲು ಮತ್ತೆ ಹೋರಾಟ ಮಾಡಬೇಕಿದೆ. ಎಲ್ಲರಿಗೂ ಸಮಾನ ಹಕ್ಕು ಸಿಗಬೇಕು. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ ಪಂಚ ಗ್ಯಾರೆಂಟಿಗಳನ್ನು ಜಾರಿಗೆ ತಂದಿರುವುದರಿಂದ ಬಡವರಿಗೆ ಅನುಕೂಲವಾಗಿ ಎಂದರು.

ಸಿಪಿಐ ರಾಜ್ಯ ಮಂಡಳಿ ಸಹ ಕಾರ್ಯದರ್ಶಿ ಹೆಚ್.ಎಂ.ಸಂತೋಷ್ ಮಾತನಾಡಿ ಸ್ವಾತಂತ್ರ್ಯ ಚಳುವಳಿಯಲ್ಲಿ ಬ್ರಿಟೀಷರ ವಿರುದ್ದ ಹೋರಾಡಿ ದುಡಿಯುವ ವರ್ಗದವರ ಪರವಾಗಿದ್ದ ಕಮ್ಯುನಿಸ್ಟ್ ಪಕ್ಷಕ್ಕೆ ನೂರು ವರ್ಷಗಳಾಗಿದೆಯೆಂದರೆ ಸಾಮಾನ್ಯ ಮಾತಲ್ಲ. ಶೋಷಿತ ಸಮುದಾಯವನ್ನು ಕಾಪಾಡುವುದಕ್ಕಾಗಿ ರಾಜ್ಯಾದ್ಯಂತ ಜಾಥ ಹೊರಟಿದೆ. ಸೌಹಾರ್ಧತೆ, ಸಮ ಸಮಾಜ ನಿರ್ಮಾಣವಾಗಬೇಕು. ರೈತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳು, ನಿರುದ್ಯೋಗಿಗಳ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ನಿಲ್ಲಬೇಕು. ಅದಕ್ಕಾಗಿ ಕಮ್ಯುನಿಸ್ಟ್ ಪಾರ್ಟಿ ಮೇಲೆ ದೊಡ್ಡ ಜವಾಬ್ದಾರಿಯಿದೆ ಎಂದು ತಿಳಿಸಿದರು.

ಸರ್ವೋದಯ ಕರ್ನಾಟಕ ಪಕ್ಷದ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ ಮಾತನಾಡಿ ಸಿಪಿಐ ಮೊದಲಿನಿಂದಲೂ ಜಾತ್ಯತೀತ, ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಬದ್ದವಾಗಿ ಹೋರಾಟ ಮಾಡಿಕೊಂಡು ಬಂದ ಪರಿಣಾಮವಾಗಿ ಇಂದಿಗೂ ದುಡಿಯುವ ವರ್ಗದವರ ಮನದಲ್ಲಿ ಉಳಿದುಕೊಂಡಿದೆ. ಅಂಗನವಾಡಿ, ಆಶಾ ಹಾಗೂ ಬಿಸಿಯೂಟ ಕಾರ್ಯಕರ್ತರ ಬೇಡಿಕೆಗಳಿಗೆ ಚಳುವಳಿಗಳನ್ನು ನಡೆಸಿಕೊಂಡು ಬರುತ್ತಿರುವುದರಿಂದ ನ್ಯಾಯ ಸಿಕ್ಕಿದೆ. ಕೃಷ್ಣನ್, ಪಂಪಾಪತಿ, ವಾಸನ್ ಇನ್ನು ಅನೇಕ ನಾಯಕರಗಳು ಕಮ್ಯುನಿಸ್ಟ್ ಪಕ್ಷಕ್ಕೆ ತಮ್ಮದೆ ಆದ ಗಟ್ಟಿತನ ತುಂಬಿದ್ದಾರೆಂದು ನೆನಪಿಸಿಕೊಂಡರು.

ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ.ನಿಶಾನಿ ಜಯಣ್ಣ, ಕಮ್ಯುನಿಸ್ಟ್ ಪಕ್ಷದ ಉಮಾಪತಿ, ಕುಮಾರಸ್ವಾಮಿ, ಹನುಮಂತಪ್ಪ, ಜನಾರ್ಧನ್, ವೇದಮ್ಮ, ಭಾಗ್ಯಮ್ಮ, ಅಮಿನಾಭಿ, ಪ್ರಸನ್ನಕುಮಾರ್, ಈ.ಸತ್ಯಕೀರ್ತಿ, ಜಿಲ್ಲಾ ಗ್ಯಾರೆಂಟಿ ಅನುಷ್ಟಾನಗಳ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ ಇನ್ನು ಮುಂತಾದವರು ವೇದಿಕೆಯಲ್ಲಿದ್ದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ