Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇ 29 ರಿಂದಲೇ ರಾಜ್ಯಾದ್ಯಂತ ಶಾಲೆಗಳು ಆರಂಭ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಶಿಕ್ಷಣ ಇಲಾಖೆಯು ಅತ್ಯಂತ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಮುಂಬರುವ
2026-27ನೇ ಶೈಕ್ಷಣಿಕ ಸಾಲಿನ ಅಧಿಕೃತ ಕ್ಯಾಲೆಂಡರ್ ಅನ್ನು ಸರ್ಕಾರ ಪ್ರಕಟಿಸಿದ್ದು, ಮೇ 29 ರಿಂದಲೇ ರಾಜ್ಯಾದ್ಯಂತ ಶಾಲೆಗಳು ಗಂಟೆ ಬಾರಿಸಲಿವೆ. 

ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳು ಒಟ್ಟಿಗೆ ಪುನರಾರಂಭಗೊಳ್ಳಲಿವೆ.

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಈ ಬಾರಿ 18 ದಿನಗಳ ದಸರಾ ರಜೆ!
ಹೊಸ ಶೈಕ್ಷಣಿಕ ಕ್ಯಾಲೆಂಡರ್‌ನಲ್ಲಿ ವಿದ್ಯಾರ್ಥಿಗಳಿಗೆ ಹಬ್ಬದ ಭರ್ಜರಿ ಉಡುಗೊರೆ ಸಿಕ್ಕಿದೆ. ಈ ವರ್ಷದ ದಸರಾ ಹಬ್ಬಕ್ಕೆ ಸತತ
18 ದಿನಗಳ ಸುದೀರ್ಘ ರಜೆಯನ್ನು ಘೋಷಿಸಲಾಗಿದೆ.

ಮೊದಲ ಶೈಕ್ಷಣಿಕ ಅವಧಿ: ಮೇ 29 ರಿಂದ ಅಕ್ಟೋಬರ್ 2 ರವರೆಗೆ ನಡೆಯಲಿದೆ. ದಸರಾ ರಜೆ ಆರಂಭ: ಅಕ್ಟೋಬರ್ 3 ರಿಂದಲೇ ದಸರಾ ರಜೆಗಳು ಆರಂಭವಾಗಲಿದ್ದು, ಅಕ್ಟೋಬರ್ 20 ರವರೆಗೆ (18 ದಿನಗಳು) ಮುಂದುವರಿಯಲಿವೆ.

ಅಕ್ಟೋಬರ್ 22 ರಿಂದ 2ನೇ ಅವಧಿ ಪ್ರರಾಂಭ
ದಸರಾ ರಜೆಯ ಸಡಗರ ಮುಗಿದ ತಕ್ಷಣ
, ಅಕ್ಟೋಬರ್ 22 ರಿಂದ ಎರಡನೇ ಶೈಕ್ಷಣಿಕ ಅವಧಿ ಆರಂಭವಾಗಲಿದ್ದು, ಇದು ಏಪ್ರಿಲ್ 2027 ರವರೆಗೆ ಮುಂದುವರಿಯಲಿದೆ. ಏಪ್ರಿಲ್ ಕೊನೆಯ ವಾರದಲ್ಲಿ ವಾರ್ಷಿಕ ಪರೀಕ್ಷೆಗಳೊಂದಿಗೆ ಈ ಸಾಲಿನ ಶೈಕ್ಷಣಿಕ ವರ್ಷ ಮುಕ್ತಾಯಗೊಳ್ಳಲಿದೆ.

ಶೈಕ್ಷಣಿಕ ವರ್ಷದ ಲೆಕ್ಕಾಚಾರ:
ಒಟ್ಟು ಕೆಲಸದ ದಿನಗಳು: ವರ್ಷದ
365 ದಿನಗಳ ಪೈಕಿ ಒಟ್ಟು 245 ದಿನಗಳು ಶಾಲೆಗಳು ಕಾರ್ಯನಿರ್ವಹಿಸಲಿವೆ.
ಬೋಧನಾ ದಿನಗಳು:
245 ದಿನಗಳಲ್ಲಿ 181 ದಿನಗಳನ್ನು ಸಂಪೂರ್ಣವಾಗಿ ಬೋಧನೆಗಾಗಿ ಮೀಸಲಿಡಲಾಗಿದೆ.

ಇತರ ಚಟುವಟಿಕೆಗಳು: ಉಳಿದ ದಿನಗಳನ್ನು ಪರೀಕ್ಷೆ, ಪಠ್ಯೇತರ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಬಳಸಲಾಗುತ್ತದೆ.

ಪ್ರವೇಶಾತಿ ಗಡುವು: ರಾಜ್ಯದ ಎಲ್ಲಾ ಶಾಲೆಗಳು ಮುಂಬರುವ ಜೂನ್ 30 ರ ಒಳಗಾಗಿ ತಮ್ಮ ಶಾಲೆಯ ಎಲ್ಲಾ ದಾಖಲಾತಿ ಅಥವಾ ಪ್ರವೇಶ ಪ್ರಕ್ರಿಯೆಗಳನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಡ್ರಾಪ್‌ ಔಟ್ಸ್ ತಡೆಗೆ ವಿಶೇಷ ಆಂದೋಲನ
ಇದೇ ವೇಳೆ ಶಿಕ್ಷಣ ಇಲಾಖೆಯು ಮತ್ತೊಂದು ಶ್ಲಾಘನೀಯ ಹೆಜ್ಜೆ ಇಟ್ಟಿದ್ದು
, ವಿವಿಧ ಕಾರಣಗಳಿಂದ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಯ ಮುಖ್ಯವಾಹಿನಿಗೆ ತರಲು ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದೆ.

6 ರಿಂದ 18 ವರ್ಷದೊಳಗಿನ ಮಕ್ಕಳನ್ನು ಗುರಿಯಾಗಿಸಿಕೊಂಡು ಜಿಲ್ಲಾ, ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ಈ ಆಂದೋಲನ ಜಾರಿಗೆ ಬರಲಿದೆ. ಅರ್ಧಕ್ಕೆ ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಿ, ಅವರಿಗೆ ಕೌನ್ಸಿಲಿಂಗ್ ನಡೆಸಿ ಮರು ದಾಖಲಾತಿ ಮಾಡಿಸುವ ಮೂಲಕ ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ಸಿಗುವಂತೆ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಿರುಮಗೊಂಡನಹಳ್ಳಿ ರೈಲ್ವೇ ಗೇಟ್ ಬಳಿ ಮೇಲ್ಸೇತುವೆ ನಿರ್ಮಿಸಲು ಸಾರ್ವಜನಿಕರ ಆಗ್ರಹಕನ್ನಡ ಸಿನಿಮಾ ನಿರ್ಲಕ್ಷ್ಯ ಮಾಡಿದ ವಿದ್ಯಾವಂತರು -ಡಾ.ಕೆ.ಪುಟ್ಟಸ್ವಾಮಿ ರಾಜ್ಯ ಯೋಗ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ನಿಸರ್ಗ ಯೋಗ ಕೇಂದ್ರದ ವಿದ್ಯಾರ್ಥಿಗಳಿಂದ ಅಪೂರ್ವ ಸಾಧನೆಪ್ರೊ. ಬಿ ಕೃಷ್ಣಪ್ಪ ಕರ್ನಾಟಕದ ಪ್ರಮುಖ ದಲಿತ ಚಳವಳಿಯ ಧೀಮಂತ ನಾಯಕ...ಆಯುರ್ವೇದ ಹಾಗೂ ಯೋಗದ ಬಗ್ಗೆ ಇಡೀ ಜಗತ್ತು ಶ್ಲಾಘಿಸುತ್ತಿದೆ-ಬಿ. ಎಸ್. ಯಡಿಯೂರಪ್ಪಪೋಸ್ಟರ್ ಅನಾವರಣಗೊಳಿಸಿ ಶುಭ ಹಾರೈಸಿದ ದೊಡ್ಮನೆ ಸೊಸೆ ಅಶ್ವಿನಿ ಪುನೀತ್ಹಳ್ಳಿ ಮಕ್ಕಳಿಗೂ ಸಿಗಲಿ ಎಲ್.ಕೆ.ಜಿ/ಯು.ಕೆ.ಜಿ ಭಾಗ್ಯ: ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ ಕರೆಮೋದಿ ಸರ್ಕಾರದ 12 ವರ್ಷಗಳ ಆಡಳಿತ: ದೇಶದ ಅಭಿವೃದ್ಧಿ ಶ್ಲಾಘಿಸಿದ ಆರ್. ಅಶೋಕ್ತುಮಕೂರು-ಯಶವಂತಪುರ ರೈಲ್ವೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಕೇಂದ್ರ ಸಚಿವ ವಿ. ಸೋಮಣ್ಣಕಾರ್ಮಿಕರ ಕಿಟ್ ಹಗರಣ: ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಜೆಡಿಎಸ್