Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಕಲಾಶ್ರೀ ಪ್ರಶಸ್ತಿಗೆ ಆಯ್ಕೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಪ್ರತಿಷ್ಠಿತ ಕಾರ್ಯಕ್ರಮಗಳಲ್ಲಿ ಒಂದಾದ ಕರ್ನಾಟಕ ಕಲಾಶ್ರೀಪ್ರಶಸ್ತಿಗೆ ಸಂಗೀತ ಮತ್ತು ನೃತ್ಯ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿದ ಹಿರಿಯ ಕಲಾವಿದರನ್ನು 2024-25 ನೇ ಸಾಲಿನ ಕರ್ನಾಟಕ ಕಲಾಶ್ರೀಪ್ರಶಸ್ತಿಗೆ ಅಕಾಡೆಮಿ ಅಧ್ಯಕ್ಷರಾದ ಶ್ರೀಮತಿ ಶುಭ ಧನಂಜಯ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನು ಮತದಿಂದ ಆಯ್ಕೆ ಮಾಡಲಾಗಿದೆ.


2024-25
ನೇ ಸಾಲಿನ ಕರ್ನಾಟಕ ಸಂಗೀತ ಮತ್ತು ಗಾಯನದಲ್ಲಿ ಬೆಂಗಳೂರಿನ ಶ್ರೀಮತಿ ಭಾನುಮತಿ ನರಸಿಂಹನ್ ಮತ್ತು ನೃತ್ಯದಲ್ಲಿ ಹಾಸನದ ಗುರು ಶ್ರೀಮತಿ ಗಾಯತ್ರಿ ಕೇಶವನ್ ಇವರುಗಳು ಗೌರವ ಪ್ರಶಸ್ತಿಗೆ ಭಾಜನರಾಗಿರುತ್ತಾರೆ.

ವಾರ್ಷಿಕ ಪ್ರಶಸ್ತಿ ವಿಭಾಗದಲ್ಲಿ ಕರ್ನಾಟಕ ಸಂಗೀತದಲ್ಲಿ ಕೋಲಾರದ ವಾನರಾಶಿ ಬಾಲಕೃಷ್ಣ ಭಾಗವತರ್, ಬೆಂಗಳೂರಿನ ಎಸ್.ವಿ.ಗಿರಿಧರ್ ಮೃದಂಗ, ಆನೇಕಲ್‍ನ ನಾಗಭೂಷಣಯ್ಯ- ಪಿಟೀಲು ವಿಭಾಗದ ಪ್ರಶಸ್ತಿ ಪುರಸ್ಕøತರು.

ಹಿಂದೂಸ್ಥಾನಿ ಸಂಗೀತ ವಿಭಾಗದಲ್ಲಿ ಗುಲಬರ್ಗಾದ ಮಹದೇವಪ್ಪ ಪೂಜಾರ, ಬೆಳಗಾಂನ ರವೀಂದ್ರ ಕಾಟೋಟಿ - ಹಾರ್ಮೋನಿಯಂ ಮತ್ತು ಉತ್ತರಕನ್ನಡದ ಅನಂತ ಭಾಗವತ್ ಗಾಯನ ವಿಭಾಗದಲ್ಲಿ ಆಯ್ಕೆಯಾಗಿದ್ದಾರೆ.

ನೃತ್ಯ  ವಿಭಾಗದಲ್ಲಿ ಬೆಳಗಾಂನ ಟಿ. ರವೀಂದ್ರ ಶರ್ಮ, ಬೆಂಗಳೂರಿನ ಶ್ರೀಮತಿ ಅನುರಾಧ ವಿಕ್ರಾಂತ್, ಬೆಂಗಳೂರಿನ ಸುಗ್ಗನಹಳ್ಳಿ ಷಡಾಕ್ಷರಿ, ಬೆಂಗಳೂರಿನ ಬಿ,ಆರ್. ಹೇಮಂತ ಕುಮಾರ್ - ನೃತ್ಯಕ್ಕೆ ಪಿಟೀಲು ವಿಭಾಗದಲ್ಲಿ ಆಯ್ಕೆಯಾಗಿದ್ದಾರೆ.

ಸುಗಮ ಸಂಗೀತ ವಿಭಾಗದಲ್ಲಿ ರಾಯಚೂರಿನ ಸೂಗೂರೇಶ ಅಸ್ಕಿಹಾಳ್, ಬೆಂಗಳೂರಿನ ಎನ್.ಎಲ್.ಶಂಕರ್ - ಪಕ್ಕವಾದ್ಯ ತಬಲಾ ವಿಭಾಗದಲ್ಲಿ, ಕಥಾಕೀರ್ತನ ವಿಭಾಗದಲ್ಲಿ ಕೋಲಾರದ ಕೆ.ಎನ್.ಕೃಷ್ಣಪ್ಪ, ಗಮಕ ವಿಭಾಗದಲ್ಲಿ  ಹಾಸನದ ಶ್ರೀಮತ ರತ್ನಾಮೂರ್ತಿ ವ್ಯಾಖ್ಯಾನ ಹಾಗೂ ಸಂಘಸಂಸ್ಥೆ ವಿಬಾಗದಲ್ಲಿ ಗದಗದ ವೀರೇಶ್ವರ ಪುಣ್ಯಾಶ್ರಮ ಮತ್ತು ಬೆಂಗಳೂರಿನ ಸುನಾದ ನಾದ ಕಲ್ಚರಲ್ ಸೆಂಟರ್ ಇವರುಗಳು ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ರಿಜಿಸ್ಟ್ರಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ