Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರೀಯ ಸೇವಾ ಯೋಜನೆಯಿಂದ ಸೇವಾ ಮನೋಭಾವ ಜಾಗೃತ-ಉದಯ್ ಆರಾಧ್ಯ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ತೂಬಗೆರೆ ಯಲ್ಲಿ ಶಿಕ್ಷಣದೊಂದಿಗೆ ಸೇವೆ ಮತ್ತು ಶಿಕ್ಷಣದೊಂದಿಗೆ ವ್ಯಕ್ತಿತ್ವ ವಿಕಸನ ಎಂಬ ಎರಡು ಧ್ಯೇಯಗಳೊಂದಿಗೆ ಗಾಂಧೀಜಿಯವರ ಜನ್ಮ ಶತಮಾನೋತ್ಸವ ಸಂದರ್ಭದಲ್ಲಿ ಆರಂಭವಾದ ರಾಷ್ಟ್ರೀಯ ಸೇವಾ ಯೋಜನೆಯಿಂದ ಸಮಾಜದಲ್ಲಿ ಸೇವಾ ಮನೋಭಾವನೆ ಜಾಗೃತವಾಗುತ್ತಿದೆ ಎಂದು ತೂಬಗೆರೆ ಹೋಬಳಿ ಕಸಾಪ ಗೌರವ ಕಾರ್ಯದರ್ಶಿ ಉದಯ ಆರಾಧ್ಯ ಅಭಿಪ್ರಾಯ ಪಟ್ಟರು.


ಬೆಂಗಳೂರಿನ ಉತ್ತರ ವಿಶ್ವವಿದ್ಯಾನಿಲಯ ಪ್ರಥಮ ದರ್ಜೆ ಕಾಲೇಜು ದೊಡ್ಡಬಳ್ಳಾಪುರದ , ರಾಷ್ಟ್ರೀಯ ಸೇವಾ ಯೋಜನಾ ಘಟಕ (NSS) ವತಿಯಿಂದ ತೂಬಗೆರೆ ಗ್ರಾಮದಲ್ಲಿ ಆಯೋಜಿಸಿದ್ದ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಶಿಬಿರಾರ್ಥಿಗಳು ಇಲ್ಲಿ ಕಲಿತ ತತ್ವಗಳನ್ನು ಜೀವನದುದ್ದಕ್ಕೂ ಅಳವಡಿಸಿಕೊಳ್ಳುಬೇಕು.ಈ ಶಿಬಿರದ ಅವಧಿಯಲ್ಲಿ ಗ್ರಾಮಾಂತರ ಪ್ರದೇಶದ ಜನಜೀವನ ಒಡನಾಟ ಹೇಗಿದೆ ಅವರ ಕಷ್ಟ ಸುಖಗಳೇನು ಎಂಬುದು ನಿಮಗೆ ಅರಿವಾಗಿದೆ ಮುನ್ನೊಂದು ದಿನ ನೀವು ಒಳ್ಳೆಯ ಸ್ಥಾನ ದೊರೆತ ಸಂದರ್ಭದಲ್ಲಿ ಈ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಶ್ರಮಿಸಿ ಎಂದು ಕರೆ ನೀಡಿದರು.

ಹಿರಿಯ ಕನ್ನಡಪರ ಹೋರಾಟಗಾರ ತೂಬಗೆರೆ ಷರೀಫ್ ಮಾತಾನಾಡಿ ಯುವಜನತೆಯಲ್ಲಿ ಸೇವಾ ಮನೋಭಾವ ರೂಪಿಸುವುದು ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಅಭಿಪ್ರಾಯ ಪಟ್ಟರು. 

ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ‌ ಸದಾಶಿವ ರಾಮಚಂದ್ರ ಮಾತಾನಾಡಿದ,ಶಿಬಿರದ ಯಶಸ್ವಿ ನಿರ್ವಹಣೆಗೆ ಕಾರಣರಾದ ಯೋಜನಾಧಿಕಾರಿಗಳು ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಶಿಬಿರಾರ್ಥಿಗಳು ಏಳು ದಿನಗಳವರೆಗೆ ಗ್ರಾಮದ ಶಾಲೆ, ಆಸ್ಪತ್ರೆ, ಬಸ್ ನಿಲ್ದಾಣದಲ್ಲಿ  ಶ್ರಮದಾನ ಹಾಗೂ ಸುತ್ತ್ತಲಿನ ಪ್ರದೇಶದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ