Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಂಕರಾಚಾರ್ಯರು ಸನಾತನ ಧರ್ಮ ಸಂಸ್ಕೃತಿಯ ಪ್ರಚಾರ ಏಳಿಗೆಗೆ ಕಾರಣೀಕೃತರು-ಜಗದೀಪ್ ಧನಕರ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸನಾತನ ಧರ್ಮ ಸಂಸ್ಕೃತಿಯ ಪ್ರಚಾರ ಏಳಿಗೆಗೆ ಕಾರಣೀಕೃತರಾದವರು-ಜಗದ್ಗುರು ಶಂಕರಾಚಾರ್ಯರು. ದೇಶದುದ್ದಗಲಕ್ಕೂ ಇವರು ಸಂಚರಿಸಿ  ಶೃಂಗೇರಿ ಪೀಠವನ್ನು ಸ್ಥಾಪಿಸಿದರು ಎಂದು ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಿಳಿಸಿದರು.

ಸುವರ್ಣ ಭಾರತೀ ಶೃಂಗೇರಿ, ವೇದಾಂತಭಾರತೀ ಹಾಗೂ ಮಿಥಿಕ್ ಸೊಸೈಟಿ ವತಿಯಿಂದ ದಕ್ಷಿಣಾಮ್ನಾಯ ಶ್ರೀ ಶೃಂಗೇರಿ ಶಾರದಾಪೀಠಾಧೀಶ್ವರರಾದ ಜಗದ್ಗುರು ಶಂಕರಾಚಾರ್ಯ ಪರಮಪೂಜ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರ ಸಂನ್ಯಾಸ ಸ್ವೀಕಾರದ ಸುವರ್ಣ ಮಹೋತ್ಸವ ನಿಮಿತ್ತ ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ಹಮ್ಮಿಕೊಳ್ಳಲಾದ  ಸುವರ್ಣ ಭಾರತೀ ನಮ: ಶಿವಾಯ ಸ್ತೋತ್ರಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಮ: ಶಿವಾಯ ಸ್ತೋತ್ರಮಹಾಸಮರ್ಪಣೆ ಕಾರ್ಯಕ್ರಮಕ್ಕೆ ಸಹಸ್ರಾರು ಮಂದಿ ಆಗಮಿಸಿ ಸ್ತೋತ್ರ ಪಾರಾಯಣ ಮಾಡಿದ್ದಾರೆ. ನಾನು ವೈಯಕ್ತಿಕವಾಗಿ ಮಂತ್ರ ಪಾರಾಯಣ ಕೇಳಿ  ಮಂತ್ರಮುಗ್ಧನಾಗಿರುತ್ತೇನೆ.

ಮಂತ್ರಪಾರಾಯಣದ ಲಯ, ಸಂಯೋಜನೆ, ಆಲಿಸಿದ ನನ್ನ ಮನಸ್ಸು ಸಂತೃಷ್ಟಗೊಂಡಿತು. ಇದು  ನಮ್ಮ  ಭಾರತೀಯ ಸಂಸ್ಕೃತಿಯ ಕೊಂಡಿಯನ್ನು ಬಲಪಡಿಸುವ ಕೆಲಸವಾಗಿದೆ. ಸನಾತ ಧರ್ಮವು  ತಾಳ್ಮೆ, ಅನುಕಂಪ, ಇತರರ ಕಲ್ಯಾಣಕ್ಕೆ  ಹೆಸರಾಗಿದೆ.  ನಾವು ನಮ್ಮ ಬಗ್ಗೆ ಅಲ್ಲದೇ ಇತರರ ಒಳಿತಿನ ಬಗ್ಗೆ ಚಿಂತಿಸಬೇಕಾಗಿದೆ ಎಂದರು.

ಶೃಂಗೇರಿ ಶಾರದ ಪೀಠಾಧೀಶ್ವರರಾದ ಪರಮಪೂಜ್ಯ ಭಾರತಿ ತೀರ್ಥ ಸ್ವಾಮಿಗಳು ಕಳೆದ ಐದು ದಶಕಗಳಿಂದ ಜನಕಲ್ಯಾಣಕ್ಕಾಗಿ ಅದ್ಭುತ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಮಾರ್ಗದರ್ಶನದಿಂದ ನಾವು ಮುನ್ನೆಡೆಯುತ್ತಿರುವುದು ಅದೃಷ್ಟವೇ ಸರಿ. ಇವರ ಆಧ್ಯಾತ್ಮಿಕ ಚಿಂತನೆಗಳು ನಮ್ಮ ಮನಸ್ಸಿಗೆ ಹಾಗೂ ವಾತಾವರಣಕ್ಕೆ  ಆಹ್ಲಾದಕರ ಭಾವನೆಯನ್ನು ಉಂಟುಮಾಡುತ್ತದೆ ಎಂದರು.

ಉಪ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಮಾತನಾಡಿ, ಭಾರತೀ ತೀರ್ಥರು ಧರ್ಮ ಉಳಿಸುವ ಕೆಲಸ ಮಾಡಿದ್ದಾರೆ. ನಾವೆಲ್ಲರೂ ಭಕ್ತಿ ಸಾಗರದಲ್ಲಿ ಭಾಗಿಯಾಗಿದ್ದೇವೆ. ನಮ್ಮ ಪ್ರಯತ್ನ ವಿಫಲವಾಗಬಹುದು. ಪ್ರಾರ್ಥನೆ ವಿಫಲವಾಗುವುದಿಲ್ಲ. ಶೃಂಗೇರಿ ಮಠ ಧರ್ಮ ಉಳಿಸುವ ಕೆಲಸ ಮಾಡುತ್ತಿದೆ. ಇಡೀ ಸರ್ಕಾರ ಮಠದ ಜೊತೆಗೆ  ಇದೆ. ನನಗೂ ಮಠಕ್ಕೂ ಗುರುಭಕ್ತನ ಸಂಬಂಧ ಎಂದರು.

ಇದೇ ಸಂದರ್ಭದಲ್ಲಿ ಸಹಸ್ರಾರು  ಜನರು ಶಿವ ಪಂಚಾಕ್ಷರ  ನಕ್ಷತ್ರ ಮಾಲಾ ಸ್ತೋತ್ರವನ್ನು ಸಾಮೂಹಿಕವಾಗಿ ಪಠಿಸಿದರು.

ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ವಿ.ಸೋಮಣ್ಣ, ಸದ್ಗುರು ಶಂಕರಾಚಾರ್ಯ ಪರಮಪೂಜ್ಯ ಶ್ರೀಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು, ಪೀಠಾಧೀಶರು, ದಕ್ಷಿಣಾಮ್ನಾಯ ಶ್ರೀ ಶಾರದಾಪೀಠ, ಕೃಷ್ಣರಾಜನಗರ ಯಡತೊರೆ ಶ್ರೀ ಯೋಗಾನಂದೇಶ್ವರ ಸರಸ್ವತೀ ಮಠಾಧೀಶರಾದ ಪರಮಪೂಜ್ಯ ಶ್ರೀಶ್ರೀ ಶಂಕರಭಾರತೀ ಮಹಾಸ್ವಾಮಿಗಳು, ತತ್ಕರಕಮಲಸಂಜಾತರಾದ ಶ್ರೀ ಬ್ರಹ್ಮಾನಂದಭಾರತೀ ಸ್ವಾಮಿಗಳು, ಎಂ.ಎಸ್. ರಾಮಯ್ಯ ವಿಶ್ವವಿದ್ಯಾಲಯ ಕುಲಪತಿ ಡಾ. ಎಂ.ಆರ್. ಜಯರಾಮ್, ಬಿ.ಸಿ. ಹಿರಿಯ ನ್ಯಾಯವಾದಿ ಪ್ರಭಾಕರ್ ಹಾಗೂ ವೇದಾಂತ ಭಾರತಿಯ ಟ್ರಸ್ಟಿಗಳು ಮತ್ತು ಸಂಚಾಲನ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

 




Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ